AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ, ಶಿಕ್ಷರೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ ಪೋಷಕರು

ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ ಪೋಷಕರು ಶಿಕ್ಷಕರನ್ನು ಚಪ್ಪಲಿಯಿಂದ ಥಳಿಸಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ತಮಿಳುನಾಡು: ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ, ಶಿಕ್ಷರೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ ಪೋಷಕರು
ಟೀಚರ್Image Credit source: India Today
ನಯನಾ ರಾಜೀವ್
|

Updated on: Aug 09, 2023 | 12:37 PM

Share

ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ ಪೋಷಕರು ಶಿಕ್ಷಕರನ್ನು ಚಪ್ಪಲಿಯಿಂದ ಥಳಿಸಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. 6 ನೇ ತರಗತಿಯ ವಿದ್ಯಾರ್ಥಿಯ ಪೋಷಕರು ಮತ್ತು ಸಂಬಂಧಿಕರು ಶಿಕ್ಷಕರನ್ನು ಬರ್ಬರವಾಗಿ ಥಳಿಸಿ ಚಪ್ಪಲಿಯಿಂದ ಹೊಡೆದಿದ್ದಾರೆ. ವಿದ್ಯಾರ್ಥಿಗೆ ಹೊಡೆದ ಆರೋಪದ ಮೇಲೆ ಶಿಕ್ಷಕನ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಘಟನೆಯನ್ನು ಬಹಿರಂಗಪಡಿಸಿದರೆ ಹೊರಹಾಕುವುದಾಗಿ ಬೆದರಿಕೆ ಹಾಕಲಾಗಿದೆ.

ಗುರುವರಾಜನ ಕಂಡಿಗೈ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಹರಿಹರನ್ ಸೋಮವಾರ ರಾತ್ರಿ 8 ಗಂಟೆಗೆ ಕೈಕಾಲು ಊದಿಕೊಂಡ ಸ್ಥಿತಿಯಲ್ಲಿ ಮನೆಗೆ ಮರಳಿದ್ದ. ವಿದ್ಯಾರ್ಥಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಬದಲು ಅಥವಾ ಮನೆಗೆ ಹೋಗಲು ಬಿಡದೆ ಸಂಜೆಯವರೆಗೂ ಶಾಲೆಯ ಆವರಣದಲ್ಲಿ ಇರಿಸಲಾಗಿತ್ತು ಎಂದು ಅವರು ಆರೋಪಿಸಿದರು.

ಮತ್ತಷ್ಟು ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಗೆ ಪ್ರೇಮ ಪತ್ರ, ಮಗಳ ವಯಸ್ಸಿನ ಬಾಲಕಿಯನ್ನು ಮದ್ವೆಯಾಗುವ ಆಸೆ ವ್ಯಕ್ತಪಡಿಸಿದ ಶಿಕ್ಷಕ

ಊತಕ್ಕೆ ಐಸ್​ ಪ್ಯಾಕ್ ನೀಡಿ ವಿಚಾರಿಸಿದಾಗ ವಿದ್ಯಾರ್ಥಿ ನಡೆದ ವಿಚಾರವನ್ನು ವಿವರಿಸಿದ್ದಾನೆ, ಒಂದೊಮ್ಮೆ ಈ ವಿಚಾರ ಕುರಿತು ಯಾರಿಗಾದರೂ ಮಾಹಿತಿ ನೀಡಿದ್ದಲ್ಲಿ ಶಾಲೆಯಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಶಿಕ್ಷಕ ಮೋಹನ್ ಬಾಬು ಬಾಲಕನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಯ ಪ್ರಾಂಶುಪಾಲರು ಮೋಹನ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ವಿದ್ಯಾರ್ಥಿಯ ಸಂಬಂಧಿಕರು ಅವರನ್ನು ಸುತ್ತುವರೆದು, ಅಮಾನುಷವಾಗಿ ಥಳಿಸಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೋಹನ್ ಬಾಬು ಅವರನ್ನು ರಕ್ಷಿಸಿ ಜನರನ್ನು ಚದುರಿಸಿದರು. ಈ ಕುರಿತು ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?