Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ, ಕೊನೆಗೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ

ದೆಹಲಿ: ವಿವಾದದ ಕಿಡಿ ಹೊತ್ತಿಸಿದ್ದ ಪೌರತ್ವ ತಿದ್ದುಪಡಿ ಮಸೂದೆ ಸಾಕಷ್ಟು ಕೋಲಾಹಲದ ನಡುವೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಮಸೂದೆ ಕುರಿತು ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ ನಡೆದಿದೆ. ಬಳಿಕ ಮತಕ್ಕೆ ಹಾಕಿದಾಗ ಮಸೂದೆ ಪರವಾಗಿ 311 ಹಾಗೂ ವಿರುದ್ಧ 82 ಮತಗಳು ಬಂದವು. ಲೋಕಸಭೆಯಲ್ಲಿ ಪಾಸಾಯ್ತು ಪೌರತ್ವ ತಿದ್ದುಪಡಿ ಮಸೂದೆ: ಆರಂಭದಿಂದಲೂ ವಿವಾದಕ್ಕೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕವನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಲೋಕಸಭೆಯಲ್ಲಿ ಮಂಡಿಸಿದ್ರು. ವಿಧೇಯಕ ಮಂಡನೆಗೆ ಕಾಂಗ್ರೆಸ್‌, ಟಿಎಂಸಿ ಹಾಗೂ ಇತರ ವಿಪಕ್ಷಗಳು […]

ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ, ಕೊನೆಗೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ
Follow us
ಸಾಧು ಶ್ರೀನಾಥ್​
|

Updated on:Dec 10, 2019 | 11:32 AM

ದೆಹಲಿ: ವಿವಾದದ ಕಿಡಿ ಹೊತ್ತಿಸಿದ್ದ ಪೌರತ್ವ ತಿದ್ದುಪಡಿ ಮಸೂದೆ ಸಾಕಷ್ಟು ಕೋಲಾಹಲದ ನಡುವೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಮಸೂದೆ ಕುರಿತು ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ ನಡೆದಿದೆ. ಬಳಿಕ ಮತಕ್ಕೆ ಹಾಕಿದಾಗ ಮಸೂದೆ ಪರವಾಗಿ 311 ಹಾಗೂ ವಿರುದ್ಧ 82 ಮತಗಳು ಬಂದವು.

ಲೋಕಸಭೆಯಲ್ಲಿ ಪಾಸಾಯ್ತು ಪೌರತ್ವ ತಿದ್ದುಪಡಿ ಮಸೂದೆ: ಆರಂಭದಿಂದಲೂ ವಿವಾದಕ್ಕೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕವನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಲೋಕಸಭೆಯಲ್ಲಿ ಮಂಡಿಸಿದ್ರು. ವಿಧೇಯಕ ಮಂಡನೆಗೆ ಕಾಂಗ್ರೆಸ್‌, ಟಿಎಂಸಿ ಹಾಗೂ ಇತರ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಹೀಗಾಗಿ, ಮತ ವಿಭಜನೆ ಬಳಿಕ ಮಸೂದೆಯನ್ನ ಮಂಡಿಸಲಾಯ್ತು. ಈ ವೇಳೆ ಮಾತನಾಡಿದ ಅಮಿತ್ ಶಾ, ದೇಶದ ಸುರಕ್ಷತೆಯನ್ನ ಗಮನದಲ್ಲಿಟ್ಟುಕೊಂಡು ವಿಧೇಯಕವನ್ನ ನೋಡಬೇಕು. ನುಸುಳುಕೋರರು ಮತ್ತು ನಿರಾಶ್ರಿತರ ನಡುವಣ ವ್ಯತ್ಯಾಸ ಗುರುತಿಸಲು ಇದು ಅಗತ್ಯ ಅಂದ್ರು.

ಇನ್ನು ಪೌರತ್ವ ತಿದ್ದುಪಡಿ ಮಸೂದೆಯು ದೇಶದ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ ಅಂತ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಕಿಡಿಕಾರಿದ್ರು. ಜೊತೆಗೆ ಇದು ಹಿಟ್ಲರ್ ಜಾರಿಗೆ ತಂದಿದ್ದ ಜನಾಂಗೀಯ ತಾರತಮ್ಯ ನೀತಿಗಿಂತಲೂ ಕ್ರೂರವಾದದ್ದು ಅಂತ ಮಸೂದೆಯ ಪ್ರತಿಯನ್ನೇ ಹರಿದು ಹಾಕಿದ್ರು.

ಏನಿದು ಪೌರತ್ವ ತಿದ್ದುಪಡಿ ಮಸೂದೆ..? ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘನಿಸ್ತಾನದಿಂದ ಬಂದು ಭಾರತದಲ್ಲಿ ನೆಲೆಸಿದ ಹಿಂದೂ, ಸಿಖ್‌, ಬೌದ್ಧ, ಜೈನ್‌, ಪಾರ್ಸಿ ಹಾಗೂ ಕ್ರಿಶ್ಚಿಯನ್‌ ಧರ್ಮದ ನಿರಾಶ್ರಿತರಿಗೆ ಕಾಯಂ ಪೌರತ್ವ ನೀಡುವುದು ಪೌರತ್ವ ತಿದ್ದುಪಡಿ ವಿಧೇಯಕದ ಉದ್ದೇಶವಾಗಿದೆ. 2014, ಡಿಸೆಂಬರ್‌ 31ರ ಒಳಗೆ ಬಂದು ನೆಲೆಸಿದವರಿಗೆ ಮಾತ್ರ ಈ ವಿಧೇಯಕದ ಸವಲತ್ತು ಅನ್ವಯವಾಗಲಿದೆ.

5 ವರ್ಷ ಕಾಲ ನಿರಂತರ ಭಾರತದಲ್ಲಿ ವಾಸವಿರುವ ನಿರಾಶ್ರಿತರು ಕಾಯಂ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಈ ಹಿಂದೆ ಇದರ ಮಿತಿಯು ಹನ್ನೊಂದು ವರ್ಷಗಳಿಗೆ ನಿಗದಿಯಾಗಿತ್ತು. ಆದ್ರೆ ಅಸ್ಸಾಂ, ಮೇಘಾಲಯ, ತ್ರಿಪುರಾ ಅಥವಾ ಮಿಜೋರಾಂ ರಾಜ್ಯಗಳ ಬುಡಕಟ್ಟು ಪ್ರದೇಶಗಳ ವಲಸಿಗರಿಗೆ ಈ ವಿಧೇಯಕ ಅನ್ವಯವಾಗುವುದಿಲ್ಲ. ಸಂವಿಧಾನದ 6ನೇ ಶೆಡ್ಯೂಲ್‌ ಹಾಗೂ ಬಂಗಾಳ ಪೂರ್ವ ಗಡಿನಾಡು ನಿಯಂತ್ರಣ ಕಾಯ್ದೆ 1873ರ ವ್ಯಾಪ್ತಿಗೆ ಒಳಪಟ್ಟ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌ ಮತ್ತು ಮಿಜೋರಾಂ ರಾಜ್ಯಗಳನ್ನ ಇದರ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಇನ್ನು ಮಸೂದೆಯು ಮುಸ್ಲಿಂ ವಿರೋಧಿ ಎಂಬ ಆರೋಪವನ್ನ ಅಮಿತ್​ ಶಾ ತಳ್ಳಿ ಹಾಕಿದ್ರು. ಜೊತೆಗೆ ಮೋದಿ ನೇತೃತ್ವದ ಸರ್ಕಾರ ಎಲ್ಲಾ ಧರ್ಮೀಯರ ಹಿತವನ್ನ ಕಾಪಾಡಲು ಬದ್ಧ ಅಂದ್ರು. ಹೀಗೆ ಸುದೀರ್ಘ ಚರ್ಚೆ, ಕೋಲಾಹಲ ನಡೆದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮಸೂದೆಯನ್ನ ಮತಕ್ಕೆ ಹಾಕಲಾಯ್ತು. ಈ ವೇಳೆ ಮಸೂದೆಯ ಪರವಾಗಿ 311 ಬಂದು ಅಂಗೀಕಾರವಾಯ್ತು.

ಲೋಕಸಭೆಯಲ್ಲಿ ಅಂಗೀಕಾರವಾದ ಮಸೂದೆಯು ನಾಳೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ ಮೇಲ್ಮನೆಯಲ್ಲೂ ಮಸೂದೆ ಪಾಸಾದ್ರೆ ಕಾಯ್ದೆಯಾಗಿ ಜಾರಿಗೆ ಬರಲಿದೆ. ಒಟ್ನಲ್ಲಿ, ವಿಪಕ್ಷಗಳು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ರೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಪಾಸಾಗಿದೆ.

Published On - 8:19 am, Tue, 10 December 19

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ