AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೆಜಿ ತೂಕ ಕಳೆದುಕೊಂಡರೆ ಅಭಿವೃದ್ಧಿ ಕಾರ್ಯಗಳಿಗಾಗಿ ₹1,000 ಕೋಟಿ; ಗಡ್ಕರಿ ವಾಗ್ದಾನವನ್ನು ಸ್ವೀಕರಿಸಿ 15ಕೆಜಿ ಕಳೆದುಕೊಂಡ ಉಜ್ಜಯಿನಿ ಸಂಸದ

ಮಿತವಾದ ಆಹಾರ ಮತ್ತು ದೈಹಿಕ ವ್ಯಾಯಾಮ, ಸೈಕ್ಲಿಂಗ್ ಮತ್ತು ಯೋಗದಲ್ಲಿ ತೊಡಗಿಸಿಕೊಳ್ಳುವ ಮೂಲಕ ನಾನು ಇದನ್ನು ಸಾಧಿಸುತ್ತಿದ್ದೇನೆ. ನಾನು ಮೊದಲು 127 ಕಿಲೋಗ್ರಾಂಗಳಷ್ಟು ಇದ್ದೆ. ಈಗ ನಾನು 15 ಕಿಲೋಗ್ರಾಂಗಳಷ್ಟು ತೂಕವನ್ನು ಕಳೆದುಕೊಂಡಿರುವುದರಿಂದ...

ಒಂದು ಕೆಜಿ ತೂಕ ಕಳೆದುಕೊಂಡರೆ ಅಭಿವೃದ್ಧಿ ಕಾರ್ಯಗಳಿಗಾಗಿ ₹1,000 ಕೋಟಿ; ಗಡ್ಕರಿ ವಾಗ್ದಾನವನ್ನು ಸ್ವೀಕರಿಸಿ 15ಕೆಜಿ ಕಳೆದುಕೊಂಡ ಉಜ್ಜಯಿನಿ ಸಂಸದ
ಬಿಜೆಪಿ ಸಂಸದ ಅನಿಲ್ ಫಿರೋಜಿಯಾImage Credit source: ಪಿಟಿಐ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 12, 2022 | 3:08 PM

Share

ಉಜ್ಜಯಿನಿಯ (Ujjain) ಬಿಜೆಪಿ ಸಂಸದ ಅನಿಲ್ ಫಿರೋಜಿಯಾ (Nitin Gadkari) ಅವರು ಗಮನಾರ್ಹವಾದ ತೂಕ ಇಳಿಸುವ ಪ್ರಯಾಣದಲ್ಲಿದ್ದಾರೆ. “ಪ್ರತಿ ಕೆಜಿ ಕಳೆದುಕೊಂಡರೆ 1,000 ಕೋಟಿ ರೂಪಾಯಿಗಳನ್ನು” ಗಳಿಸಬಹುದು ಎಂಬ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari)ಅವರ ಭರವಸೆಯಿಂದ ಅನಿಲ್ ತಮ್ಮ ತೂಕ ಇಳಿಸಲು ಶುರು ಮಾಡಿದ್ದಾರೆ. ಈ ವರ್ಷದ ಫೆಬ್ರುವರಿಯಲ್ಲಿ ಕೆಲವು ಯೋಜನೆಗಳ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ ಅವರು “ಫಂಡ್ಸ್ ಫಾರ್ ಫ್ಲಾಬ್” (funds for flab)ಭರವಸೆ ನೀಡಿದ ನಂತರ ಸಂಸದರು  ತೂಕ ಇಳಿಸಿಕೊಳ್ಳಲು  ಶುರು ಮಾಡಿದರು. ಮೊದಲ ಬಾರಿಗೆ ಸಂಸದರಾಗಿರುವ ಫಿರೋಜಿಯಾ ಅವರು ಫೆಬ್ರವರಿಯಲ್ಲಿ 127 ಕಿಲೋಗ್ರಾಂಗಳಷ್ಟು ತೂಕ ಹೊಂದಿದ್ದರು ಎಂದು ಶನಿವಾರ ಪಿಟಿಐಗೆ ತಿಳಿಸಿದರು. ನನ್ನನ್ನು ಫಿಟ್ ಆಗುವಂತೆ ಪ್ರೇರೇಪಿಸಲು ಫೆಬ್ರವರಿಯಲ್ಲಿ ಗಡ್ಕರಿ ಈ ಘೋಷಣೆ ಮಾಡಿದ್ದರು. ನಾನು ಕಳೆದುಕೊಂಡ ಪ್ರತಿ ಕಿಲೋಗ್ರಾಂ ತೂಕದ ಅಭಿವೃದ್ಧಿ ಕಾಮಗಾರಿಗಳಿಗೆ 1,000 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಹೇಳಿದ್ದರು. ನಾನು ಅವರ ಸವಾಲನ್ನು ಸ್ವೀಕರಿಸಿದೆ. ಕಳೆದ ನಾಲ್ಕು ತಿಂಗಳಲ್ಲಿ 15 ಕಿಲೋಗ್ರಾಂಗಳಷ್ಟು ಕಳೆದುಕೊಂಡಿದ್ದೇನೆ ಎಂದು ಫಿರೋಜಿಯಾ ಹೇಳಿದರು.

ಮಿತವಾದ ಆಹಾರ ಮತ್ತು ದೈಹಿಕ ವ್ಯಾಯಾಮ, ಸೈಕ್ಲಿಂಗ್ ಮತ್ತು ಯೋಗದಲ್ಲಿ ತೊಡಗಿಸಿಕೊಳ್ಳುವ ಮೂಲಕ ನಾನು ಇದನ್ನು ಸಾಧಿಸುತ್ತಿದ್ದೇನೆ. ನಾನು ಮೊದಲು 127 ಕಿಲೋಗ್ರಾಂಗಳಷ್ಟು ಇದ್ದೆ. ಈಗ ನಾನು 15 ಕಿಲೋಗ್ರಾಂಗಳಷ್ಟು ತೂಕವನ್ನು ಕಳೆದುಕೊಂಡಿರುವುದರಿಂದ ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ 15,000 ಕೋಟಿ ರೂ ಕೇಳಲು ನಾನು ಅರ್ಹನಾಗಿದ್ದೇನೆ ಎಂದು ಎಲ್ಎಸ್ ಸಂಸದರು ಹೇಳಿದ್ದಾರೆ.

ತಮ್ಮ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಹಣ ಸಿಗುವಂತೆ ತೂಕ ಇಳಿಸುವುದನ್ನು ಮುಂದುವರಿಸುವುದಾಗಿ ಹೇಳಿದರು. ಫೆಬ್ರವರಿಯಲ್ಲಿ ಭಾಷಣ ಮಾಡಿದ ಗಡ್ಕರಿ ಅವರು ತಮ್ಮದೇ ಆದ ತೂಕ ಇಳಿಸಿದ ಪ್ರಯಾಣದ ಬಗ್ಗೆ ಮಾತನಾಡಿದ್ದು, ಇದು ಫಿರೋಜಿಯಾ ಅವರನ್ನು ಪ್ರೇರೇಪಿಸುತ್ತದೆ ಎಂದು ಭಾವಿಸಿದ್ದೇನೆ ಎಂದಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:06 pm, Sun, 12 June 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ