Sign In

By signing in or creating an account, you agree with Associated Broadcasting Company's Terms & Conditions and Privacy Policy.

Haridwar: ಕೊರೋನಾಗೆ ಡೋಂಟ್ ಕೇರ್; ಹರಿದ್ವಾರದ ಗಂಗಾ ತೀರದಲ್ಲಿ ಸೇರಿದ ಭಕ್ತರ ದಂಡನ್ನು ನೋಡಿದರೆ ಶಾಕ್ ಆಗ್ತೀರ…

Kempty Falls: 2 ದಿನಗಳ ಹಿಂದಷ್ಟೇ ಮಸ್ಸೂರಿಯ ಕೆಂಪ್ಟಿ ಜಲಪಾತದ ಕೆಳಗೆ ನೂರಾರು ಜನರು ಮಾಸ್ಕ್ ಇಲ್ಲದೆ ನೀರಿನಲ್ಲಿ ಆಟವಾಡುತ್ತಾ, ಫೋಟೋ ತೆಗೆಸಿಕೊಳ್ಳುತ್ತಾ ಎಂಜಾಯ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು.

Haridwar: ಕೊರೋನಾಗೆ ಡೋಂಟ್ ಕೇರ್; ಹರಿದ್ವಾರದ ಗಂಗಾ ತೀರದಲ್ಲಿ ಸೇರಿದ ಭಕ್ತರ ದಂಡನ್ನು ನೋಡಿದರೆ ಶಾಕ್ ಆಗ್ತೀರ...
ಹರಿದ್ವಾರದಲ್ಲಿ ಜನದಟ್ಟಣೆ
Follow us
ಸುಷ್ಮಾ ಚಕ್ರೆ
|

Updated on: Jul 10, 2021 | 1:33 PM

ಹರಿದ್ವಾರ: ಉತ್ತರಾಖಂಡದ ಮಸ್ಸೂರಿ (Mussoorie) ಬಳಿ ಇರುವ ಕೆಂಪ್ಟಿ(Kempty Falls) ಜಲಪಾತದ ಬಳಿ ಮಾಸ್ಕ್ ಧರಿಸದೆ ನೂರಾರು ಜನರು ಎಂಜಾಯ್ ಮಾಡುತ್ತಿರುವ ವಿಡಿಯೋ, ಫೋಟೋಗಳು ವೈರಲ್ ಆಗಿತ್ತು. ಕೊರೋನಾ (Coronavirus) ಭೀತಿಯ ನಡುವೆಯೂ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಪ್ರವಾಸಕ್ಕೆ ತೆರಳಿ, ಜಲಪಾತ ವೀಕ್ಷಿಸಲು ಮುಗಿಬಿದ್ದವರ ವರ್ತನೆಗೆ ಭಾರೀ ವಿರೋಧವೂ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಂಪ್ಟಿ ಜಲಪಾತ ವೀಕ್ಷಿಸಲು ಒಂದು ಬಾರಿ 50 ಜನರಿಗೆ ಮಾತ್ರ ಅವಕಾಶ ನೀಡುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದೆ. ಇದರ ನಡುವೆ ಹರಿದ್ವಾರದಲ್ಲೂ ಸಾವಿರಾರು ಭಕ್ತರು ತಂಡೋಪತಂಡವಾಗಿ ಗಂಗಾ ನದಿಯ (Ganga River) ಪಕ್ಕದಲ್ಲಿ ಸೇರಿರುವ ವಿಡಿಯೋವೊಂದು ವೈರಲ್ ಆಗಿದೆ.

ಭಾರತದ ಪ್ರಮುಖ ಧಾರ್ಮಿಕ ಸ್ಥಳವಾಗಿರುವ ಹರಿದ್ವಾರದ ಹರ್ ಕಿ ಪೌರಿ ಘಾಟ್​ ದಡದಲ್ಲಿ ಸಾವಿರಾರು ಭಕ್ತರು ನಿಂತಿರುವ ಫೋಟೋ, ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಮತ್ತೊಂದು ರೀತಿಯ ಆತಂಕ ಸೃಷ್ಟಿಸಿದೆ. ಇದಕ್ಕೆ ಜನರಿಂದ ಭಾರೀ ಆಕ್ರೋಶವೂ ವ್ಯಕ್ತವಾಗುತ್ತಿದೆ. ತಿಂಗಳಾನುಗಟ್ಟಲೆ ಲಾಕ್​ಡೌನ್ ಮಾಡಿದರೂ, ಕೊರೋನಾದಿಂದ ಕೆಲವು ತಿಂಗಳ ಹಿಂದೆ ದಿನಕ್ಕೆ ಸಾವಿರಾರು ಜನರು ಸಾವನ್ನಪ್ಪಿದರೂ ಜನರು ಇನ್ನೂ ಬುದ್ಧಿ ಕಲಿತಿಲ್ಲ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

ಉತ್ತರಾಖಂಡದಲ್ಲಿ ವೀಕೆಂಡ್ ಲಾಕ್​ಡೌನ್ ತೆರವುಗೊಳಿಸಿದರೆ ಬೇರೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಅದರಿಂದ ಡೆಲ್ಟಾ ಪ್ಲಸ್ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಬುಧವಾರವಷ್ಟೇ ನೈನಿತಾಲ್ ಹೈಕೋರ್ಟ್​ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಡೆಲ್ಟಾ ರೂಪಾಂತರಿ ಸೋಂಕು ಮಾತ್ರವಲ್ಲದೆ ಕಪ್ಪ ರೂಪಾಂತರಿ ವೈರಸ್ ಕೂಡ ಉತ್ತರ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಎರಡು ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಕೂಡ ಪತ್ತೆಯಾಗಿವೆ. ಹೀಗಾಗಿ, ಕೊರೋನಾ ತಪಾಸಣೆಯನ್ನು ಕೂಡ ಹೆಚ್ಚಿಸಲಾಗಿದೆ.

after Kempty Falls Crowd Thousands of Tourists Spotted at Haridwar's Har ki Pauri without Masks Social Distancing

ಹರಿದ್ವಾರದಲ್ಲಿ ಜನದಟ್ಟಣೆ

ಲಾಕ್​ಡೌನ್ ಬಳಿಕ ನೈನಿತಾಲ್ ಹಿಲ್ ಸ್ಟೇಷನ್​ಗಳಿಗೆ ವೀಕೆಂಡ್​ನಲ್ಲಿ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ಇಲ್ಲಿಗೆ ಬರುವ ಪ್ರವಾಸಿಗರ ಮೇಲೆ ನಿಯಂತ್ರಣ ಹೇರಲು ಇದೀಗ ನೈನಿತಾಲ್ ಜಿಲ್ಲಾಡಳಿತ ದ್ವಿಚಕ್ರ ವಾಹನ ಸವಾರರ ಪ್ರವೇಶಕ್ಕೆ ನಿಷೇಧ ಹೇರಿದೆ. ಮುಸ್ಸೂರಿಯಲ್ಲಿ ಕೂಡ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು ಬಾರಿ 50 ಜನರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ.

2 ದಿನಗಳ ಹಿಂದಷ್ಟೇ ಮಸ್ಸೂರಿಯ ಕೆಂಪ್ಟಿ ಜಲಪಾತದ ಕೆಳಗೆ ನೂರಾರು ಜನರು ಮಾಸ್ಕ್ ಇಲ್ಲದೆ ನೀರಿನಲ್ಲಿ ಆಟವಾಡುತ್ತಾ, ಫೋಟೋ ತೆಗೆಸಿಕೊಳ್ಳುತ್ತಾ ಎಂಜಾಯ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಮನಾಲಿಯಲ್ಲಿ ಕೂಡ ಪ್ರವಾಸಿಗರು ಕಿಕ್ಕಿರಿದು ಸೇರಿದ್ದ ವಿಡಿಯೋಗಳು ಹರಿದಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕೊರೋನಾಗೆ ಮತ್ತೆ ಬಹಿರಂಗ ಆಹ್ವಾನ ನೀಡಬೇಡಿ ಎಂದು ಜನರಿಗೆ ಮನವಿ ಮಾಡಿದೆ.

ಇದನ್ನೂ ಓದಿ: Char Dham Yatra Suspended: ಕುಂಭಮೇಳದ ಬಳಿಕ ಎಚ್ಚೆತ್ತುಕೊಂಡ ಉತ್ತರಾಖಂಡ್ ಸರ್ಕಾರ; ಚಾರ್ ಧಾಮ್ ಯಾತ್ರೆ ರದ್ದು

ಇದನ್ನೂ ಓದಿ: ‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ