AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yellow Fungus: ಬ್ಲ್ಯಾಕ್, ವೈಟ್ ಫಂಗಸ್ ಬಳಿಕ ಯೆಲ್ಲೋ ಫಂಗಸ್ ಪತ್ತೆ; ರೋಗ ಲಕ್ಷಣ ಹಾಗೂ ಇತರ ಮಾಹಿತಿ ಇಲ್ಲಿದೆ

ದೇಹದಲ್ಲಿ ಆಂತರಿಕವಾಗಿ ಆರಂಭವಾಗುವ ಈ ಖಾಯಿಲೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೇ ಹೋದರೆ ಮಾರಕವಾಗುವ ಸಾಧ್ಯತೆ ಇದೆ. ಹಾಗಾಗಿ, ಯೆಲ್ಲೋ ಫಂಗಸ್​ನ್ನು ಕಡೆಗಣಿಸುವುದು ಒಳ್ಳೆಯದಲ್ಲ.

Yellow Fungus: ಬ್ಲ್ಯಾಕ್, ವೈಟ್ ಫಂಗಸ್ ಬಳಿಕ ಯೆಲ್ಲೋ ಫಂಗಸ್ ಪತ್ತೆ; ರೋಗ ಲಕ್ಷಣ ಹಾಗೂ ಇತರ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 21, 2021 | 10:00 AM

Share

ದೆಹಲಿ: ಕೊರೊನಾ ಸೋಂಕು ಎರಡನೇ ಅಲೆಯ ನಡುವೆ ಹಲವು ವೈದ್ಯಕೀಯ ಸವಾಲುಗಳು ಎದುರಾಗಿದೆ. ಕೊವಿಡ್-19 ಸೋಂಕಿನಿಂದಾಗಿ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್​ನಂತಹ ಖಾಯಿಲೆಗಳು ದೇಹಸೇರುತ್ತಿದೆ. ದೇಹದ ಸಕ್ಕರೆ ಪ್ರಮಾಣವೂ ಅಧಿಕವಾಗಿ ಕೆಲವಷ್ಟು ಮಂದಿ ಸಕ್ಕರೆ ಖಾಯಿಲೆಗೆ ತುತ್ತಾಗಿದ್ದಾರೆ. ಈ ಎಲ್ಲದರ ನಡುವೆ ಈಗ ಮತ್ತೊಂದು ಸಮಸ್ಯೆ ಕಂಡುಬಂದಿದೆ. ದೇಶದಲ್ಲಿ ಮೊತ್ತ ಮೊದಲ ಯೆಲ್ಲೋ ಫಂಗಸ್ ಪ್ರಕರಣ ಪತ್ತೆಯಾಗಿದೆ. ಘಾಜಿಯಾಬಾದ್​ನಲ್ಲಿ ಸೋಮವಾರ (ಮೇ 24) ಮೊದಲ ಯೆಲ್ಲೋ ಫಂಗಸ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಯೆಲ್ಲೋ ಫಂಗಸ್ ಬ್ಲ್ಯಾಕ್ ಮತ್ತು ವೈಟ್ ಫಂಗಸ್​ಗಳಿಗಿಂತ ಹೆಚ್ಚು ಅಪಾಯಕಾರಿ ಎಂಬ ಮಾಹಿತಿ ಲಭ್ಯವಾಗಿದೆ. ಆಲಸ್ಯ, ತೂಕ ಇಳಿಕೆಯಾಗುವುದು, ಹಸಿವು ಕಡಿಮೆ ಇರುವುದು ಅಥವಾ ಹಸಿವೆಯೇ ಆಗದಿರುವುದು ಯೆಲ್ಲೋ ಫಂಗಸ್​ನ ಲಕ್ಷಣಗಳಾಗಿರಲಿವೆ. ದೇಹದಲ್ಲಿ ಗಾಯಗಳಿದ್ದರೆ ಗುಣವಾಗುವ ಪ್ರಮಾಣ ಯೆಲ್ಲೋ ಫಂಗಸ್​ನಿಂದಾಗಿ ಕಡಿಮೆ ಆಗುವ ಸಾಧ್ಯತೆಯಿದೆ. ಅಂಗಾಂಗ ವೈಫಲ್ಯ ಅಥವಾ ಕಣ್ಣುಗಳ ಸಮಸ್ಯೆ ಕಂಡುಬರಬಹುದಾಗಿದೆ.

ದೇಹದಲ್ಲಿ ಆಂತರಿಕವಾಗಿ ಆರಂಭವಾಗುವ ಈ ಖಾಯಿಲೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೇ ಹೋದರೆ ಮಾರಕವಾಗುವ ಸಾಧ್ಯತೆ ಇದೆ. ಹಾಗಾಗಿ, ಯೆಲ್ಲೋ ಫಂಗಸ್​ನ್ನು ಕಡೆಗಣಿಸುವುದು ಒಳ್ಳೆಯದಲ್ಲ. ಯೆಲ್ಲೋ ಫಂಗಸ್​ಗೆ ಕೂಡ ಅಂಪೋಟೆರಿಸಿನ್ ಬಿ ಇಂಜೆಕ್ಷನ್ ಔಷಧವಾಗಿದೆ.

ಸ್ವಚ್ಛತೆ ಇಲ್ಲದಿರುವುದು, ಅತಿಯಾದ ತೇವಾಂಶ ಇತ್ಯಾದಿ ಯೆಲ್ಲೋ ಫಂಗಸ್​ಗೆ ಕಾರಣವಾಗಬಹುದು. ಕೇಂದ್ರ ಆರಓಗ್ಯ ಸಚಿವಾಲಯ ಸೋಮವಾರ ಬೆಳಗ್ಗೆ ನೀಡಿದ ವರದಿಯ ಪ್ರಕಾರ, ಇಲ್ಲಿಯವರೆಗೆ 5,424 ಮೈಕೊರ್​ಮೈಕೊಸಿಸ್ ಪ್ರಕರಣಗಳು ದೇಶದ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಖಲಾಗಿದೆ. 5,424 ಪ್ರಕರಣಗಳ ಪೈಕಿ 4,556 ರೋಗಿಗಳು ಕೊರೊನಾ ಸೋಂಕಿಗೆ ತುತ್ತಾದವರಾಗಿದ್ದಾರೆ. ಹಾಗೂ ಶೇ. 55ರಷ್ಟು ರೋಗಿಗಳು ಸಕ್ಕರೆ ಖಾಯಿಲೆಯನ್ನು ಹೊಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಇಲ್ಲದವರಲ್ಲಿಯೂ ಬ್ಲ್ಯಾಕ್ ಫಂಗಸ್ ಪತ್ತೆ.. ಹೊರ ಬೀಳುತ್ತಿದೆ ಭಯಾನಕ ಸತ್ಯ

ಬ್ಲ್ಯಾಕ್​ ಫಂಗಸ್​ ಸೋಂಕು ಬಾರದಂತೆ ತಡೆಗಟ್ಟಲು ಇಲ್ಲಿದೆ ಸರಳ ಸಲಹೆಗಳು

Published On - 3:26 pm, Mon, 24 May 21

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು