AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಒಬಿಸಿ ಅಲ್ಲ ಎಂದ ರಾಹುಲ್ ಗಾಂಧಿ; ಫ್ಯಾಕ್ಟ್ ಚೆಕ್ ಮಾಡಿ ನಿಜ ಸಂಗತಿ ತಿಳಿಸಿದ ಸರ್ಕಾರ

ಒಡಿಶಾದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಒಬಿಸಿ ಅಲ್ಲ ಎಂದು ಹೇಳಿದ್ದರು. ರಾಹುಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ, ಪ್ರಧಾನಿ ಜಾತಿಯ ಕುರಿತು ರಾಹುಲ್ ಗಾಂಧಿಯವರ ಹೇಳಿಕೆಗೆ ಸಂಬಂಧಿಸಿದ ಸಂಗತಿಗಳು" ಎಂಬ ಶೀರ್ಷಿಕೆಯ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ಮೋದ್ ಘಾಂಚಿ ಜಾತಿ (ಮೋದಿ ಸೇರಿರುವ ಉಪ-ಗುಂಪು) "ಗುಜರಾತ್ ಸರ್ಕಾರದ ಪಟ್ಟಿಯಲ್ಲಿ ಸಾಮಾಜಿಕವಾಗಿ (ಮತ್ತು) ಶೈಕ್ಷಣಿಕವಾಗಿ ಹಿಂದುಳಿದ ವರ್ಗ ಮತ್ತು OBCಯಲ್ಲಿದೆ ಎಂದಿದೆ.

ಪ್ರಧಾನಿ ಮೋದಿ ಒಬಿಸಿ ಅಲ್ಲ ಎಂದ ರಾಹುಲ್ ಗಾಂಧಿ; ಫ್ಯಾಕ್ಟ್ ಚೆಕ್ ಮಾಡಿ ನಿಜ ಸಂಗತಿ ತಿಳಿಸಿದ ಸರ್ಕಾರ
ಮೋದಿ- ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Feb 08, 2024 | 6:04 PM

Share

ದೆಹಲಿ ಫೆಬ್ರುವರಿ 08: ಪ್ರಧಾನಿ ನರೇಂದ್ರ ಮೋದಿ (Narendra Modi) ಒಬಿಸಿ (OBC- ಇತರೆ ಹಿಂದುಳಿದ ವರ್ಗದ) ಸಮುದಾಯದಲ್ಲಿ ಹುಟ್ಟಿಲ್ಲ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿಕೆಯ ನಂತರ ಸರ್ಕಾರ ಗುರುವಾರ ಮಧ್ಯಾಹ್ನ ರಾಹುಲ್ ಗಾಂಧಿಗೆ ತಿರುಗೇಟು ನೀಡಿದೆ. ಒಡಿಶಾದಲ್ಲಿ ತಮ್ಮ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ (Bharat Jodo Nyay Yatra) ವೇಳೆ ಮಾತನಾಡಿದ ರಾಹುಲ್ ಪ್ರಧಾನಿಯವರು ತಮ್ಮನ್ನು ಒಬಿಸಿ ಸದಸ್ಯ ಎಂದು ಗುರುತಿಸುವ ಮೂಲಕ ಜನರನ್ನು “ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಮೋದಿಯವರು “ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಬಿಸಿ ಪಟ್ಟಿಯಲ್ಲಿ ಸೇರಿಸಲಾದ ಘಾಂಚಿ ಜಾತಿಯ ಕುಟುಂಬದಲ್ಲಿ ಜನಿಸಿದ್ದು ಎಂದಿದ್ದಾರೆ.

“ಪ್ರಧಾನಿ ಜಾತಿಯ ಕುರಿತು ರಾಹುಲ್ ಗಾಂಧಿಯವರ ಹೇಳಿಕೆಗೆ ಸಂಬಂಧಿಸಿದ ಸಂಗತಿಗಳು” ಎಂಬ ಶೀರ್ಷಿಕೆಯ ಸಂಕ್ಷಿಪ್ತ ಟಿಪ್ಪಣಿಯಲ್ಲಿ,  ಮೋದ್ ಘಾಂಚಿ ಜಾತಿ (ಮೋದಿ ಸೇರಿರುವ ಉಪ-ಗುಂಪು) “ಗುಜರಾತ್ ಸರ್ಕಾರದ ಪಟ್ಟಿಯಲ್ಲಿ ಸಾಮಾಜಿಕವಾಗಿ (ಮತ್ತು) ಶೈಕ್ಷಣಿಕವಾಗಿ ಹಿಂದುಳಿದ ವರ್ಗ ಮತ್ತು OBCಯಲ್ಲಿದೆ ಎಂದಿದೆ. ಗುಜರಾತ್‌ನಲ್ಲಿ ನಡೆಸಿದ ಸಮೀಕ್ಷೆಯ ನಂತರ, ಮಂಡಲ್ ಆಯೋಗವು ಸೂಚ್ಯಂಕ 91(A) ಅಡಿಯಲ್ಲಿ ಒಬಿಸಿಗಳ ಪಟ್ಟಿಯನ್ನು ತಯಾರಿಸಿತು. ಇದರಲ್ಲಿ ಮೋದ್ ಘಾಂಚಿ ಜಾತಿಯೂ ಸೇರಿದೆ. ಭಾರತ ಸರ್ಕಾರದ ಗುಜರಾತ್‌ನ 105 OBC ಜಾತಿಗಳ ಪಟ್ಟಿಯು ಮೋದ್ ಘಾಂಚಿಯನ್ನು ಸಹ ಒಳಗೊಂಡಿದೆ ಎಂದು ಅದು ಹೇಳಿದೆ.

ಜುಲೈ 25, 1994 ರಂದು ಮೋದಿಯವರ ತವರು ರಾಜ್ಯವಾದ ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಬಿಸಿಗಳ ಪಟ್ಟಿಯಲ್ಲಿ ಉಪ-ಗುಂಪನ್ನು ಸೇರಿಸುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರವು ರಾಹುಲ್ ಗಾಂಧಿಗೆ ನೆನಪಿಸಿದೆ.

ಏಪ್ರಿಲ್ 4, 2000 ರ ಭಾರತ ಸರ್ಕಾರದ ಅಧಿಸೂಚನೆಯ ಪ್ರಕಾರ ಅದೇ ಉಪ-ಗುಂಪನ್ನು ಒಬಿಸಿ (ಪಟ್ಟಿ) ಸೇರಿಸಲಾಗಿದೆ. ಎರಡೂ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದಾಗ ನರೇಂದ್ರ ಮೋದಿ ಅವರು ಅಧಿಕಾರದಲ್ಲಿ ಇರಲಿಲ್ಲ ಮತ್ತು ಆ ಸಮಯದಲ್ಲಿ ಕಾರ್ಯನಿರ್ವಾಹಕ ಕಚೇರಿಯನ್ನು ಹೊಂದಿರಲಿಲ್ಲ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಜಾತಿ ಗಣತಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಪ್ರತಿಪಕ್ಷಗಳು ಜಗಳವಾಡುತ್ತಿರುವಾಗ ಪ್ರಧಾನಿಯವರ ಜಾತಿಯ ಮೇಲೆ ರಾಹುಲ್ ಗಾಂಧಿಯವರ ಈ ವಾಗ್ದಾಳಿ ನಡೆದಿದೆ. ಒಬಿಸಿ ಮತ್ತು ಇಬಿಸಿ, ಅಥವಾ ತೀರಾ ಹಿಂದುಳಿದ ವರ್ಗಗಳು ರಾಜ್ಯದ ಜನಸಂಖ್ಯೆಯ ಶೇ.60ಕ್ಕೂ ಹೆಚ್ಚು ಪಾಲು ಹೊಂದಿದ್ದು, ಅವರನ್ನು ದೊಡ್ಡ ವೋಟ್ ಬ್ಯಾಂಕ್‌ಗಳನ್ನಾಗಿ ಮಾಡಿರುವುದನ್ನು ದೃಢಪಡಿಸಿದ ಬಿಹಾರ ಸರ್ಕಾರದ ರಾಜ್ಯಾದ್ಯಂತ ಜಾತಿ ಸಮೀಕ್ಷೆಯ ನಂತರ ಕಳೆದ ವರ್ಷ ಈ ವಿಷಯವು ಭಾರೀ ಸುದ್ದಿಯಾಗಿತ್ತು.

ಈ ವಾರ ರಾಹುಲ್ ಗಾಂಧಿಯವರು ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಸುಪ್ರೀಂ ಕೋರ್ಟ್ ಆದೇಶದ 50 ಪರ್ಸೆಂಟ್ ಮಿತಿಯನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ.

ಒಬಿಸಿ, ದಲಿತರು, ಬುಡಕಟ್ಟು ಜನಾಂಗದವರಿಗೆ ಹಕ್ಕು ನೀಡುವ ಸಮಯ ಬಂದಾಗ ಮೋದಿಯವರು ಜಾತಿ ಇಲ್ಲ ಎಂದು ಹೇಳುತ್ತಾರೆ. ಆದರೆ ಮತ ಪಡೆಯುವ ಸಮಯ ಬಂದಾಗ ತಾವು ಒಬಿಸಿ ಎಂದು ಹೇಳಿಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ಸೋಮವಾರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಪ್ರಧಾನಿ, ಕಾಂಗ್ರೆಸ್ ಧೀಮಂತ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮೀಸಲಾತಿಯನ್ನು ಬೆಂಬಲಿಸಲಿಲ್ಲ ಎಂದು ಹೇಳಿದರು. “ಎಸ್‌ಸಿ, ಎಸ್‌ಟಿ ಅಥವಾ ಒಬಿಸಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಸಿಕ್ಕರೆ ಸರ್ಕಾರಿ ಕೆಲಸದ ಗುಣಮಟ್ಟ ಕುಸಿಯುತ್ತದೆ ಎಂದು ನೆಹರೂಜಿ ಹೇಳುತ್ತಿದ್ದರು. ಅವರು ನೇಮಕಾತಿಯನ್ನೂ ನಿಲ್ಲಿಸಿದರು. ನೆಹರೂಜಿ ಹೇಳಿದ್ದು ಅಂದಿನಿಂದಲೂ ಕಾಂಗ್ರೆಸ್‌ಗೆ ವೇದವಾಕ್ಯ ಆಗಿದೆ. ನಿಮ್ಮ ಅಂತಹ ಉದಾಹರಣೆಗಳ ಮೂಲಕ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದ ಎಂದು ಪ್ರಧಾನಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಸಾಮಾನ್ಯ ವರ್ಗಕ್ಕೆ ಸೇರಿದವರು, ಅವರು ಜಾತಿಯ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ಯಾವಾಗಲೂ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಹಿತಾಸಕ್ತಿಗೆ ವಿರುದ್ಧವಾಗಿದೆ. ಆದರೆ ನಾವು ಯಾವಾಗಲೂ ಅವರಿಗೆ ಆದ್ಯತೆ ನೀಡಿದ್ದೇವೆಮೊದಲು ದಲಿತರು ಮತ್ತು ಈಗ ಆದಿವಾಸಿಗಳು. ನಮ್ಮ ಯೋಜನೆಗಳ ಫಲಾನುಭವಿಗಳು ಯಾರು? ನಮ್ಮ ಎಲ್ಲಾ ಕೆಲಸಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ” ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು