Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಕರೊಂದಿಗೆ ಜಗಳ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿ, ಕಾರು ಸಮೇತ ಗಂಗಾ ನದಿಗೆ ಹಾರಿದ ವ್ಯಕ್ತಿ

ವ್ಯಕ್ತಿಯೊಬ್ಬ ಸಂಬಂಧಿಕರೊಂದಿಗೆ ಜಗಳವಾಡಿ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿಯೊಂದಿಗೆ ಕಾರು ಚಲಾಯಿಸಿಕೊಂಡು ಹೋಗಿ ಗಂಗಾನದಿಗೆ ಹಾರಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಘಟನೆ ನಡೆದಿದೆ, ಸಂಬಂಧಿಕರೊಂದಿಗೆ ಜಗಳವಾಡಿದ ಬಳಿಕ ಗರ್ಭಿಣಿ ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ವೇಗವಾಗಿ ಕಾರು ಚಲಾಯಿಸಿಕೊಂಡು ಗಂಗಾ ನದಿಗೆ ಹಾರಿರುವ ಘಟನೆ ವರದಿಯಾಗಿದೆ.

ಸಂಬಂಧಿಕರೊಂದಿಗೆ ಜಗಳ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿ, ಕಾರು ಸಮೇತ ಗಂಗಾ ನದಿಗೆ ಹಾರಿದ ವ್ಯಕ್ತಿ
ಪೊಲೀಸ್
Follow us
ನಯನಾ ರಾಜೀವ್
|

Updated on: Aug 27, 2023 | 2:37 PM

ವ್ಯಕ್ತಿಯೊಬ್ಬ ಸಂಬಂಧಿಕರೊಂದಿಗೆ ಜಗಳವಾಡಿ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿಯೊಂದಿಗೆ ಕಾರು ಚಲಾಯಿಸಿಕೊಂಡು ಹೋಗಿ ಗಂಗಾನದಿಗೆ ಹಾರಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಘಟನೆ ನಡೆದಿದೆ, ಸಂಬಂಧಿಕರೊಂದಿಗೆ ಜಗಳವಾಡಿದ ಬಳಿಕ ಗರ್ಭಿಣಿ ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ವೇಗವಾಗಿ ಕಾರು ಚಲಾಯಿಸಿಕೊಂಡು ಗಂಗಾ ನದಿಗೆ ಹಾರಿರುವ ಘಟನೆ ವರದಿಯಾಗಿದೆ.

ಶಾ ಆಲಂ ಎಂಬ ಆರೋಪಿ ತನ್ನ ಪತ್ನಿ ನಾಜಿಯಾಳನ್ನು ದೆಹಲಿಗೆ ಕರೆದುಕೊಂಡು ಹೋಗಲು ಮುಂದಾಗಿದ್ದ, ಆದರೆ, ಸಂಬಂಧಿಕರು ಒಪ್ಪದ ಕಾರಣ ಅವರ ನಡುವೆ ವಾಗ್ವಾದ ನಡೆದಿದೆ.

ನಂತರ ಕೋಪದ ಭರದಲ್ಲಿ ಶಾ ಆಲಂ ಮೊದಲು ತನ್ನ ಹೆಂಡತಿಯನ್ನು ಕಾರಿನೊಳಗೆ ಕೂರಿಸಿ ಲಾಕ್​ ಮಾಡಿ, ಬಳಿಕ ತಂದೆಯ ಮೇಲೆ ಕೈ ಮಾಡಿದ್ದ. ನಂತರ ಅವರ ತಂದೆಯನ್ನು ಮೀರತ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರ ಸ್ಥಿತಿ ಗಂಭೀರವಾಗಿದೆ.

ದಂಪತಿಗಳು ದೆಹಲಿಯತ್ತ ಸಾಗಿದಾಗ, ಅವರ ಸಹೋದರಿ ಕೂಡ ಮಧ್ಯಪ್ರವೇಶಿಸಲು ಪ್ರಯತ್ನಿಸಿದರು, ಇದರ ಪರಿಣಾಮವಾಗಿ ಕಾರಿಗೆ ಡಿಕ್ಕಿ ಹೊಡೆದಾಗ ಸಣ್ಣಪುಟ್ಟ ಗಾಯಗಳಾಗಿವೆ.

ಮತ್ತಷ್ಟು ಓದಿ: ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಪಪ್ಸೆರಾ ಗ್ರಾಮವನ್ನು ತಲುಪಿದ ನಂತರ, ಶಾ ಆಲಂ ಕಾರನ್ನು ಗಂಗಾ ನದಿಯತ್ತ ಕಾರು ಓಡಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಶಾ ಆಲಂ ಅವರ ದೇಹವನ್ನು ನದಿಯಿಂದ ಹೊರತೆಗೆಯಲಾಯಿತು. ಪತ್ನಿ ನಾಜಿಯಾ ಮತ್ತು ಕಾರು ನಾಪತ್ತೆಯಾಗಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ನಾಜಿಯಾ ಮೃತದೇಹ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ