AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿ ಹರಿಯುತ್ತಿರುವ ಮಾಸಿ ನದಿ; 2 ದಿನದಿಂದ ಮನೆಗೆ ಹೋಗಲಾಗದೆ ಶಾಲೆಯಲ್ಲೇ ಉಳಿದಿರುವ 42 ಮಕ್ಕಳು

ರಾಜಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಫಾಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಹೋದ 42 ವಿದ್ಯಾರ್ಥಿಗಳು ಮರಳಿ ಬರುವಷ್ಟರಲ್ಲಿ ನದಿಯ ನೀರು ಸೇತುವೆಯ ಮೇಲೆ ಹರಿದ ಪರಿಣಾಮದಿಂದ ನಿನ್ನೆಯಿಂದ ತಮ್ಮ ಮನೆಗೆ ಮರಳಲಾಗದೆ ದಡದಲ್ಲೇ ಉಳಿಯುವಂತಾಗಿದೆ. ನೀರಿನ ಮಟ್ಟ ಕಡಿಮೆಯಾಗಲಿ ಎಂದು ಆ ಮಕ್ಕಳ ಪೋಷಕರು ಈಚೆ ದಡದಿಂದ ಪ್ರಾರ್ಥನೆ ಮಾಡುತ್ತಿದ್ದಾರೆ.

ಉಕ್ಕಿ ಹರಿಯುತ್ತಿರುವ ಮಾಸಿ ನದಿ; 2 ದಿನದಿಂದ ಮನೆಗೆ ಹೋಗಲಾಗದೆ ಶಾಲೆಯಲ್ಲೇ ಉಳಿದಿರುವ 42 ಮಕ್ಕಳು
ಉಕ್ಕಿ ಹರಿಯುತ್ತಿರುವ ಮಾಸಿ ನದಿ
ಸುಷ್ಮಾ ಚಕ್ರೆ
|

Updated on: Aug 16, 2024 | 5:06 PM

Share

ಜೈಪುರ: ರಾಜಸ್ಥಾನದ ಮಾಸಿ ನದಿ ಉಕ್ಕಿ ಹರಿಯುತ್ತಿದ್ದು, ತಮ್ಮ ಗ್ರಾಮವನ್ನು ತಮ್ಮ ಶಾಲೆಗೆ ಸಂಪರ್ಕಿಸುವ ಏಕೈಕ ಸೇತುವೆಯ ಮೇಲೆ ಮಾಸಿ ನದಿಯ ನೀರು ಹರಿಯುತ್ತಿರುವುದರಿಂದ ಆಗಸ್ಟ್ 15ರಿಂದ 42 ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿಯೇ ಸಿಲುಕಿಕೊಂಡಿದ್ದಾರೆ. ನಿನ್ನೆಯಿಂದ ಮನೆಗೆ ಮರಳಲಾಗದೆ ಆಚೆ ದಡದಲ್ಲಿರುವ ಶಾಲೆಯಲ್ಲೇ ಮಕ್ಕಳು ಉಳಿಯುವಂತಾಗಿದೆ.

ಮಾಸಿ ನದಿಯಲ್ಲಿ ಪ್ರವಾಹದ ತೀವ್ರತೆಗೆ ಫಾಗಿಯ ಮಹಾತ್ಮಗಾಂಧಿ ವಿದ್ಯಾಲಯದಲ್ಲಿ 30 ವಿದ್ಯಾರ್ಥಿಗಳು, 6 ಶಾಲಾ ಸಿಬ್ಬಂದಿ ಸೇರಿದಂತೆ 36 ಮಂದಿ ಸಿಲುಕಿಕೊಂಡಿದ್ದಾರೆ. ಗ್ರಾಮಸ್ಥರು ಅವರಿಗೆ ಆಹಾರ ಮತ್ತು ನೀರನ್ನು ಒದಗಿಸಿದ್ದಾರೆ. ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.

ಇದನ್ನೂ ಓದಿ: ಬಾಗಲಕೋಟೆಯ ಕಲಾದಗಿಯಲ್ಲಿ ಬಿರುಗಾಳಿ ಸಮೇತ ಭಾರೀ ಮಳೆ, ಸನ್ನಿವೇಶ ಆನಂದಿಸಿದ ಶಾಲಾಮಕ್ಕಳು!

ಸ್ವಾತಂತ್ರೋತ್ಸವ ಆಚರಿಸಲು ಶಾಲೆಗೆ ತೆರಳಿದ್ದ ತಂಡ ಸಮೀಪದ ಮಾಸಿ ನದಿಯಲ್ಲಿ ಪ್ರವಾಹದ ಕಾರಣದಿಂದ ಮನೆಗೆ ಮರಳಲು ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಂಭ್ರಮಾಚರಣೆಯ ನಂತರ ಮನೆಗೆ ಹಿಂತಿರುಗಲು ಆಶಿಸಿದರು. ಆದರೆ ಅವರಿಗೆ ವೇಗವಾಗಿ ಹರಿಯುವ ನದಿ ದಾಟಲು ಸಾಧ್ಯವಾಗಲಿಲ್ಲ. ಆಡಳಿತದಿಂದ ತಕ್ಷಣದ ಸಹಾಯವಿಲ್ಲದೆ, ಸ್ಥಳೀಯ ಗ್ರಾಮಸ್ಥರು ಸಹಾಯವನ್ನು ಒದಗಿಸುವ ಜವಾಬ್ದಾರಿಯನ್ನು ತೆಗೆದುಕೊಂಡರು. ಸಿಕ್ಕಿಬಿದ್ದ ಜನರಿಗೆ ಆಹಾರ ಮತ್ತು ನೀರನ್ನು ತರಲು ಅವರು ನದಿಯನ್ನು ದಾಟಿದರು.

ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ (ಎಸ್‌ಡಿಆರ್‌ಎಫ್) ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗಿದೆ. ನಾಳೆ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಎಸ್‌ಡಿಆರ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿಯವರೆಗೆ ಮಕ್ಕಳು ಮತ್ತು ಸಿಬ್ಬಂದಿ ರಾತ್ರಿಯಿಡೀ ಶಾಲೆಯಲ್ಲೇ ಇರಬೇಕಾಗಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​

ಭಾರತೀಯ ಹವಾಮಾನ ಇಲಾಖೆ (IMD) ರಾಜಸ್ಥಾನದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಇಂದು ಜೈಪುರ, ಅಜ್ಮೀರ್, ಕೋಟಾ ಮತ್ತು ಜೋಧ್‌ಪುರದ ಕೆಲವು ಭಾಗಗಳು ಸಾಧಾರಣದಿಂದ ಭಾರೀ ಮಳೆಯಾಗಿದೆ, ಕೆಲವು ಪ್ರದೇಶಗಳಲ್ಲಿ ಬಹುಶಃ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 17ರಿಂದ ರಾಜ್ಯಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್