Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಹೆಣ್ಣುಮಕ್ಕಳು ಮೈನೆರೆದ ತಕ್ಷಣ ಮದುವೆಗೆ ಅರ್ಹರು: ಪಂಜಾಬ್​-ಹರ್ಯಾಣ ಹೈಕೋರ್ಟ್​ ತೀರ್ಪು

ಬಾಲ್ಯ ವಿವಾಹ ಕಾಯ್ದೆ (2006) ಪ್ರಕಾರ ಭಾರತದ ಯಾವುದೇ ವ್ಯಕ್ತಿ 18 ವರ್ಷ ತುಂಬುವುದರಳೊಗೆ ವಿವಾಹವಾದರೆ ಅದನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ.

ಮುಸ್ಲಿಂ ಹೆಣ್ಣುಮಕ್ಕಳು ಮೈನೆರೆದ ತಕ್ಷಣ ಮದುವೆಗೆ ಅರ್ಹರು: ಪಂಜಾಬ್​-ಹರ್ಯಾಣ ಹೈಕೋರ್ಟ್​ ತೀರ್ಪು
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 10, 2021 | 8:05 PM

ನವದೆಹಲಿ: 18 ವರ್ಷ ತುಂಬದಿದ್ದರೂ ಮುಸ್ಲಿಂ ಹೆಣ್ಣುಮಕ್ಕಳು ಮೈನೆರೆದ ತಕ್ಷಣ ಮದುವೆ ಆಗಬಹುದು. ಇದಕ್ಕೆ ಮುಸ್ಲಿಂ ವೈಯಕ್ತಿಕ ಕಾನೂನು ಸಮ್ಮತಿಸುತ್ತದೆ ಎಂದು ಪಂಜಾಬ್​-ಹರ್ಯಾಣ ಹೈಕೋರ್ಟ್​ ತೀರ್ಪು ನೀಡಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ (2006) ಪ್ರಕಾರ ಭಾರತದಲ್ಲಿ 18 ವರ್ಷಕ್ಕಿಂತ ಕಡಿಮೆ ವಯೋಮಾನದ ಯುವತಿಯರು ಮದುವೆಯಾದರೆ ಅದನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ. ಈ ಕಾನೂನಿನ ಹಿನ್ನೆಲೆಯಲ್ಲಿ ಪಂಜಾಬ್-ಹರ್ಯಾಣ ಹೈಕೋರ್ಟ್​ ತೀರ್ಪನ್ನು ಹಲವರು ‘ವಿವಾದಾತ್ಮಕ’ ಎಂದು ವಿಶ್ಲೇಷಿಸುತ್ತಿದ್ದಾರೆ.

ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರು ಬರೆದಿರುವ ‘ಪ್ರಿನ್ಸಿಪಲ್ಸ್​ ಆಫ ಮೊಹಮ್ಮದನ್ ಲಾ’ (ಮೊಹಮದ್ದೀಯರ​ ಕಾನೂನಿನ ತತ್ವಗಳು) ಪುಸ್ತಕದ 195ನೇ ವಿಧಿಯನ್ನು ಉಲ್ಲೇಖಿಸಿ ಹೈಕೋರ್ಟ್​ ಈ ತೀರ್ಪು ನೀಡಿದೆ. ಪ್ರೌಢಾವಸ್ಥೆ ತಲುಪುವ ಮುಸ್ಲಿಂ ಹುಡುಗಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಆಗಬಹುದು ಎಂದು ಹೈಕೋರ್ಟ್​ ಹೇಳಿದೆ.

ಮುಸ್ಲಿಂ ಕಾನೂನಿನ ಪ್ರಕಾರ ಪ್ರೌಢಾವಸ್ಥೆಗೆ ಬರುವುದು ಮತ್ತು ಮೆಜಾರಿಟಿ ಎರಡೂ ಒಂದೇ. ಹೀಗಾಗಿ ಮುಸ್ಲಿಂ ಸಮುದಾಯದವರು 15ನೇ ವರ್ಷಕ್ಕೆ ಮೆಜಾರಿಟಿ ಪಡೆದುಕೊಂಡಿರುತ್ತಾರೆ. ಪ್ರೌಢಾವಸ್ಥೆಗೆ ಬಂದ ನಂತರ ಅವರು ಬೇಕಾದವರನ್ನು ಮದುವೆ ಆಗಬಹುದು. ಪಾಲಕರಿಗೆ ಇದರಲ್ಲಿ ಮಧ್ಯ ಪ್ರವೇಶಿಸುವ ಹಕ್ಕಿಲ್ಲ. ಆದರೆ, ಕೆಲ ಸಂಬಂಧಿಕರಿಂದ ಈ ಹಕ್ಕು ತೊಂದರೆಗೀಡಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಈ ವಾದ ಆಲಿಸಿದ ನಂತರ ಮುಸ್ಲಿಂ ಹುಡುಗಿ ಮುಸ್ಲಿಂ ವೈಯಕ್ತಿಕ ಕಾನೂನಿಗೆ ಒಳಪಟ್ಟಿರುತ್ತಾಳೆ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಎರಡನೇ ಅರ್ಜಿದಾರರ (ಹುಡುಗಿ) ವಯಸ್ಸು 17 ವರ್ಷ. ಆಕೆ ತನ್ನಿಷ್ಟದ ಹುಡುಗುನನ್ನು ಮದುವೆ ಆಗಿದ್ದಾಳೆ. ಮೊದಲನೇ ಅರ್ಜಿದಾರನ (ಪುರುಷ) ವಯಸ್ಸು 36 ಎಂದು ಹೇಳಲಾಗಿದೆ. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಇಬ್ಬರದ್ದೂ ಮದುವೆ ಆಗುವ ವಯಸ್ಸು. ಹುಡುಗ-ಹುಡುಗಿ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆ ಆಗಿದ್ದಾರೆ ಎನ್ನುವ ಕಾರಣಕ್ಕೆ ನಾವು ಅವರ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ, ಮೊಹಾಲಿ ಪೊಲೀಸರು ಇವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಹೈಕೋರ್ಟ್​ ಸೂಚಿಸಿದೆ.

ಇದನ್ನೂ ಓದಿ: Ghulam Nabi Azad: ಹಿಂದೂಸ್ತಾನಿ ಮುಸ್ಲಿಂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ; ಗುಲಾಂ ನಬಿ ಆಜಾದ್

ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!