ಸಂಬಂಧಿಕರೊಂದಿಗೆ ಜಗಳ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿ, ಕಾರು ಸಮೇತ ಗಂಗಾ ನದಿಗೆ ಹಾರಿದ ವ್ಯಕ್ತಿ

ವ್ಯಕ್ತಿಯೊಬ್ಬ ಸಂಬಂಧಿಕರೊಂದಿಗೆ ಜಗಳವಾಡಿ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿಯೊಂದಿಗೆ ಕಾರು ಚಲಾಯಿಸಿಕೊಂಡು ಹೋಗಿ ಗಂಗಾನದಿಗೆ ಹಾರಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಘಟನೆ ನಡೆದಿದೆ, ಸಂಬಂಧಿಕರೊಂದಿಗೆ ಜಗಳವಾಡಿದ ಬಳಿಕ ಗರ್ಭಿಣಿ ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ವೇಗವಾಗಿ ಕಾರು ಚಲಾಯಿಸಿಕೊಂಡು ಗಂಗಾ ನದಿಗೆ ಹಾರಿರುವ ಘಟನೆ ವರದಿಯಾಗಿದೆ.

ಸಂಬಂಧಿಕರೊಂದಿಗೆ ಜಗಳ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿ, ಕಾರು ಸಮೇತ ಗಂಗಾ ನದಿಗೆ ಹಾರಿದ ವ್ಯಕ್ತಿ
ಪೊಲೀಸ್
Follow us
|

Updated on: Aug 27, 2023 | 2:37 PM

ವ್ಯಕ್ತಿಯೊಬ್ಬ ಸಂಬಂಧಿಕರೊಂದಿಗೆ ಜಗಳವಾಡಿ, ಕೋಪದ ಭರದಲ್ಲಿ ಗರ್ಭಿಣಿ ಪತ್ನಿಯೊಂದಿಗೆ ಕಾರು ಚಲಾಯಿಸಿಕೊಂಡು ಹೋಗಿ ಗಂಗಾನದಿಗೆ ಹಾರಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಘಟನೆ ನಡೆದಿದೆ, ಸಂಬಂಧಿಕರೊಂದಿಗೆ ಜಗಳವಾಡಿದ ಬಳಿಕ ಗರ್ಭಿಣಿ ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ವೇಗವಾಗಿ ಕಾರು ಚಲಾಯಿಸಿಕೊಂಡು ಗಂಗಾ ನದಿಗೆ ಹಾರಿರುವ ಘಟನೆ ವರದಿಯಾಗಿದೆ.

ಶಾ ಆಲಂ ಎಂಬ ಆರೋಪಿ ತನ್ನ ಪತ್ನಿ ನಾಜಿಯಾಳನ್ನು ದೆಹಲಿಗೆ ಕರೆದುಕೊಂಡು ಹೋಗಲು ಮುಂದಾಗಿದ್ದ, ಆದರೆ, ಸಂಬಂಧಿಕರು ಒಪ್ಪದ ಕಾರಣ ಅವರ ನಡುವೆ ವಾಗ್ವಾದ ನಡೆದಿದೆ.

ನಂತರ ಕೋಪದ ಭರದಲ್ಲಿ ಶಾ ಆಲಂ ಮೊದಲು ತನ್ನ ಹೆಂಡತಿಯನ್ನು ಕಾರಿನೊಳಗೆ ಕೂರಿಸಿ ಲಾಕ್​ ಮಾಡಿ, ಬಳಿಕ ತಂದೆಯ ಮೇಲೆ ಕೈ ಮಾಡಿದ್ದ. ನಂತರ ಅವರ ತಂದೆಯನ್ನು ಮೀರತ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರ ಸ್ಥಿತಿ ಗಂಭೀರವಾಗಿದೆ.

ದಂಪತಿಗಳು ದೆಹಲಿಯತ್ತ ಸಾಗಿದಾಗ, ಅವರ ಸಹೋದರಿ ಕೂಡ ಮಧ್ಯಪ್ರವೇಶಿಸಲು ಪ್ರಯತ್ನಿಸಿದರು, ಇದರ ಪರಿಣಾಮವಾಗಿ ಕಾರಿಗೆ ಡಿಕ್ಕಿ ಹೊಡೆದಾಗ ಸಣ್ಣಪುಟ್ಟ ಗಾಯಗಳಾಗಿವೆ.

ಮತ್ತಷ್ಟು ಓದಿ: ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಪಪ್ಸೆರಾ ಗ್ರಾಮವನ್ನು ತಲುಪಿದ ನಂತರ, ಶಾ ಆಲಂ ಕಾರನ್ನು ಗಂಗಾ ನದಿಯತ್ತ ಕಾರು ಓಡಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಶಾ ಆಲಂ ಅವರ ದೇಹವನ್ನು ನದಿಯಿಂದ ಹೊರತೆಗೆಯಲಾಯಿತು. ಪತ್ನಿ ನಾಜಿಯಾ ಮತ್ತು ಕಾರು ನಾಪತ್ತೆಯಾಗಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ನಾಜಿಯಾ ಮೃತದೇಹ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ