AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಿರುದ್ಧದ ಹೋರಾಟದಲ್ಲಿ ಬಳಸುವ ವಸ್ತುಗಳ ತೆರಿಗೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

Nirmala Sitharaman On Covid Vaccine Tax: ಈಗಾಗಲೇ ವಿದೇಶಗಳಿಂದ ಆಮದಾಗುವ ಕೊವಿಡ್ ಔಷಧಗಳ ಮೇಲಿನ ತೆರಿಗೆಗೆ ವಿನಾಯತಿ ನೀಡಲಾಗಿದೆ. ಈ ಮೂಲಕ ಲಸಿಕೆ, ಮೆಡಿಕಲ್ ಆಕ್ಸಿಜನ್ ಮುಂತಾದ ಉತ್ಪನ್ನಗಳ ಬೆಲೆ ಇಳಿಕೆ ಮಾಡುವಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಅವರು ಟ್ವೀಟ್​ನಲ್ಲಿ ವಿವರಿಸಿದ್ದಾರೆ.

ಕೊವಿಡ್ ವಿರುದ್ಧದ ಹೋರಾಟದಲ್ಲಿ ಬಳಸುವ ವಸ್ತುಗಳ ತೆರಿಗೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
guruganesh bhat
|

Updated on: May 09, 2021 | 11:04 PM

Share

ದೆಹಲಿ: ಕೊವಿಡ್ 19ರ ಹೋರಾಟಕ್ಕೆ ಬಳಸುತ್ತಿರುವ ವಸ್ತುಗಳ ಬೆಲೆ ಕಡಿಮೆ ಇರಲು ಲಸಿಕೆಗೆ ಶೇಕಡಾ 5ರಷ್ಟು ಮತ್ತು ಔಷಧ ಮತ್ತು ಆಕ್ಸಿಜನ್ ಕಾನ್ಸ್​ಟ್ರೇಟರ್​ಗಳ ಮೇಲೆ ಶೇಕಡಾ 12ರಷ್ಟು ತೆರಿಗೆ ಅನಿವಾರ್ಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊವಿಡ್ ಸಂಬಂಧಿತ ಔಷಧ, ಆಮ್ಲಜನಕದ ಸಿಲಿಂಡರ್​ಗಳ ಮೇಲಿನ ಜಿಎಸ್​ಟಿ ಮತ್ತು ಕಸ್ಟಮ್ ಸುಂಕ ರದ್ದುಗೊಳಿಸುವಂತೆ ಮಾಡಿರುವ ಮನವಿಗೆ ಕೇಂದ್ರ ಹಣಕಾಸು ಸಚಿವೆ 16 ಸರಣಿ ಟ್ವೀಟ್​ಗಳ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.

ಕೊವಿಡ್ ವಿರುದ್ಧದ ಹೋರಾಟಕ್ಕೆ ಬಳಸುತ್ತಿರುವ ಈ ಉತ್ಪನ್ನಗಳಿಗೆ ಜಿಎಸ್​ಟಿಯಿಂದ (ಸರಕು ಮತ್ತು ಸೇವಾ ತೆರಿಗೆ) ಸಂಪೂರ್ಣ ವಿನಾಯಿತಿ ನೀಡಿದರೆ, ಈ ಉತ್ಪನ್ನಗಳ ದೇಶೀಯ ಉತ್ಪಾದಕರು ತಮ್ಮ ಒಳಹರಿವಿನ ಸೇವೆಗಳಿಗೆ ಪಾವತಿಸುವ ತೆರಿಗೆಯನ್ನು ಸರಿದೂಗಿಸಲು ಸಾಧ್ಯವಾಗುವುದಿಲ್ಲ. ಹಾಗಾದಲ್ಲಿ ಅಂತಿಮವಾಗಿ ವಸ್ತುವಿನ ಬೆಲೆ ಹೆಚ್ಚಿಸಬೇಕಾಗುತ್ತದೆ. ಇದು ಗ್ರಾಹಕರ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಈಗಾಗಲೇ ವಿದೇಶಗಳಿಂದ ಆಮದಾಗುವ ಕೊವಿಡ್ ಔಷಧಗಳ ಮೇಲಿನ ತೆರಿಗೆಗೆ ವಿನಾಯತಿ ನೀಡಲಾಗಿದೆ. ಈ ಮೂಲಕ ಲಸಿಕೆ, ಮೆಡಿಕಲ್ ಆಕ್ಸಿಜನ್ ಮುಂತಾದ ಉತ್ಪನ್ನಗಳ ಬೆಲೆ ಇಳಿಕೆ ಮಾಡುವಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಅವರು ಟ್ವೀಟ್​ನಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ

Mamata Banerjee Swearing-in Ceremony: ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ

(After Mamata Banerjee letter FM Nirmala Sitharaman explain tax on covid vaccines)

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ