AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಮಣಿಪುರ ಆಯ್ತು ಈಗ ಪಶ್ಚಿಮ ಬಂಗಾಳ ಸರದಿ; ಮಾಲ್ಡಾದಲ್ಲಿ ಇಬ್ಬರು ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ

ಕಳ್ಳತನದ ಆರೋಪದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲವಾರು ಮಹಿಳೆಯರು ಹಲ್ಲೆ ನಡೆಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಆದರೆ, ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪಶ್ಚಿಮ ಬಂಗಾಳ ಪೊಲೀಸರು ಹೇಳಿದ್ದಾರೆ.

West Bengal: ಮಣಿಪುರ ಆಯ್ತು ಈಗ ಪಶ್ಚಿಮ ಬಂಗಾಳ ಸರದಿ; ಮಾಲ್ಡಾದಲ್ಲಿ ಇಬ್ಬರು ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಂದರ್ಭ ನಡೆದಿದ್ದ ಹಿಂಸಾಚಾರದ ಸಂಗ್ರಹ ಚಿತ್ರImage Credit source: PTI
Follow us
Ganapathi Sharma
|

Updated on:Jul 22, 2023 | 3:16 PM

ಕೋಲ್ಕತ್ತ, ಜುಲೈ 22: ಮಣಿಪುರದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಪಶ್ಚಿಮ ಬಂಗಾಳ(West Bengal) ಮಾಲ್ಡಾದಲ್ಲಿ ಅಂಥದ್ದೇ ಕೃತ್ಯ ಎಸಗಲಾಗಿದೆ. ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದನ್ನು ಪ್ರದರ್ಶಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೆಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದೆ. ಮಾಲ್ಡಾದ ಪಕುವಾಹತ್‌ನಲ್ಲಿ (Malda’s Pakuahat) ಸ್ಥಳೀಯರು ಕಳ್ಳತನದ ಶಂಕೆಯ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಕಳ್ಳತನದ ಆರೋಪದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲವಾರು ಮಹಿಳೆಯರು ಹಲ್ಲೆ ನಡೆಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಆದರೆ, ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪಶ್ಚಿಮ ಬಂಗಾಳ ಪೊಲೀಸರು ಹೇಳಿದ್ದಾರೆ.

ವಿಡಿಯೋ ಗಮನಕ್ಕೆ ಬಂದ ನಂತರವೇ ಘಟನೆಯ ಬಗ್ಗೆ ತಿಳಿಯಿತು ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಮಹಿಳೆಯರು ಕಳ್ಳತನ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ನಂತರ ಸ್ಥಳೀಯ ಮಹಿಳೆಯರಿಂದ ಥಳಿಸಲ್ಪಟ್ಟಿದ್ದಾರೆ ಎಂಬುದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ; ವಿಧಾನಸಭೆಯಲ್ಲೇ ಹೇಳಿಕೆ ನೀಡಿದ ಸಚಿವ​ ರಾಜೇಂದ್ರ ಸಿಂಗ್ ವಜಾ

ಘಟನೆಯ ನಂತರ ಹಲ್ಲೆ ನಡೆಸಿದ ಮಹಿಳೆಯರೂ ಪರಾರಿಯಾಗಿದ್ದಾರೆ. ಥಳಿತಕ್ಕೊಳಗಾದವರು ಭಯದಿಂದ ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

ಇದೀಗ ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವನೆ ನೀಡಿದ್ದಾರೆ.

ಈ ಮಧ್ಯೆ, ಮಣಿಪುರದ ಬೆತ್ತಲೆ ಮೆರವಣಿಗೆ ಪ್ರರಕಣಕ್ಕೆ ಸಂಬಂಧಿಸಿ ಒಟ್ಟು 5 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಮಣಿಪುರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:59 am, Sat, 22 July 23

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ