AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಂಧೇರಿಯಲ್ಲಿರುವ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ನಡೆಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 22, 2020 | 6:18 PM

Share

ಮುಂಬೈ: ಕೊವಿಡ್ ನಿಯಮ ಉಲ್ಲಂಘಿಸಿದ್ದ ನೈಟ್ ಕ್ಲಬ್ ಮೇಲೆ ಮುಂಬೈ ಪೊಲೀಸರು ಮಂಗಳವಾರ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿ 34 ಮಂದಿಯನ್ನು ಬಂಧಿಸಿದ್ದರು.

ಈ ದಾಳಿ ನಂತರ ಟ್ವೀಟ್ ಮಾಡಿರುವ  ಮುಂಬೈ ಪೊಲೀಸರು, ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು. ಅಂಧೇರಿಯಲ್ಲಿರುವ ನೈಟ್ ಕ್ಲಬ್​​ನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದೇವೆ. 34 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದು ಇದರಲ್ಲಿ 19 ಮಂದಿ ದೆಹಲಿ ಮತ್ತು ಪಂಜಾಬ್​​ನವರಾಗಿದ್ದಾರೆ. ಕೆಲವು ಸೆಲಬ್ರಿಟಿಗಳೂ ಇಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಧೆ ವರದಿ ಮಾಡಿದೆ. ಬಂಧಿತರಾದವರಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವಾ ಮೊದಲಾದ ಸೆಲೆಬ್ರಿಟಿಗಳಿದ್ದು ಇವರಿಗೆ ಜಾಮೀನು ನೀಡಲಾಗಿದೆ.

ಕ್ರಿಸ್​​ಮಸ್ ಮತ್ತು ಹೊಸವರ್ಷದ ಆಚರಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರ ಸರ್ಕಾರ ಎಲ್ಲ ನಗರ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ನಿರ್ಬಂಧವಿರಲಿದೆ.

ಹೊಸ ವರ್ಷವನ್ನು ನಾವು ಪ್ರತಿಬಾರಿಯಂತೆ ಆಚರಿಸಲಾಗುವುದಿಲ್ಲ. ಕೊರೊನಾ ಸೋಂಕು ಹರಡದಂತೆ ವಿಧಿಸಿರುವ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಕರ್ಫ್ಯೂ ಹೇರಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಹೇಳಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

Follow Us
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ