AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಂಧೇರಿಯಲ್ಲಿರುವ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ನಡೆಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 22, 2020 | 6:18 PM

Share

ಮುಂಬೈ: ಕೊವಿಡ್ ನಿಯಮ ಉಲ್ಲಂಘಿಸಿದ್ದ ನೈಟ್ ಕ್ಲಬ್ ಮೇಲೆ ಮುಂಬೈ ಪೊಲೀಸರು ಮಂಗಳವಾರ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿ 34 ಮಂದಿಯನ್ನು ಬಂಧಿಸಿದ್ದರು.

ಈ ದಾಳಿ ನಂತರ ಟ್ವೀಟ್ ಮಾಡಿರುವ  ಮುಂಬೈ ಪೊಲೀಸರು, ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು. ಅಂಧೇರಿಯಲ್ಲಿರುವ ನೈಟ್ ಕ್ಲಬ್​​ನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದೇವೆ. 34 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದು ಇದರಲ್ಲಿ 19 ಮಂದಿ ದೆಹಲಿ ಮತ್ತು ಪಂಜಾಬ್​​ನವರಾಗಿದ್ದಾರೆ. ಕೆಲವು ಸೆಲಬ್ರಿಟಿಗಳೂ ಇಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಧೆ ವರದಿ ಮಾಡಿದೆ. ಬಂಧಿತರಾದವರಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವಾ ಮೊದಲಾದ ಸೆಲೆಬ್ರಿಟಿಗಳಿದ್ದು ಇವರಿಗೆ ಜಾಮೀನು ನೀಡಲಾಗಿದೆ.

ಕ್ರಿಸ್​​ಮಸ್ ಮತ್ತು ಹೊಸವರ್ಷದ ಆಚರಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರ ಸರ್ಕಾರ ಎಲ್ಲ ನಗರ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ನಿರ್ಬಂಧವಿರಲಿದೆ.

ಹೊಸ ವರ್ಷವನ್ನು ನಾವು ಪ್ರತಿಬಾರಿಯಂತೆ ಆಚರಿಸಲಾಗುವುದಿಲ್ಲ. ಕೊರೊನಾ ಸೋಂಕು ಹರಡದಂತೆ ವಿಧಿಸಿರುವ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಕರ್ಫ್ಯೂ ಹೇರಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಹೇಳಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್