AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾಂಗಣದಲ್ಲಿ ತರಬೇತಿ ನಿಲ್ಲಿಸಿ ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದ ಐಎಎಸ್​ ಅಧಿಕಾರಿ ಲಡಾಖ್​ಗೆ ವರ್ಗ, ಪತ್ನಿ ಅರುಣಾಚಲ ಪ್ರದೇಶಕ್ಕೆ

ಕ್ರೀಡಾಂಗಣವನ್ನು ಖಿರ್​ವಾರ್ ಮತ್ತು ಅವರ ಪತ್ನಿ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಗೃಹ ಇಲಾಖೆಯು ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿತ್ತು.

ಕ್ರೀಡಾಂಗಣದಲ್ಲಿ ತರಬೇತಿ ನಿಲ್ಲಿಸಿ ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದ ಐಎಎಸ್​ ಅಧಿಕಾರಿ ಲಡಾಖ್​ಗೆ ವರ್ಗ, ಪತ್ನಿ ಅರುಣಾಚಲ ಪ್ರದೇಶಕ್ಕೆ
ದೆಹಲಿ ಕ್ರೀಡಾಂಗಣದಲ್ಲಿ ವಾಕ್ ಮಾಡುತ್ತಿರುವ ಐಎಎಸ್ ಅಧಿಕಾರಿ ಸಂಜೀವ್ ಖಿರ್​ವಾರ್
TV9 Web
| Edited By: |

Updated on:May 27, 2022 | 7:24 AM

Share

ದೆಹಲಿ: ಕ್ರೀಡಾಂಗಣದಲ್ಲಿ ತರಬೇತಿ ನಿಲ್ಲಿಸುವಂತೆ ಸೂಚಿಸಿ ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದ ಐಎಎಸ್ ಅಧಿಕಾರಿಗೆ ವರ್ಗಾವಣೆಯ ಶಿಕ್ಷೆ ವಿಧಿಸಲಾಗಿದೆ. ಅವರ ಪತ್ನಿಯನ್ನು ಅರುಣಾಚಲ ಪ್ರದೇಶಕ್ಕೆ ವರ್ಗಾಯಿಸಲಾಗಿದೆ. ದೆಹಲಿಯ ತ್ಯಾಗರಾಜ ಕ್ರೀಡಾಂಗಣದಲ್ಲಿ (Thyagaraj Stadium) ಅಧಿಕಾರಿಯಿಂದ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿರುವ ಕುರಿತು ‘ಇಂಡಿಯನ್ ಎಕ್ಸ್​ಪ್ರೆಸ್’ ದಿನಪತ್ರಿಕೆಯು ವರದಿ ಪ್ರಕಟಿಸಿತ್ತು.

ಅಧಿಕಾರಿಗಳ ವರ್ಗಾವಣೆ ಕುರಿತು ಆದೇಶ ಹೊರಡಿಸಿರುವ ಗೃಹ ಇಲಾಖೆಯು ‘1994ನೇ ಬ್ಯಾಚ್ ಐಎಎಸ್ ಅಧಿಕಾರಿ ಸಂಜೀವ್ ಖಿರ್​ವಾರ್​ ಅವರನ್ನು ಲಡಾಖ್​ಗೆ ಮತ್ತು ಅವರ ಪತ್ನಿಯನ್ನು ಅರುಣಾಚಲ ಪ್ರದೇಶಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ’ ಎಂದು ಹೇಳಿದೆ. ತ್ಯಾಗರಾಜ್ ಕ್ರೀಡಾಂಗಣದ ಸೌಲಭ್ಯಗಳನ್ನು ಖಿರ್​ವಾರ್ ಮತ್ತು ಅವರ ಪತ್ನಿ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಗೃಹ ಇಲಾಖೆಯು ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿತ್ತು ಎಂದು ಮೂಲಗಳು ಹೇಳಿವೆ.

ಈ ಸೂಚನೆಯಂತೆ ಮುಖ್ಯ ಕಾರ್ಯದರ್ಶಿ ನಿನ್ನೆ (ಮೇ 26) ವರದಿ ಸಲ್ಲಿಸಿದ್ದರು. ಈ ವರದಿ ಸಲ್ಲಿಕೆಯ ನಂತರ ಗೃಹ ಇಲಾಖೆಯು ಐಎಎಸ್ ಅಧಿಕಾರಿಯನ್ನು ವರ್ಗಾಯಿಸುವ ನಿರ್ಧಾರ ಪ್ರಕಟಿಸಿದೆ. ಸಂಜೀವ್ ಖಿರ್​ವಾರ್ ಪ್ರಸ್ತುತ ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ (ಕಂದಾಯ) ಸೇವೆ ಸಲ್ಲಿಸುತ್ತಿದ್ದರು. ಕ್ರೀಡಾಪಟುಗಳಿಂದ ಸೌಲಭ್ಯ ಕಿತ್ತುಕೊಂಡಿದ್ದ ಅಧಿಕಾರಿಯ ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ‘ರಾಜ್ಯ ಸರ್ಕಾರ ನಿರ್ವಹಿಸುವ ಎಲ್ಲ ಸೌಲಭ್ಯಗಳು ರಾತ್ರಿ 10 ಗಂಟೆಯವರೆಗೆ ತೆರೆದಿರಬೇಕು’ ಎಂದು ಸೂಚಿಸಿದ್ದರು.

‘ವಾತಾವರಣದಲ್ಲಿ ಉಷ್ಣಾಂಶವು ಹೆಚ್ಚಾಗಿರುವುದರಿಂದ ಹಗಲುಹೊತ್ತಿನಲ್ಲಿ ಕ್ರೀಡಾ ತರಬೇತಿ ಪಡೆದುಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಎಲ್ಲ ಕ್ರೀಡಾಂಗಣಗಳು ರಾತ್ರಿ 10 ಗಂಟೆಯವರೆಗೆ ತರಬೇತಿ ಮುಂದುವರಿಸಬೇಕು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:22 am, Fri, 27 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ