AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಇದ್ದರೆ ಎಲ್ಲವೂ ಸಾಧ್ಯ, ಪ್ರಧಾನಿಯ ಹೊಗಳಿದ ಜೆಡಿಯು ನಾಯಕ

ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂದು ನಿತೀಶ್​ ಕುಮಾರ್(Nitish Kumar) ಅವರ ಜೆಡಿಯು ಪಕ್ಷದ ಮುಖಂಡರೊಬ್ಬರು ಹೇಳಿಕೆ ನೀಡಿದ್ದು, ಬಿಹಾರದಲ್ಲಿ ಗದ್ದಲ ಶುರುವಾಗಿದೆ. ಬಿಜೆಪಿಯು ಛತ್ತೀಸ್​ಗಢ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ, ಈ ಹಿನ್ನೆಲೆಯಲ್ಲಿ ಸೀತಾಮರ್ಹಿ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಸುನಿಲ್ ಕುಮಾರ್ ಪಿಂಟು ಈ ಹೇಳಿಕೆ ನೀಡಿದ್ದಾರೆ.

ಮೋದಿ ಇದ್ದರೆ ಎಲ್ಲವೂ ಸಾಧ್ಯ, ಪ್ರಧಾನಿಯ ಹೊಗಳಿದ ಜೆಡಿಯು ನಾಯಕ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Dec 05, 2023 | 11:33 AM

Share

ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂದು ನಿತೀಶ್​ ಕುಮಾರ್(Nitish Kumar) ಅವರ ಜೆಡಿಯು ಪಕ್ಷದ ಮುಖಂಡರೊಬ್ಬರು ಹೇಳಿಕೆ ನೀಡಿದ್ದು, ಬಿಹಾರದಲ್ಲಿ ಗದ್ದಲ ಶುರುವಾಗಿದೆ. ಬಿಜೆಪಿಯು ಛತ್ತೀಸ್​ಗಢ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ, ಈ ಹಿನ್ನೆಲೆಯಲ್ಲಿ ಸೀತಾಮರ್ಹಿ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಸುನಿಲ್ ಕುಮಾರ್ ಪಿಂಟು ಈ ಹೇಳಿಕೆ ನೀಡಿದ್ದಾರೆ.

ಬಿಜೆಪಿಯು ರಾಜಸ್ಥಾನ, ಛತ್ತೀಸ್​ಗಢ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನ್ನು ಅಧಿಕಾರದಿಂದ ಕೆಳಗಿಳಿಸಿದೆ. ಚುನಾವಣೆಯ ಫಲಿತಾಂಶ ನೋಡಿದರೆ ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂಬುದು ಸಾಬೀತಾಗುತ್ತದೆ. ವಿಧಾನಸಭೆಯಲ್ಲಿ ಬಿಜೆಪಿ ಈ ಘೋಷಣೆಯನ್ನು ಮಾಡಿತ್ತು ಎಂದು ಪಿಂಟು ಹೇಳಿದ್ದಾರೆ.

ಪಿಂಟು ಅವರ ಹೇಳಿಕೆಗೆ ಜೆಡಿಯು ತಿರುಗೇಟು ನೀಡಿದೆ, ಪಿಂಟು ಅವರು ಪ್ರಧಾನಿ ಮೋದಿಯವರ ಪ್ರಭಾವಕ್ಕೆ ಒಳಗಾಗಿದ್ದರೆ ಲೋಕಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಕ್ಷದ ವಕ್ತಾರ ನೀರಜ್ ಕುಮಾರ್ ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ನಿತೀಶ್ ಕುಮಾರ್ ಆಹಾರದಲ್ಲಿ ಏನೋ ಬೆರೆಸಲಾಗುತ್ತಿದೆ: ಜಿತನ್ ಮಾಂಝಿ

ಪ್ರಭಾವಿತರಾಗಿದ್ದರೆ ಲೋಕಸಭೆ ಚುನಾವಣೆಗೂ ಮುನ್ನ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು.ಆದಷ್ಟು ಬೇಗ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರ್ ಹೇಳಿದ್ದಾರೆ.

ಬಿಜೆಪಿ ವಕ್ತಾರ ಕುಂಟಲ್ ಕೃಷ್ಣ ಪಿಂಟು ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಜೆಡಿಯು ಸಂಸದರು ನೀಡಿರುವ ಹೇಳಿಕೆಯು ಪ್ರಸ್ತುತ ಪರಿಸ್ಥಿತಿ ಏನೆಂದು ಪ್ರತಿಯೊಬ್ಬ ವ್ಯಕ್ತಿಯು ಅರ್ಥಮಾಡಿಕೊಂಡಿದ್ದಾನೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಜೆಡಿಯು ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡು ಎನ್​ಡಿಎಯಿಂದ ಹೊರನಡೆದಿತ್ತು. ಬಿಜೆಪಿ ಮಿತ್ರ ಪಕ್ಷವಾಗಿದ್ದ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿದರು ಮತ್ತು ಮತ್ತೆ ಮುಖ್ಯಮಂತ್ರಿಯಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Tue, 5 December 23

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ