AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಂಧೇರಿಯಲ್ಲಿರುವ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ನಡೆಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 22, 2020 | 6:18 PM

Share

ಮುಂಬೈ: ಕೊವಿಡ್ ನಿಯಮ ಉಲ್ಲಂಘಿಸಿದ್ದ ನೈಟ್ ಕ್ಲಬ್ ಮೇಲೆ ಮುಂಬೈ ಪೊಲೀಸರು ಮಂಗಳವಾರ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿ 34 ಮಂದಿಯನ್ನು ಬಂಧಿಸಿದ್ದರು.

ಈ ದಾಳಿ ನಂತರ ಟ್ವೀಟ್ ಮಾಡಿರುವ  ಮುಂಬೈ ಪೊಲೀಸರು, ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು. ಅಂಧೇರಿಯಲ್ಲಿರುವ ನೈಟ್ ಕ್ಲಬ್​​ನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದೇವೆ. 34 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದು ಇದರಲ್ಲಿ 19 ಮಂದಿ ದೆಹಲಿ ಮತ್ತು ಪಂಜಾಬ್​​ನವರಾಗಿದ್ದಾರೆ. ಕೆಲವು ಸೆಲಬ್ರಿಟಿಗಳೂ ಇಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಧೆ ವರದಿ ಮಾಡಿದೆ. ಬಂಧಿತರಾದವರಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವಾ ಮೊದಲಾದ ಸೆಲೆಬ್ರಿಟಿಗಳಿದ್ದು ಇವರಿಗೆ ಜಾಮೀನು ನೀಡಲಾಗಿದೆ.

ಕ್ರಿಸ್​​ಮಸ್ ಮತ್ತು ಹೊಸವರ್ಷದ ಆಚರಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರ ಸರ್ಕಾರ ಎಲ್ಲ ನಗರ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ನಿರ್ಬಂಧವಿರಲಿದೆ.

ಹೊಸ ವರ್ಷವನ್ನು ನಾವು ಪ್ರತಿಬಾರಿಯಂತೆ ಆಚರಿಸಲಾಗುವುದಿಲ್ಲ. ಕೊರೊನಾ ಸೋಂಕು ಹರಡದಂತೆ ವಿಧಿಸಿರುವ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಕರ್ಫ್ಯೂ ಹೇರಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಹೇಳಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

Follow Us
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!