AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ಲಜನಕ ಸಿಗದೆ ಮೃತಪಟ್ಟ ತಾಯಿಯ ನೆನಪಿಗಾಗಿ ಆಟೋದಲ್ಲಿ ಆಕ್ಸಿಜನ್ ಪೂರೈಸುತ್ತಿರುವ ಯುವತಿ..; ಚೆನ್ನೈನಲ್ಲಿ ಫೇಮಸ್​ ಆಯ್ತು ‘ಆಕ್ಸಿಜನ್ ಆಟೋ’

ಚೆನ್ನೈನಲ್ಲಿ ಸೀತಾದೇವಿ ಎಂಬುವರ ತಾಯಿಯೂ ಸಹ ಕೊವಿಡ್​ 19ನಿಂದ ಬಳಲಿ, ಆಕ್ಸಿಜನ್​ ಸಿಗದೆ ಮೇ 1ರಂದು ಮೃತಪಟ್ಟಿದ್ದಾರೆ. ಇವರ ಹೆಸರು ವಿಜಯಾ, ಏಪ್ರಿಲ್​ 30ರಂದು ಸಂಜೆ 8ಗಂಟೆ ಹೊತ್ತಿಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.

ಆಮ್ಲಜನಕ ಸಿಗದೆ ಮೃತಪಟ್ಟ ತಾಯಿಯ ನೆನಪಿಗಾಗಿ ಆಟೋದಲ್ಲಿ ಆಕ್ಸಿಜನ್ ಪೂರೈಸುತ್ತಿರುವ ಯುವತಿ..; ಚೆನ್ನೈನಲ್ಲಿ ಫೇಮಸ್​ ಆಯ್ತು ‘ಆಕ್ಸಿಜನ್ ಆಟೋ’
ಆಕ್ಸಿಜನ್​ ಆಟೋ ಶುರು ಮಾಡಿರುವ ಯುವತಿ
Lakshmi Hegde
|

Updated on: May 26, 2021 | 10:35 PM

Share

ಕೊವಿಡ್​ 19 ಎರಡನೇ ಅಲೆ ಸಿಕ್ಕಾಪಟೆ ಜಾಸ್ತಿಯಾಗುತ್ತಿದೆ. ಕೊರೊನಾ ಸೋಂಕು ಉಲ್ಬಣಗೊಂಡ ಬೆನ್ನಲ್ಲೇ ದೇಶದಲ್ಲಿ ಆಕ್ಸಿಜನ್ ಅಭಾವ ತೀವ್ರವಾಗಿ ಕಾಡುತ್ತಿದೆ. ಅನೇಕ ರೋಗಿಗಳು ಸಕಾಲಕ್ಕೆ ಆಕ್ಸಿಜನ್ ಸಿಗದೆ ಮೃತಪಟ್ಟಿದ್ದಾರೆ. ಈ ಪರಿಸ್ಥಿತಿ ತಮಿಳುನಾಡಿನಲ್ಲೂ ಹೊರತಲ್ಲ.

ಹಾಗೇ, ಚೆನ್ನೈನಲ್ಲಿ ಸೀತಾದೇವಿ ಎಂಬುವರ ತಾಯಿಯೂ ಸಹ ಕೊವಿಡ್​ 19ನಿಂದ ಬಳಲಿ, ಆಕ್ಸಿಜನ್​ ಸಿಗದೆ ಮೇ 1ರಂದು ಮೃತಪಟ್ಟಿದ್ದಾರೆ. ಇವರ ಹೆಸರು ವಿಜಯಾ, ಏಪ್ರಿಲ್​ 30ರಂದು ಸಂಜೆ 8ಗಂಟೆ ಹೊತ್ತಿಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಇತ್ತ ವಿಜಯಾ ಅವರ ಆಕ್ಸಿಜನ್​ ಮಟ್ಟ ಕುಸಿಯುತ್ತಿದ್ದರೂ, ಆಸ್ಪತ್ರೆಯಲ್ಲಿ ಬೆಡ್​ ಸಿಗಲಿಲ್ಲ. ಸುಮಾರು 1 ತಾಸು ಸೀತಾ ದೇವಿ ತನ್ನ ತಾಯಿಯನ್ನು ದಾಖಲಿಸಲೆಂದು ಕಾದಿದ್ದಾರೆ. ನಾರ್ಮಲ್ ಬೆಡ್​ ಸಿಕ್ಕಿತಾದರೂ ಆಕ್ಸಿಜನ್​ ಬೆಡ್​ ಸಿಗಲೇ ಇಲ್ಲ. 12 ತಾಸು ಕಾದರೂ ಆಮ್ಲಜನಕ ಸಿಗಲಿಲ್ಲ. ಇದರ ಪರಿಣಾಮ ವಿಜಯಾ ಮೃತಪಟ್ಟರು.

ತನ್ನ ತಾಯಿ ಆಕ್ಸಿಜನ್​ ಸಿಗದೆ ಮೃತಪಟ್ಟಿದ್ದಾರೆ. ಅದೇ ಪರಿಸ್ಥಿತಿ ಇನ್ನೊಬ್ಬರಿಗೆ ಉಂಟಾಗಬಾರದು. ತನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಬೇಕು ಎಂದು ನಿರ್ಧರಿಸಿದ ಸೀತಾ ದೇವಿ, ಒಂದು ಎನ್​ಜಿಒ ಸ್ಥಾಪಿಸಿದ್ದಾರೆ. ಅದರ ಮೂಲಕ ಆಟೋದಲ್ಲಿ ಆಕ್ಸಿಜನ್ ಸೇವೆ ನೀಡುತ್ತಿದ್ದಾರೆ. ಇವರ ಆಕ್ಸಿಜನ್ ಆಟೋ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆ ಎದುರಲ್ಲೇ ಪಾರ್ಕ್ ಆಗಿರುತ್ತದೆ. ಮೇ 5ರಿಂದಲೇ ಇವರು ಆಮ್ಲಜನಕ ಸೇವೆ ಪ್ರಾರಂಭವಾಗಿದ್ದು, ಸೀತಾ ದೇವಿಯವರಿಗೆ ಶರತ್​ ಕುಮಾತ್​ ಮತ್ತು ಮೋಹನ್​ರಾಜ್​ ಎಂಬುವರೂ ಸಹಾಯ ಮಾಡುತ್ತಿದ್ದಾರೆ. ಪ್ರತಿದಿನವೂ ತನ್ನ ಆಟೋದಿಂದ ಕನಿಷ್ಠ 20 ಜನರು ಆಮ್ಲಜನಕ ಸೇವೆ ಪಡೆಯುತ್ತಿದ್ದಾರೆ. ಇದರಲ್ಲಿ ನನಗೆ ಸಂತೋಷ ಇದೆ ಎನ್ನುತ್ತಾರೆ ಸೀತಾ ದೇವಿ. ಇವರ ಸೇವೆಯನ್ನು ಗುರುತಿಸಿ ಗ್ರೇಟರ್​ ಚೆನ್ನೈ ಕಾರ್ಪೋರೇಶನ್​ ಮೇ 25ರಂದು ಸೀತಾ ದೇವಿ ಸೇರಿ ಒಟ್ಟು 250 ಜನರಿಗೆ ಕೊವಿಡ್​ ಬ್ರಿಗೇಡ್​ ಬ್ಯಾಂಡ್ ನೀಡಿದೆ. ಲಾಕ್​ಡೌನ್​ ಸಮಯದಲ್ಲೂ ನಗರದ ಯಾವುದೇ ಭಾಗಕ್ಕೆ ತೆರಳಲು ಅನುಮತಿ ನೀಡಿದೆ.

ಇದನ್ನೂ ಓದಿ: ಬಾಬಾ ರಾಮ್​ದೇವ್​ ವಿರುದ್ಧ ಐಎಂಎಯಿಂದ 1000 ಕೋಟಿ ರೂ.ಮಾನನಷ್ಟ ಮೊಕದ್ದಮೆ; ಪ್ರಧಾನಿ ನರೇಂದ್ರ ಮೋದಿಗೆ ಪತ್ರ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್