AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಂಧೇರಿಯಲ್ಲಿರುವ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ನಡೆಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 22, 2020 | 6:18 PM

Share

ಮುಂಬೈ: ಕೊವಿಡ್ ನಿಯಮ ಉಲ್ಲಂಘಿಸಿದ್ದ ನೈಟ್ ಕ್ಲಬ್ ಮೇಲೆ ಮುಂಬೈ ಪೊಲೀಸರು ಮಂಗಳವಾರ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿ 34 ಮಂದಿಯನ್ನು ಬಂಧಿಸಿದ್ದರು.

ಈ ದಾಳಿ ನಂತರ ಟ್ವೀಟ್ ಮಾಡಿರುವ  ಮುಂಬೈ ಪೊಲೀಸರು, ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು. ಅಂಧೇರಿಯಲ್ಲಿರುವ ನೈಟ್ ಕ್ಲಬ್​​ನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದೇವೆ. 34 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದು ಇದರಲ್ಲಿ 19 ಮಂದಿ ದೆಹಲಿ ಮತ್ತು ಪಂಜಾಬ್​​ನವರಾಗಿದ್ದಾರೆ. ಕೆಲವು ಸೆಲಬ್ರಿಟಿಗಳೂ ಇಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಧೆ ವರದಿ ಮಾಡಿದೆ. ಬಂಧಿತರಾದವರಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವಾ ಮೊದಲಾದ ಸೆಲೆಬ್ರಿಟಿಗಳಿದ್ದು ಇವರಿಗೆ ಜಾಮೀನು ನೀಡಲಾಗಿದೆ.

ಕ್ರಿಸ್​​ಮಸ್ ಮತ್ತು ಹೊಸವರ್ಷದ ಆಚರಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರ ಸರ್ಕಾರ ಎಲ್ಲ ನಗರ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ನಿರ್ಬಂಧವಿರಲಿದೆ.

ಹೊಸ ವರ್ಷವನ್ನು ನಾವು ಪ್ರತಿಬಾರಿಯಂತೆ ಆಚರಿಸಲಾಗುವುದಿಲ್ಲ. ಕೊರೊನಾ ಸೋಂಕು ಹರಡದಂತೆ ವಿಧಿಸಿರುವ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಕರ್ಫ್ಯೂ ಹೇರಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಹೇಳಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ