AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haridwar: ಕೊರೋನಾಗೆ ಡೋಂಟ್ ಕೇರ್; ಹರಿದ್ವಾರದ ಗಂಗಾ ತೀರದಲ್ಲಿ ಸೇರಿದ ಭಕ್ತರ ದಂಡನ್ನು ನೋಡಿದರೆ ಶಾಕ್ ಆಗ್ತೀರ…

Kempty Falls: 2 ದಿನಗಳ ಹಿಂದಷ್ಟೇ ಮಸ್ಸೂರಿಯ ಕೆಂಪ್ಟಿ ಜಲಪಾತದ ಕೆಳಗೆ ನೂರಾರು ಜನರು ಮಾಸ್ಕ್ ಇಲ್ಲದೆ ನೀರಿನಲ್ಲಿ ಆಟವಾಡುತ್ತಾ, ಫೋಟೋ ತೆಗೆಸಿಕೊಳ್ಳುತ್ತಾ ಎಂಜಾಯ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು.

Haridwar: ಕೊರೋನಾಗೆ ಡೋಂಟ್ ಕೇರ್; ಹರಿದ್ವಾರದ ಗಂಗಾ ತೀರದಲ್ಲಿ ಸೇರಿದ ಭಕ್ತರ ದಂಡನ್ನು ನೋಡಿದರೆ ಶಾಕ್ ಆಗ್ತೀರ...
ಹರಿದ್ವಾರದಲ್ಲಿ ಜನದಟ್ಟಣೆ
ಸುಷ್ಮಾ ಚಕ್ರೆ
|

Updated on: Jul 10, 2021 | 1:33 PM

Share

ಹರಿದ್ವಾರ: ಉತ್ತರಾಖಂಡದ ಮಸ್ಸೂರಿ (Mussoorie) ಬಳಿ ಇರುವ ಕೆಂಪ್ಟಿ(Kempty Falls) ಜಲಪಾತದ ಬಳಿ ಮಾಸ್ಕ್ ಧರಿಸದೆ ನೂರಾರು ಜನರು ಎಂಜಾಯ್ ಮಾಡುತ್ತಿರುವ ವಿಡಿಯೋ, ಫೋಟೋಗಳು ವೈರಲ್ ಆಗಿತ್ತು. ಕೊರೋನಾ (Coronavirus) ಭೀತಿಯ ನಡುವೆಯೂ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಪ್ರವಾಸಕ್ಕೆ ತೆರಳಿ, ಜಲಪಾತ ವೀಕ್ಷಿಸಲು ಮುಗಿಬಿದ್ದವರ ವರ್ತನೆಗೆ ಭಾರೀ ವಿರೋಧವೂ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಂಪ್ಟಿ ಜಲಪಾತ ವೀಕ್ಷಿಸಲು ಒಂದು ಬಾರಿ 50 ಜನರಿಗೆ ಮಾತ್ರ ಅವಕಾಶ ನೀಡುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದೆ. ಇದರ ನಡುವೆ ಹರಿದ್ವಾರದಲ್ಲೂ ಸಾವಿರಾರು ಭಕ್ತರು ತಂಡೋಪತಂಡವಾಗಿ ಗಂಗಾ ನದಿಯ (Ganga River) ಪಕ್ಕದಲ್ಲಿ ಸೇರಿರುವ ವಿಡಿಯೋವೊಂದು ವೈರಲ್ ಆಗಿದೆ.

ಭಾರತದ ಪ್ರಮುಖ ಧಾರ್ಮಿಕ ಸ್ಥಳವಾಗಿರುವ ಹರಿದ್ವಾರದ ಹರ್ ಕಿ ಪೌರಿ ಘಾಟ್​ ದಡದಲ್ಲಿ ಸಾವಿರಾರು ಭಕ್ತರು ನಿಂತಿರುವ ಫೋಟೋ, ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಮತ್ತೊಂದು ರೀತಿಯ ಆತಂಕ ಸೃಷ್ಟಿಸಿದೆ. ಇದಕ್ಕೆ ಜನರಿಂದ ಭಾರೀ ಆಕ್ರೋಶವೂ ವ್ಯಕ್ತವಾಗುತ್ತಿದೆ. ತಿಂಗಳಾನುಗಟ್ಟಲೆ ಲಾಕ್​ಡೌನ್ ಮಾಡಿದರೂ, ಕೊರೋನಾದಿಂದ ಕೆಲವು ತಿಂಗಳ ಹಿಂದೆ ದಿನಕ್ಕೆ ಸಾವಿರಾರು ಜನರು ಸಾವನ್ನಪ್ಪಿದರೂ ಜನರು ಇನ್ನೂ ಬುದ್ಧಿ ಕಲಿತಿಲ್ಲ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

ಉತ್ತರಾಖಂಡದಲ್ಲಿ ವೀಕೆಂಡ್ ಲಾಕ್​ಡೌನ್ ತೆರವುಗೊಳಿಸಿದರೆ ಬೇರೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಅದರಿಂದ ಡೆಲ್ಟಾ ಪ್ಲಸ್ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಬುಧವಾರವಷ್ಟೇ ನೈನಿತಾಲ್ ಹೈಕೋರ್ಟ್​ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಡೆಲ್ಟಾ ರೂಪಾಂತರಿ ಸೋಂಕು ಮಾತ್ರವಲ್ಲದೆ ಕಪ್ಪ ರೂಪಾಂತರಿ ವೈರಸ್ ಕೂಡ ಉತ್ತರ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಎರಡು ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಕೂಡ ಪತ್ತೆಯಾಗಿವೆ. ಹೀಗಾಗಿ, ಕೊರೋನಾ ತಪಾಸಣೆಯನ್ನು ಕೂಡ ಹೆಚ್ಚಿಸಲಾಗಿದೆ.

after Kempty Falls Crowd Thousands of Tourists Spotted at Haridwar's Har ki Pauri without Masks Social Distancing

ಹರಿದ್ವಾರದಲ್ಲಿ ಜನದಟ್ಟಣೆ

ಲಾಕ್​ಡೌನ್ ಬಳಿಕ ನೈನಿತಾಲ್ ಹಿಲ್ ಸ್ಟೇಷನ್​ಗಳಿಗೆ ವೀಕೆಂಡ್​ನಲ್ಲಿ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ಇಲ್ಲಿಗೆ ಬರುವ ಪ್ರವಾಸಿಗರ ಮೇಲೆ ನಿಯಂತ್ರಣ ಹೇರಲು ಇದೀಗ ನೈನಿತಾಲ್ ಜಿಲ್ಲಾಡಳಿತ ದ್ವಿಚಕ್ರ ವಾಹನ ಸವಾರರ ಪ್ರವೇಶಕ್ಕೆ ನಿಷೇಧ ಹೇರಿದೆ. ಮುಸ್ಸೂರಿಯಲ್ಲಿ ಕೂಡ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು ಬಾರಿ 50 ಜನರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ.

2 ದಿನಗಳ ಹಿಂದಷ್ಟೇ ಮಸ್ಸೂರಿಯ ಕೆಂಪ್ಟಿ ಜಲಪಾತದ ಕೆಳಗೆ ನೂರಾರು ಜನರು ಮಾಸ್ಕ್ ಇಲ್ಲದೆ ನೀರಿನಲ್ಲಿ ಆಟವಾಡುತ್ತಾ, ಫೋಟೋ ತೆಗೆಸಿಕೊಳ್ಳುತ್ತಾ ಎಂಜಾಯ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಮನಾಲಿಯಲ್ಲಿ ಕೂಡ ಪ್ರವಾಸಿಗರು ಕಿಕ್ಕಿರಿದು ಸೇರಿದ್ದ ವಿಡಿಯೋಗಳು ಹರಿದಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕೊರೋನಾಗೆ ಮತ್ತೆ ಬಹಿರಂಗ ಆಹ್ವಾನ ನೀಡಬೇಡಿ ಎಂದು ಜನರಿಗೆ ಮನವಿ ಮಾಡಿದೆ.

ಇದನ್ನೂ ಓದಿ: Char Dham Yatra Suspended: ಕುಂಭಮೇಳದ ಬಳಿಕ ಎಚ್ಚೆತ್ತುಕೊಂಡ ಉತ್ತರಾಖಂಡ್ ಸರ್ಕಾರ; ಚಾರ್ ಧಾಮ್ ಯಾತ್ರೆ ರದ್ದು

ಇದನ್ನೂ ಓದಿ: ‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್