AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಂಧೇರಿಯಲ್ಲಿರುವ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ನಡೆಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 22, 2020 | 6:18 PM

Share

ಮುಂಬೈ: ಕೊವಿಡ್ ನಿಯಮ ಉಲ್ಲಂಘಿಸಿದ್ದ ನೈಟ್ ಕ್ಲಬ್ ಮೇಲೆ ಮುಂಬೈ ಪೊಲೀಸರು ಮಂಗಳವಾರ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿ 34 ಮಂದಿಯನ್ನು ಬಂಧಿಸಿದ್ದರು.

ಈ ದಾಳಿ ನಂತರ ಟ್ವೀಟ್ ಮಾಡಿರುವ  ಮುಂಬೈ ಪೊಲೀಸರು, ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು. ಅಂಧೇರಿಯಲ್ಲಿರುವ ನೈಟ್ ಕ್ಲಬ್​​ನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದೇವೆ. 34 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದು ಇದರಲ್ಲಿ 19 ಮಂದಿ ದೆಹಲಿ ಮತ್ತು ಪಂಜಾಬ್​​ನವರಾಗಿದ್ದಾರೆ. ಕೆಲವು ಸೆಲಬ್ರಿಟಿಗಳೂ ಇಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಧೆ ವರದಿ ಮಾಡಿದೆ. ಬಂಧಿತರಾದವರಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವಾ ಮೊದಲಾದ ಸೆಲೆಬ್ರಿಟಿಗಳಿದ್ದು ಇವರಿಗೆ ಜಾಮೀನು ನೀಡಲಾಗಿದೆ.

ಕ್ರಿಸ್​​ಮಸ್ ಮತ್ತು ಹೊಸವರ್ಷದ ಆಚರಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರ ಸರ್ಕಾರ ಎಲ್ಲ ನಗರ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ನಿರ್ಬಂಧವಿರಲಿದೆ.

ಹೊಸ ವರ್ಷವನ್ನು ನಾವು ಪ್ರತಿಬಾರಿಯಂತೆ ಆಚರಿಸಲಾಗುವುದಿಲ್ಲ. ಕೊರೊನಾ ಸೋಂಕು ಹರಡದಂತೆ ವಿಧಿಸಿರುವ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಕರ್ಫ್ಯೂ ಹೇರಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಹೇಳಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ