Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಂಧೇರಿಯಲ್ಲಿರುವ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ನಡೆಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
| Updated By: KUSHAL V

Updated on: Dec 22, 2020 | 6:18 PM

ಮುಂಬೈ: ಕೊವಿಡ್ ನಿಯಮ ಉಲ್ಲಂಘಿಸಿದ್ದ ನೈಟ್ ಕ್ಲಬ್ ಮೇಲೆ ಮುಂಬೈ ಪೊಲೀಸರು ಮಂಗಳವಾರ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿ 34 ಮಂದಿಯನ್ನು ಬಂಧಿಸಿದ್ದರು.

ಈ ದಾಳಿ ನಂತರ ಟ್ವೀಟ್ ಮಾಡಿರುವ  ಮುಂಬೈ ಪೊಲೀಸರು, ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು. ಅಂಧೇರಿಯಲ್ಲಿರುವ ನೈಟ್ ಕ್ಲಬ್​​ನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದೇವೆ. 34 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದು ಇದರಲ್ಲಿ 19 ಮಂದಿ ದೆಹಲಿ ಮತ್ತು ಪಂಜಾಬ್​​ನವರಾಗಿದ್ದಾರೆ. ಕೆಲವು ಸೆಲಬ್ರಿಟಿಗಳೂ ಇಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಧೆ ವರದಿ ಮಾಡಿದೆ. ಬಂಧಿತರಾದವರಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವಾ ಮೊದಲಾದ ಸೆಲೆಬ್ರಿಟಿಗಳಿದ್ದು ಇವರಿಗೆ ಜಾಮೀನು ನೀಡಲಾಗಿದೆ.

ಕ್ರಿಸ್​​ಮಸ್ ಮತ್ತು ಹೊಸವರ್ಷದ ಆಚರಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರ ಸರ್ಕಾರ ಎಲ್ಲ ನಗರ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ನಿರ್ಬಂಧವಿರಲಿದೆ.

ಹೊಸ ವರ್ಷವನ್ನು ನಾವು ಪ್ರತಿಬಾರಿಯಂತೆ ಆಚರಿಸಲಾಗುವುದಿಲ್ಲ. ಕೊರೊನಾ ಸೋಂಕು ಹರಡದಂತೆ ವಿಧಿಸಿರುವ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಕರ್ಫ್ಯೂ ಹೇರಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಹೇಳಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್