Sign In

By signing in or creating an account, you agree with Associated Broadcasting Company's Terms & Conditions and Privacy Policy.

Babul Supriyo ‘ಸಂಸದನಾಗಿಯೇ ಉಳಿಯುತ್ತೇನೆ’: ಜೆಪಿ ನಡ್ಡಾ ಭೇಟಿ ನಂತರ ನಿರ್ಧಾರ ಬದಲಿಸಿದ ಮಾಜಿ ಸಚಿವ ಬಾಬುಲ್ ಸುಪ್ರಿಯೊ

ಸಚಿವ ಸಂಪುಟ ಪುನರ್ ರಚನೆ ನಂತರ ಇತ್ತೀಚೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ರಾಜ್ಯ ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿಯ ಅಸನ್ಸೋಲ್ ಸಂಸದ ಭಾನುವಾರ ತಮ್ಮ ನಿರ್ಧಾರವನ್ನು ಘೋಷಿಸುವ ಭಾವನಾತ್ಮಕ ಸಂದೇಶವನ್ನು ತಮ್ಮ ಫೇಸ್​​ಬುಕ್ ವಾಲ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

Babul Supriyo 'ಸಂಸದನಾಗಿಯೇ ಉಳಿಯುತ್ತೇನೆ': ಜೆಪಿ ನಡ್ಡಾ ಭೇಟಿ ನಂತರ ನಿರ್ಧಾರ ಬದಲಿಸಿದ ಮಾಜಿ ಸಚಿವ ಬಾಬುಲ್ ಸುಪ್ರಿಯೊ
ಬಾಬುಲ್ ಸುಪ್ರಿಯೊ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 02, 2021 | 10:18 PM

ದೆಹಲಿ: ರಾಜಕೀಯ ಮತ್ತು ಸಂಸದ ಸ್ಥಾನವನ್ನು ತೊರೆಯುವ ನಿರ್ಧಾರವನ್ನು ಘೋಷಿಸಿದ ಒಂದು ದಿನದ ನಂತರ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಎರಡನೇ ನಿರ್ಧಾರ ಬಗ್ಗೆ ಮರುಚಿಂತನೆ ನಡೆಸಿದ್ದಾರೆ. ಬಾಲಿವುಡ್-ಗಾಯಕ-ರಾಜಕಾರಣಿ ಆಗಿರುವ ಬಾಬುಲ್ ಸುಪ್ರಿಯೊ ರಾಜಕೀಯವಾಗಿ ಸಕ್ರಿಯರಾಗದೆಯೇ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ನಿರ್ವಹಿಸುವುದನ್ನು ಮುಂದುವರಿಸುವುದಾಗಿ ಸೋಮವಾರ ಹೇಳಿದ್ದಾರೆ. ಇಂದು ಬಿಜೆಪಿ ಮುಖ್ಯಸ್ಥ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ನಂತರ ಸುಪ್ರಿಯೋ ಅವರು ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ಸಚಿವ ಸಂಪುಟ ಪುನರ್ ರಚನೆ ನಂತರ ಇತ್ತೀಚೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ರಾಜ್ಯ ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿಯ ಅಸನ್ಸೋಲ್ ಸಂಸದ ಭಾನುವಾರ ತಮ್ಮ ನಿರ್ಧಾರವನ್ನು ಘೋಷಿಸುವ ಭಾವನಾತ್ಮಕ ಸಂದೇಶವನ್ನು ತಮ್ಮ ಫೇಸ್​​ಬುಕ್ ವಾಲ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

“ನಾನು ಹೊರಡುತ್ತಿದ್ದೇನೆ … ಅಲ್ವಿದಾ (ವಿದಾಯ) … ನೀವು ಸಮಾಜಸೇವೆಯನ್ನು ಮಾಡಲು ಬಯಸಿದರೆ, ನೀವು ರಾಜಕೀಯದಲ್ಲಿ ಇರದೆ ಅದನ್ನು ಮಾಡಬಹುದು …” ಎಂದು ಅವರು ಫೇಸ್ ಬುಕ್ ನಲ್ಲಿ ಬರೆದಿದ್ದರು. ಈ ಬಗ್ಗೆ ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರ ಕುನಾಲ್ ಘೋಷ್ ಸೇರಿದಂತೆ ರಾಜಕೀಯ ವಿರೋಧಿಗಳು ಸುಪ್ರಿಯೊ ನಡೆಯನ್ನು “ನಾಟಕ” ಎಂದು ಕರೆದಿದ್ದರು. ’ ಆದರೆ, ಸಂಸದ ಸುಪ್ರಿಯೊ ರಾಜಕೀಯ ತೊರೆಯುವ ತಮ್ಮ ನಿರ್ಧಾರದಲ್ಲಿ ಅಚಲರಾಗಿದ್ದಾರೆ. “ನಾನು ಸಂಸದನಾಗಿ ಮುಂದುವರಿಯುತ್ತೇನೆ ಆದರೆ ನಾನು ರಾಜಕೀಯವನ್ನು ಬಿಡುತ್ತೇನೆ. ನಾನು ಸಾಂವಿಧಾನಿಕ ಹುದ್ದೆಯನ್ನು ಬಳಸುವುದನ್ನು ಮುಂದುವರಿಸುತ್ತೇನೆ. ನಾನು ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳದೆ ಸಾಂವಿಧಾನಿಕ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ” ಎಂದು ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಸುಪ್ರಿಯೊ ಹೇಳಿದರು.

“ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ. ನಾನು ಬಂಗಲೆಯನ್ನು ತೊರೆಯುತ್ತಿದ್ದೇನೆ.ಕೊಲ್ಕತ್ತಾ ಅಥವಾ ಮುಂಬೈಗೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಸಂಪುಟ ಪುನರ್ ರಚನೆ ವೇಳೆ ತನ್ನ ಸಚಿವ ಸ್ಥಾನದ ನಷ್ಟವು “ಖಂಡಿತವಾಗಿಯೂ, ಭಾಗಶಃ” ತನ್ನ ರಾಜೀನಾಮೆ ನಿರ್ಧಾರಕ್ಕೆ ಕಾರಣ ಎಂದು ಸುಪ್ರಿಯೋ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಒಪ್ಪಿಕೊಂಡಿದ್ದಾರೆ. ಅವರನ್ನು ಕೈಬಿಟ್ಟಾಗ, “ನನ್ನಲ್ಲಿ ರಾಜೀನಾಮೆ ಕೇಳಲಾಯಿತು”ಎಂದು ಪೋಸ್ಟ್ ಮಾಡಿದ್ದ ಅವರು ಆಮೇಲೆ ಆ ಪೋಸ್ಟ್ ತೆಗೆದಿದ್ದರು.

ಈ ವರ್ಷದ ಆರಂಭದಲ್ಲಿ ನಡೆದ ಪಶ್ಚಿಮ ಅಸೆಂಬ್ಲಿ ಚುನಾವಣೆಯಲ್ಲಿ ದಕ್ಷಿಣ ಕೊಲ್ಕತ್ತಾದ ಟಾಲಿಗಂಜ್ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿದ್ದ ಸುಪ್ರಿಯೊ ಸುಮಾರು 50,000 ಮತಗಳಿಂದ ಸೋತಿದ್ದರು.

ಇದನ್ನೂ ಓದಿ: Babul Supriyo: ಬಿಜೆಪಿ ತೊರೆದು ಬೇರೆ ಪಕ್ಷ ಸೇರುತ್ತಾರಾ ಸಂಸದ ಬಾಬುಲ್ ಸುಪ್ರಿಯೋ?; ಅನುಮಾನಕ್ಕೆ ಕಾರಣವಾಯ್ತು ಫೇಸ್​ಬುಕ್ ಪೋಸ್ಟ್

ಇದನ್ನೂ ಓದಿ: ‘ರಾಜೀನಾಮೆ ಕೊಡಿ ಎಂದಿದ್ದರು’ ಬಾಬುಲ್ ಸುಪ್ರಿಯೊ ಫೇಸ್​ಬುಕ್ ಪೋಸ್ಟ್ ವಿರುದ್ಧ ಗರಂ ಆದ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್

(After JP Nadda Meet Former Union Minister Babul Supriyo said he will Stay MP)

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್