AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಚಿನ್ನದ ಸರ ಬೇಕೆಂದು ಅತ್ತೆ-ಮಾವನಿಂದ ಸೊಸೆಯ ಕೊಲೆ

ನೊಯ್ಡಾದಲ್ಲಿ ನಿಕ್ಕಿ ಎಂಬ ಮಹಿಳೆಯನ್ನು ವರದಕ್ಷಿಣೆಗಾಗಿ ಕೊಲೆ ಮಾಡಿರುವ ಘಟನೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಬಿಹಾರದಲ್ಲಿ ಅತ್ತೆ-ಮಾವ ಚಿನ್ನದ ಸರಕ್ಕಾಗಿ ತಮ್ಮ ಸೊಸೆಯನ್ನು ಕೊಲೆ ಮಾಡಿದ್ದಾರೆ. ಖಗಾರಿಯಾದ ಬರ್ಖಂಡಿ ಟೋಲಾದ 20 ವರ್ಷದ ಮಹಿಳೆ ಡಿ.ಸಿ ಕುಮಾರಿಯನ್ನು ವರದಕ್ಷಿಣೆಗಾಗಿ ಅತ್ತೆ-ಮಾವಂದಿರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಹಾರದಲ್ಲಿ ಚಿನ್ನದ ಸರ ಬೇಕೆಂದು ಅತ್ತೆ-ಮಾವನಿಂದ ಸೊಸೆಯ ಕೊಲೆ
Gold Chain
ಸುಷ್ಮಾ ಚಕ್ರೆ
|

Updated on:Aug 27, 2025 | 5:17 PM

Share

ನೊಯ್ಡಾ, ಆಗಸ್ಟ್ 27: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ನಿಕ್ಕಿ ಎಂಬ ಮಹಿಳೆಯನ್ನು ಆಕೆಯ ಗಂಡ ಹಾಗೂ ಅತ್ತೆ ಸೇರಿ ಬೆಂಕಿ ಹಚ್ಚಿ ಕೊಂದಿದ್ದರು. ವರದಕ್ಷಿಣೆಗಾಗಿ (Dowry) ನಡೆದಿದ್ದ ಈ ಕೊಲೆಯ ಬೆನ್ನಲ್ಲೇ ಅದೇ ರೀತಿಯ ಇನ್ನೊಂದು ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ 20 ವರ್ಷದ ಮಹಿಳೆಯಾದ ಡಿ.ಸಿ ಕುಮಾರಿಯನ್ನು ಅವರ ಅತ್ತೆ-ಮಾವಂದಿರು ವರದಕ್ಷಿಣೆಗಾಗಿ ಕೊಂದಿದ್ದಾರೆ. ಕುಮಾರಿಯನ್ನು ಮದುವೆ ಮಾಡಿಕೊಡುವಾಗ ಆಕೆಯ ತವರುಮನೆಯವರು ಭರವಸೆ ನೀಡಿದ್ದ ಚಿನ್ನದ ಸರವನ್ನು ಆಕೆಯ ಕುಟುಂಬದವರು ನೀಡಿಲ್ಲ ಎಂಬ ಕಾರಣಕ್ಕೆ ಆಕೆಯ ಕತ್ತು ಹಿಸುಕಿ ನಂತರ ನೇಣು ಹಾಕಲಾಗಿದೆ.

ಆ ಮಹಿಳೆ ಸುಮಾರು 1 ವರ್ಷದ ಹಿಂದೆ ವಿಭೀಷಣ್ ಯಾದವ್ ಅವರನ್ನು ವಿವಾಹವಾಗಿದ್ದರು. ಮುಂಗೇರ್ ನಿವಾಸಿಯಾಗಿರುವ ಆಕೆಯ ತಂದೆ ಜಾಗೋ ಯಾದವ್ ತಮ್ಮ ಮಗಳ ಪತಿ ಮತ್ತು ಆಕೆಯ ಅತ್ತೆ-ಮಾವಂದಿರು ವರದಕ್ಷಿಣೆಗಾಗಿ ಆಕೆಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಸ್ವಲ್ಪ ಸಮಯದ ನಂತರ ಅವರ ಬೇಡಿಕೆಗಳನ್ನು ಈಡೇರಿಸುವುದಾಗಿ ನಾನು ಆಕೆಯ ಅತ್ತೆ-ಮಾವಂದಿರಿಗೆ ಭರವಸೆ ನೀಡಿದ್ದೆ. ಆದರೆ ಅವರು ಒಪ್ಪಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೊಯ್ಡಾ ವರದಕ್ಷಿಣೆ ಕಿರುಕುಳ ಪ್ರಕರಣ; ನಿಕ್ಕಿಯನ್ನು ಸುಟ್ಟು ಕೊಲ್ಲಲು 1 ತಿಂಗಳಿಂದ ರೆಡಿಯಾಗಿತ್ತು ಪ್ಲಾನ್!

ಮೃತ ಮಹಿಳೆಯ ಪತಿ ಕೃಷಿ ಮಾಡುತ್ತಿದ್ದರು. ಆದರೆ, ನಂತರ ಗಾಂಜಾ ಮತ್ತು ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದ ಎಂದು ಆರೋಪಿಸಲಾಗಿದೆ. ಆಕೆಯ ಸಹೋದರ ಸಂದೀಪ್ ಕುಮಾರ್, ತನ್ನ ಸಹೋದರಿಯನ್ನು ಆಕೆಯ ಅತ್ತೆ-ಮಾವಂದಿರು ಆಕೆಯ ದೇಹವನ್ನು ನೇಣು ಹಾಕುವ ಮೊದಲು ಕ್ರೂರವಾಗಿ ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ದೇಹದಾದ್ಯಂತ ಗಾಯದ ಗುರುತುಗಳಿತ್ತು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Wed, 27 August 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ