AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಸ್ಪೈಸ್​ ಜೆಟ್ಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಯಿತು. ಟೇಕ್​ ಆಫ್​ ಆಗಿ ಅರ್ಧ ಗಂಟೆಗಳಲ್ಲೇ ಮತ್ತೆ ವಿಮಾನಗಳು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು.

ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ
ವಿಮಾನ
ನಯನಾ ರಾಜೀವ್
|

Updated on: May 26, 2024 | 2:32 PM

Share

ಲೇಹ್​ಗೆ ಹೊರಟಿದ್ದ ಸ್ಪೈಸ್​ ಜೆಟ್​(SpiceJet) ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಲೇಹ್​ಗೆ ಹೊರಟಿದ್ದ ವಿಮಾನ ಟೇಕ್​ ಆಫ್​ ಆಗಿ ಕೆಲವೇ ಸಮಯದಲ್ಲಿ ಈ ಘಟನೆ ಸಂಭವಿಸಿದೆ. G123 ವಿಮಾನವು 10.29 ಕ್ಕೆ ಟೇಕ್ ಆಫ್ ಆಗಿತ್ತು, ಬಳಿಕ 11 ಗಂಟೆ ಸುಮಾರಿಗೆ ಸುರಕ್ಷಿತವಾಗಿ ದೆಹಲಿಯಲ್ಲಿ ಲ್ಯಾಂಡಿಂಗ್​ ಮಾಡಲಾಗಿದೆ.

ಸ್ಪೈಸ್‌ಜೆಟ್ B737 ವಿಮಾನವು ದೆಹಲಿಯಿಂದ ಲೇಹ್‌ಗೆ  ಪ್ರಯಾಣ ಬೆಳೆಸುತ್ತದೆ. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು, ಪ್ರಯಾಣಿಕರು ಕೂಡ ನಿಟ್ಟುಸಿರುಬಿಟ್ಟರು.

ಕಳೆದ ವಾರ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಎಂಬ ಎರಡು ವಿಮಾನಗಳು ತಾಂತ್ರಿಕ ದೋಷಗಳಿಂದಾಗಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.

ಮತ್ತಷ್ಟು ಓದಿ: ಆಗಸದಲ್ಲಿ ತೀವ್ರವಾಗಿ ಅಲುಗಾಡಿದ ವಿಮಾನ : ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಾಯ

ಮೇ 19 ರಂದು, 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯೊಂದಿಗೆ ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು.

ಎರಡು ದಿನಗಳ ಹಿಂದೆ, ಮೇ 17 ರಂದು, 175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅದರ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಹಿಂತಿರುಗಿ ರಾಷ್ಟ್ರ ರಾಜಧಾನಿಯಲ್ಲಿ ಇಳಿಯಿತು. ಮೇ 1 ರಂದು, ಭುವನೇಶ್ವರದಿಂದ ನವದೆಹಲಿಗೆ ಹೊರಟಿದ್ದ ವಿಸ್ತಾರ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಿಂತಿರುಗಿತು ಮತ್ತು ವಿಮಾನವು ಆಲಿಕಲ್ಲು ಮಳೆಗೆ ಸಿಲುಕಿ ಹಾನಿಗೊಳಗಾದ ನಂತರ ತುರ್ತು ಭೂಸ್ಪರ್ಶ ಮಾಡಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!