AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಕಬಳಿಕೆ ಆರೋಪ: ಬಿಕೆಯು ಒಡಕಿನ ಬಳಿಕ ಟಿಕಾಯತ್ ಸಹೋದರರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಸಿಸೌಲಿ ಗ್ರಾಮದ ನಿವಾಸಿಗಳಲ್ಲಿ ಒಬ್ಬರಾದ ರಾಹುಲ್ ಮುಖಿಯಾ ಅವರು ಬಿಕೆಯು ಮುಖ್ಯಸ್ಥ ನರೇಶ್ ಮತ್ತು ಅವರ ಸಹೋದರ ರಾಕೇಶ್ ಟಿಕಾಯತ್ ಸರ್ಕಾರಿ ಭೂಮಿಯನ್ನು "ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ" ಎಂದು ಆರೋಪಿಸಿದ್ದಾರೆ.

ಸರ್ಕಾರಿ ಭೂಮಿ ಕಬಳಿಕೆ ಆರೋಪ: ಬಿಕೆಯು ಒಡಕಿನ ಬಳಿಕ ಟಿಕಾಯತ್ ಸಹೋದರರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ
ರಾಕೇಶ್ ಟಿಕಾಯತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 23, 2022 | 4:16 PM

Share

ದೆಹಲಿ: ಭಾರತೀಯ ಕಿಸಾನ್ ಯೂನಿಯನ್ (BKU) ನಲ್ಲಿ ಒಡಕಿನ ಬಳಿಕ ಟಿಕಾಯತ್ ಸಹೋದರರು ಈಗ ಸರ್ಕಾರಿ ಭೂಮಿಯನ್ನು ಕಬಳಿಸಿದ ಆರೋಪದ  ತನಿಖೆಯನ್ನು ಎದುರಿಸುತ್ತಿದ್ದಾರೆ. ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಸಿಸೌಲಿ ಗ್ರಾಮದ ನಿವಾಸಿಗಳಲ್ಲಿ ಒಬ್ಬರಾದ ರಾಹುಲ್ ಮುಖಿಯಾ(Rahul Mukhiya) ಅವರು ಬಿಕೆಯು ಮುಖ್ಯಸ್ಥ ನರೇಶ್ ಮತ್ತು ಅವರ ಸಹೋದರ ರಾಕೇಶ್ ಟಿಕಾಯತ್ (Rakesh Tikait) ಸರ್ಕಾರಿ ಭೂಮಿಯನ್ನು “ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ. ದಶಕದ ಹಿಂದೆಯೇ ಸಿಸೌಲಿಯಲ್ಲಿ ಕೆರೆ ನಿರ್ಮಿಸಲು ಸರಕಾರದಿಂದ ಜಮೀನು ಮಂಜೂರು ಮಾಡಲಾಗಿತ್ತು. ಆದರೆ ಟಿಕಾಯತ್ ಸಹೋದರರು ಕೆರೆಗೆ ಮಣ್ಣು ತುಂಬಿ ಅಕ್ರಮವಾಗಿ ನಿವೇಶನಗಳನ್ನು ನಿರ್ಮಿಸಿಕೊಂಡಿದ್ದಾರೆ. ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಲಿಖಿತವಾಗಿ ತಿಳಿಸಿದ್ದು ಕೇಂದ್ರ ರಾಜ್ಯ ಸಚಿವ ಡಾ.ಸಂಜೀವ್ ಬಲಿಯಾನ್ ಅವರಿಗೂ ವಿಷಯ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು. ದೂರು ದಾಖಲಾಗಿರುವ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು. ನಾವು ಈ ವಿಷಯವನ್ನು ತನಿಖೆ ಮಾಡಿ ಅದರ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಬುಧಾನಾ ಪ್ರದೇಶದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಹೇಳಿದ್ದಾರೆ.  ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳದಿದ್ದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಳಿ ತೆರಳಿ ನ್ಯಾಯಕ್ಕಾಗಿ ಮನವಿ ಮಾಡುವುದಾಗಿ ರಾಹುಲ್ ಮುಖಿಯಾ ಎಚ್ಚರಿಸಿದ್ದಾರೆ.

ಏತನ್ಮಧ್ಯೆ ಆರೋಪಗಳು ಆಧಾರ ರಹಿತ ಮತ್ತು ಯಾವುದೇ ವಿಚಾರಣೆಗೆ ನಾನು ಸಿದ್ಧ ಎಂದು ನರೇಶ್ ಟಿಕಾಯಿತ್ ಹೇಳಿದ್ದಾರೆ. ಈ ಜನರು ನಮ್ಮ ಮೇಲೆ ಏಕೆ ಆರೋಪ ಮಾಡುತ್ತಿದ್ದಾರೆ ಎಂದು ನನಗೆ ತಿಳಿದಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಂಡಿಲ್ಲ, ಎಲ್ಲಾ ಆರೋಪಗಳು ಆಧಾರರಹಿತವಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
‘ರೈತ ನಾಯಕ’ ರಾಕೇಶ್ ಟಿಕಾಯತ್ ಹಾಗೂ ನರೇಶ್ ಟಿಕಾಯಿತ್ ಹೊರ ಹಾಕಿದ ಭಾರತೀಯ ಕಿಸಾನ್ ಯೂನಿಯನ್
Image
ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಶಾಸ್ತಿ ಮಾಡಿ ಎಂದು ರೈತರಲ್ಲಿ ಒತ್ತಾಯಿಸಿದ ಸಂಯುಕ್ತ ಕಿಸಾನ್ ಮೋರ್ಚಾ
Image
ಇಂದು ವಿಶ್ವಾಸದ್ರೋಹದ ದಿನ ಆಚರಿಸುವುದಾಗಿ ರೈತ ಮುಖಂಡ ರಾಕೇಶ್ ಟಿಕಾಯತ್​ ಘೋಷಣೆ; ಕೇಂದ್ರದ ವಿರುದ್ಧ ಮತ್ತೆ ಸಿಡಿಮಿಡಿ
Image
383ದಿನಗಳ ನಂತರ ಘಾಜಿಪುರ್​​ ಗಡಿ ಬಿಟ್ಟು ಹೊರಡುತ್ತಿದ್ದಾರೆ ರಾಕೇಶ್​ ಟಿಕಾಯತ್​; ಸ್ವಾಗತಕ್ಕೆ ಮನೆಯ ಬಳಿ ಭರ್ಜರಿ ಸಿದ್ಧತೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:13 pm, Mon, 23 May 22

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ