AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿ ಹರಿಯುತ್ತಿರುವ ಮಾಸಿ ನದಿ; 2 ದಿನದಿಂದ ಮನೆಗೆ ಹೋಗಲಾಗದೆ ಶಾಲೆಯಲ್ಲೇ ಉಳಿದಿರುವ 42 ಮಕ್ಕಳು

ರಾಜಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಫಾಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಹೋದ 42 ವಿದ್ಯಾರ್ಥಿಗಳು ಮರಳಿ ಬರುವಷ್ಟರಲ್ಲಿ ನದಿಯ ನೀರು ಸೇತುವೆಯ ಮೇಲೆ ಹರಿದ ಪರಿಣಾಮದಿಂದ ನಿನ್ನೆಯಿಂದ ತಮ್ಮ ಮನೆಗೆ ಮರಳಲಾಗದೆ ದಡದಲ್ಲೇ ಉಳಿಯುವಂತಾಗಿದೆ. ನೀರಿನ ಮಟ್ಟ ಕಡಿಮೆಯಾಗಲಿ ಎಂದು ಆ ಮಕ್ಕಳ ಪೋಷಕರು ಈಚೆ ದಡದಿಂದ ಪ್ರಾರ್ಥನೆ ಮಾಡುತ್ತಿದ್ದಾರೆ.

ಉಕ್ಕಿ ಹರಿಯುತ್ತಿರುವ ಮಾಸಿ ನದಿ; 2 ದಿನದಿಂದ ಮನೆಗೆ ಹೋಗಲಾಗದೆ ಶಾಲೆಯಲ್ಲೇ ಉಳಿದಿರುವ 42 ಮಕ್ಕಳು
ಉಕ್ಕಿ ಹರಿಯುತ್ತಿರುವ ಮಾಸಿ ನದಿ
ಸುಷ್ಮಾ ಚಕ್ರೆ
|

Updated on: Aug 16, 2024 | 5:06 PM

Share

ಜೈಪುರ: ರಾಜಸ್ಥಾನದ ಮಾಸಿ ನದಿ ಉಕ್ಕಿ ಹರಿಯುತ್ತಿದ್ದು, ತಮ್ಮ ಗ್ರಾಮವನ್ನು ತಮ್ಮ ಶಾಲೆಗೆ ಸಂಪರ್ಕಿಸುವ ಏಕೈಕ ಸೇತುವೆಯ ಮೇಲೆ ಮಾಸಿ ನದಿಯ ನೀರು ಹರಿಯುತ್ತಿರುವುದರಿಂದ ಆಗಸ್ಟ್ 15ರಿಂದ 42 ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿಯೇ ಸಿಲುಕಿಕೊಂಡಿದ್ದಾರೆ. ನಿನ್ನೆಯಿಂದ ಮನೆಗೆ ಮರಳಲಾಗದೆ ಆಚೆ ದಡದಲ್ಲಿರುವ ಶಾಲೆಯಲ್ಲೇ ಮಕ್ಕಳು ಉಳಿಯುವಂತಾಗಿದೆ.

ಮಾಸಿ ನದಿಯಲ್ಲಿ ಪ್ರವಾಹದ ತೀವ್ರತೆಗೆ ಫಾಗಿಯ ಮಹಾತ್ಮಗಾಂಧಿ ವಿದ್ಯಾಲಯದಲ್ಲಿ 30 ವಿದ್ಯಾರ್ಥಿಗಳು, 6 ಶಾಲಾ ಸಿಬ್ಬಂದಿ ಸೇರಿದಂತೆ 36 ಮಂದಿ ಸಿಲುಕಿಕೊಂಡಿದ್ದಾರೆ. ಗ್ರಾಮಸ್ಥರು ಅವರಿಗೆ ಆಹಾರ ಮತ್ತು ನೀರನ್ನು ಒದಗಿಸಿದ್ದಾರೆ. ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.

ಇದನ್ನೂ ಓದಿ: ಬಾಗಲಕೋಟೆಯ ಕಲಾದಗಿಯಲ್ಲಿ ಬಿರುಗಾಳಿ ಸಮೇತ ಭಾರೀ ಮಳೆ, ಸನ್ನಿವೇಶ ಆನಂದಿಸಿದ ಶಾಲಾಮಕ್ಕಳು!

ಸ್ವಾತಂತ್ರೋತ್ಸವ ಆಚರಿಸಲು ಶಾಲೆಗೆ ತೆರಳಿದ್ದ ತಂಡ ಸಮೀಪದ ಮಾಸಿ ನದಿಯಲ್ಲಿ ಪ್ರವಾಹದ ಕಾರಣದಿಂದ ಮನೆಗೆ ಮರಳಲು ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಂಭ್ರಮಾಚರಣೆಯ ನಂತರ ಮನೆಗೆ ಹಿಂತಿರುಗಲು ಆಶಿಸಿದರು. ಆದರೆ ಅವರಿಗೆ ವೇಗವಾಗಿ ಹರಿಯುವ ನದಿ ದಾಟಲು ಸಾಧ್ಯವಾಗಲಿಲ್ಲ. ಆಡಳಿತದಿಂದ ತಕ್ಷಣದ ಸಹಾಯವಿಲ್ಲದೆ, ಸ್ಥಳೀಯ ಗ್ರಾಮಸ್ಥರು ಸಹಾಯವನ್ನು ಒದಗಿಸುವ ಜವಾಬ್ದಾರಿಯನ್ನು ತೆಗೆದುಕೊಂಡರು. ಸಿಕ್ಕಿಬಿದ್ದ ಜನರಿಗೆ ಆಹಾರ ಮತ್ತು ನೀರನ್ನು ತರಲು ಅವರು ನದಿಯನ್ನು ದಾಟಿದರು.

ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ (ಎಸ್‌ಡಿಆರ್‌ಎಫ್) ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗಿದೆ. ನಾಳೆ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಎಸ್‌ಡಿಆರ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿಯವರೆಗೆ ಮಕ್ಕಳು ಮತ್ತು ಸಿಬ್ಬಂದಿ ರಾತ್ರಿಯಿಡೀ ಶಾಲೆಯಲ್ಲೇ ಇರಬೇಕಾಗಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​

ಭಾರತೀಯ ಹವಾಮಾನ ಇಲಾಖೆ (IMD) ರಾಜಸ್ಥಾನದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಇಂದು ಜೈಪುರ, ಅಜ್ಮೀರ್, ಕೋಟಾ ಮತ್ತು ಜೋಧ್‌ಪುರದ ಕೆಲವು ಭಾಗಗಳು ಸಾಧಾರಣದಿಂದ ಭಾರೀ ಮಳೆಯಾಗಿದೆ, ಕೆಲವು ಪ್ರದೇಶಗಳಲ್ಲಿ ಬಹುಶಃ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 17ರಿಂದ ರಾಜ್ಯಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ