AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Elections 2021: ಚುನಾವಣೆ ಸಮೀಪಿಸುತ್ತಿದ್ದಂತೆ ಕೊಲ್ಕತ್ತಾ ಮತದಾರನಾದ ನಟ ಮಿಥುನ್ ಚಕ್ರವರ್ತಿ

Mithun Chakraborty: ಈ ಹಿಂದೆ ಮುಂಬೈ ಮತದಾರರಾಗಿದ್ದ ಮಿಥುನ್ ಚಕ್ರವರ್ತಿ ಮತ್ತು ಅವರ ಕುಟುಂಬ ಪಶ್ಚಿಮ ಬಂಗಾಳದ ಕಾಶೀಪುರ್ ಬೆಲ್ಗಾಚಿಯಾ ಚುನಾವಣಾ ಕ್ಷೇತ್ರದ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ.

West Bengal Assembly Elections 2021: ಚುನಾವಣೆ ಸಮೀಪಿಸುತ್ತಿದ್ದಂತೆ ಕೊಲ್ಕತ್ತಾ ಮತದಾರನಾದ ನಟ ಮಿಥುನ್ ಚಕ್ರವರ್ತಿ
ಮೋದಿ ಜತೆ ಮಿಥುನ್ ಚಕ್ರವರ್ತಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 22, 2021 | 1:25 PM

Share

ಕೊಲ್ಕತ್ತಾ: ಇತ್ತೀಚೆಗೆ ಬಿಜೆಪಿ ಸೇರಿದ್ದ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಇದೀಗ ಕೊಲ್ಕತ್ತಾದ ಮತದಾರರಾಗಿದ್ದಾರೆ. ಈ ಹಿಂದೆ ಮುಂಬೈ ಮತದಾರರಾಗಿದ್ದ ಮಿಥುನ್ ದಾದಾ ಮತ್ತು ಅವರ ಕುಟುಂಬ ಪಶ್ಚಿಮ ಬಂಗಾಳದ ಕಾಶೀಪುರ್ ಬೆಲ್ಗಾಚಿಯಾ ಚುನಾವಣಾ ಕ್ಷೇತ್ರದ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಪಶ್ಚಿಮಬಂಗಾಳದ ಮತದಾರ ಆಗಿರುವುದರಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದೆ.

ನಮ್ಮ ಮನೆಯ ಮತದಾರರಾಗಿ ಅವರು ನೋಂದಣಿ ಮಾಡಿಕೊಂಡಿದ್ದಾರೆ. ವೈಯಕ್ತಿಕ ವಿಷಯಕ್ಕಾಗಿ ಅವರು ಕೊಲ್ಕತ್ತಾಗೆ ಬಂದರೆ ನಮ್ಮ ಮನೆಯಲ್ಲಿಯೇ ಉಳಿದುಕೊಳ್ಳುತ್ತಾರೆ ಎಂದು ಮಿಥುನ್ ಅವರ ಸಂಬಂಧಿ ಶರ್ಮಿಷ್ಠಾ ಸರ್ಕಾರ್ ಮಾಧ್ಯಮದವರಲ್ಲಿ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಮಾಜಿ ಸಂಸದರಾಗಿದ್ದ ಮಿಥುನ್, ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಸಿದ ರ‍್ಯಾಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಮಿಥುನ್ ಚಕ್ರವರ್ತಿ ಸ್ಪರ್ಧಿಸುತ್ತಿದ್ದಾರೆಯೇ ಎಂದು ಕೇಳಿದಾಗ, ದಾದಾ ಅವರು ಸೂಪರ್ ಸ್ಟಾರ್. ಅವರು ಯಾವ ಸ್ಥಾನಕ್ಕೂ ಸೂಕ್ತವಾಗಿರುತ್ತಾರೆ. ಅವರು ಮತ್ತೆ ಸಕ್ರಿಯವಾಗಿರುವುದನ್ನು ನೋಡಿ ಖುಷಿಯಾಗುತ್ತಿದೆ ಎಂದಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಪಕ್ಷ ಹೇಳಿದರೆ ನಾನು ಸ್ಪರ್ಧಿಸುವೆ ಎಂದು ಸಂದರ್ಶನವೊಂದರಲ್ಲಿ ಮಿಥುನ್ ಚಕ್ರವರ್ತಿ ಹೇಳಿದ್ದರು. ಅದೇ ವೇಳೆ ಚುನಾವಣೆ ಸ್ಪರ್ಧಿಸಲು ಮಿಥುನ್ ಚಕ್ರವರ್ತಿ ನಿರಾಕರಿಸಿದ್ದರು. ಆದರೆ ಪಕ್ಷ ಹೇಳಿದರೆ ನಾನು ಅವರ ಜತೆ ಮಾತನಾಡುವೆ ಎಂದು ಬಿಜೆಪಿಯ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯ್ ವರ್ಗೀಯ ಹೇಳಿದ್ದರು.

ಕಳೆದ ವಾರ ಬಿಜೆಪಿ ಕಾಶೀಪುರ್ ಬೆಲ್ಗಾಚಿಯಾ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು. ಈ ಪೈಕಿ ಕಾಶೀಪುರ್ ಬೆಲ್ಗಾಚಿಯಾದ ಅಭ್ಯರ್ಥಿ ತಪನ್ ಸಾಹಾ, ಚುನಾವಣೆಯಲ್ಲಿ ನಾನು ಸ್ಪರ್ಧಿಸಲಾರೆ. ನಾನು ಬಿಜೆಪಿ ಪಕ್ಷಕ್ಕೆ ಸೇರಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆ ಬಿಜೆಪಿಗೆ ಮುಜುಗರವನ್ನುಂಟು ಮಾಡಿತ್ತು. ಮಿಥುನ್ ಚಕ್ರವರ್ತಿ ಅವರು ಇದೀಗ ಅದೇ ಕ್ಷೇತ್ರದ ಮತದಾರರಾಗಿರುವ ಕಾರಣ ಖಾಲಿಯಿರುವ ಅಭ್ಯರ್ಥಿ ಸ್ಥಾನ ಮಿಥುನ್ ಅವರಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಿಥುನ್ ದಾ ಅವರು ಕೊಲ್ಕತ್ತಾದ ಮತದಾರರಾಗಿದ್ದಾರೆ ಎಂದ ಮಾತ್ರಕ್ಕೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದರ್ಥವಲ್ಲ. ಈ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿಯ ಹಿರಿಯ ನೇತಾರ, ರಾಜ್ಯಸಭೆಯ ಮಾಜಿ ಸದಸ್ಯ ಸ್ವಪನ್ ದಾಸ್ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: West Bengal Elections 2021: ಮೇ 2ರಂದು ಮಮತಾ ಬ್ಯಾನರ್ಜಿಯನ್ನು ಜನರು ಬಂಗಾಳದಿಂದ ಹೊರಗೆ ಕಳಿಸಲಿದ್ದಾರೆ: ನರೇಂದ್ರ ಮೋದಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ