AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ, ಶಿಕ್ಷರೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ ಪೋಷಕರು

ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ ಪೋಷಕರು ಶಿಕ್ಷಕರನ್ನು ಚಪ್ಪಲಿಯಿಂದ ಥಳಿಸಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ತಮಿಳುನಾಡು: ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ, ಶಿಕ್ಷರೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ ಪೋಷಕರು
ಟೀಚರ್Image Credit source: India Today
ನಯನಾ ರಾಜೀವ್
|

Updated on: Aug 09, 2023 | 12:37 PM

Share

ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ ಪೋಷಕರು ಶಿಕ್ಷಕರನ್ನು ಚಪ್ಪಲಿಯಿಂದ ಥಳಿಸಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. 6 ನೇ ತರಗತಿಯ ವಿದ್ಯಾರ್ಥಿಯ ಪೋಷಕರು ಮತ್ತು ಸಂಬಂಧಿಕರು ಶಿಕ್ಷಕರನ್ನು ಬರ್ಬರವಾಗಿ ಥಳಿಸಿ ಚಪ್ಪಲಿಯಿಂದ ಹೊಡೆದಿದ್ದಾರೆ. ವಿದ್ಯಾರ್ಥಿಗೆ ಹೊಡೆದ ಆರೋಪದ ಮೇಲೆ ಶಿಕ್ಷಕನ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಘಟನೆಯನ್ನು ಬಹಿರಂಗಪಡಿಸಿದರೆ ಹೊರಹಾಕುವುದಾಗಿ ಬೆದರಿಕೆ ಹಾಕಲಾಗಿದೆ.

ಗುರುವರಾಜನ ಕಂಡಿಗೈ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಹರಿಹರನ್ ಸೋಮವಾರ ರಾತ್ರಿ 8 ಗಂಟೆಗೆ ಕೈಕಾಲು ಊದಿಕೊಂಡ ಸ್ಥಿತಿಯಲ್ಲಿ ಮನೆಗೆ ಮರಳಿದ್ದ. ವಿದ್ಯಾರ್ಥಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಬದಲು ಅಥವಾ ಮನೆಗೆ ಹೋಗಲು ಬಿಡದೆ ಸಂಜೆಯವರೆಗೂ ಶಾಲೆಯ ಆವರಣದಲ್ಲಿ ಇರಿಸಲಾಗಿತ್ತು ಎಂದು ಅವರು ಆರೋಪಿಸಿದರು.

ಮತ್ತಷ್ಟು ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಗೆ ಪ್ರೇಮ ಪತ್ರ, ಮಗಳ ವಯಸ್ಸಿನ ಬಾಲಕಿಯನ್ನು ಮದ್ವೆಯಾಗುವ ಆಸೆ ವ್ಯಕ್ತಪಡಿಸಿದ ಶಿಕ್ಷಕ

ಊತಕ್ಕೆ ಐಸ್​ ಪ್ಯಾಕ್ ನೀಡಿ ವಿಚಾರಿಸಿದಾಗ ವಿದ್ಯಾರ್ಥಿ ನಡೆದ ವಿಚಾರವನ್ನು ವಿವರಿಸಿದ್ದಾನೆ, ಒಂದೊಮ್ಮೆ ಈ ವಿಚಾರ ಕುರಿತು ಯಾರಿಗಾದರೂ ಮಾಹಿತಿ ನೀಡಿದ್ದಲ್ಲಿ ಶಾಲೆಯಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಶಿಕ್ಷಕ ಮೋಹನ್ ಬಾಬು ಬಾಲಕನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಯ ಪ್ರಾಂಶುಪಾಲರು ಮೋಹನ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ವಿದ್ಯಾರ್ಥಿಯ ಸಂಬಂಧಿಕರು ಅವರನ್ನು ಸುತ್ತುವರೆದು, ಅಮಾನುಷವಾಗಿ ಥಳಿಸಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೋಹನ್ ಬಾಬು ಅವರನ್ನು ರಕ್ಷಿಸಿ ಜನರನ್ನು ಚದುರಿಸಿದರು. ಈ ಕುರಿತು ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್