AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್ ಪ್ರವಾಸದಿಂದ ಹಿಂದಿರುಗಿದ ನಂತರ ಕಮಲ್ ಹಾಸನ್​​ಗೆ ಕೊರೊನಾ ಪಾಸಿಟಿವ್

Kamal Haasan ಅಮೆರಿಕ ಪ್ರವಾಸದಿಂದ ಹಿಂದಿರುಗಿದ ನಂತರ ಸ್ವಲ್ಪ ಕೆಮ್ಮು ಕಾಣಿಸಿಕೊಂಡಿತ್ತು. ನಂತರ ಕೊವಿಡ್ ಪರೀಕ್ಷೆಗೊಳಗಾಗಿದ್ದು ಕೊರೊನಾ ಪಾಸಿಟಿವ್ ಆಗಿದೆ ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

ಯುಎಸ್ ಪ್ರವಾಸದಿಂದ ಹಿಂದಿರುಗಿದ ನಂತರ ಕಮಲ್ ಹಾಸನ್​​ಗೆ ಕೊರೊನಾ ಪಾಸಿಟಿವ್
ಕಮಲ್ ಹಾಸನ್ (ಸಂಗ್ರಹ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 22, 2021 | 3:47 PM

Share

ಚೆನ್ನೈ: ನಟ-ರಾಜಕಾರಣಿ ಕಮಲ್ ಹಾಸನ್ (Kamal Haasan )ಅವರಿಗೆ  ಕೊವಿಡ್-19 (Covid-19)  ದೃಢಪಟ್ಟಿದೆ . ಈ ಬಗ್ಗೆ ಅವರೇ ಟ್ವೀಟ್  ಮಾಡಿದ್ದಾರೆ. ಅಮೆರಿಕ ಪ್ರವಾಸದಿಂದ ಹಿಂದಿರುಗಿದ ನಂತರ  ಸ್ವಲ್ಪ ಕೆಮ್ಮು ಕಾಣಿಸಿಕೊಂಡಿತ್ತು. ನಂತರ  ಕೊವಿಡ್ ಪರೀಕ್ಷೆಗೊಳಗಾಗಿದ್ದು ಕೊರೊನಾ ಪಾಸಿಟಿವ್ ಆಗಿದೆ ಎಂದು ಅವರು ಹೇಳಿದ್ದಾರೆ. ಕಮಲ್ ಹಾಸನ್ ಆಸ್ಪತ್ರೆಯಲ್ಲಿ ಸ್ವತಃ ಐಸೋಲೇಟ್ ಆಗಿದ್ದಾರೆ. “ಸಾಂಕ್ರಾಮಿಕ ರೋಗವು ಇನ್ನೂ ಕೊನೆಗೊಂಡಿಲ್ಲ” ಎಲ್ಲರೂ ಕಾಳಜಿ ವಹಿಸುವಂತೆ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಕಮಲ್ ಹಾಸನ್ ಅವರ ಅಭಿಮಾನಿಗಳು ಅವರ ಪೋಸ್ಟ್‌ಗೆ ಶೀಘ್ರವಾಗಿ ಗುಣವಾಗಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಇದೀಗ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲಾಗಿರುವ ನಂತರ ಬಿಗ್ ಬಾಸ್ ತಮಿಳು ಸೀಸನ್ 5 ಅನ್ನು ಯಾರು ನಡೆಸುತ್ತಾರೆ ಎಂದು ಕೆಲವರು ಕೇಳುತ್ತಿದ್ದಾರೆ.

ಕಮಲ್ ಹಾಸನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಎರಡು ವಾರಗಳ ನಂತರ ಅವರಿಗೆ ಕೊರೊನಾ ದೃಢಪಟ್ಟಿದೆ. ಕಮಲ್ ಅವರ ಹುಟ್ಟುಹಬ್ಬದ ಮುನ್ನಾದಿನದಂದು, ಅವರ ಮುಂಬರುವ ಚಿತ್ರ ವಿಕ್ರಮ್‌ನ ತಯಾರಕರು ಅದರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು. ಲೋಕೇಶ್ ಕನಕರಾಜ್ ನಿರ್ದೇಶನದ ವಿಕ್ರಮ್, ಕಮಲ್ ಹಾಸನ್ ಅವರ 232 ನೇ ಚಿತ್ರವಾಗಿದೆ. ಹಾಸನ್ ಕೂಡ ಟ್ವಿಟರ್​​ನಲ್ಲಿ ವಿಕ್ರಮ್ ಫಸ್ಟ್ ಲುಕ್ ಶೇರ್ ಮಾಡಿದ್ದಾರೆ. ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ ಅವರು “ಕಮಲ್ ಹಾಸನ್ ಸರ್ ಅವರಿಗೆ ನನ್ನಿಂದ ಒಂದು ಸಣ್ಣ ಉಡುಗೊರೆ. ಜನ್ಮದಿನದ ಶುಭಾಶಯಗಳು ಉಲಗನಾಯಗನ್” ಎಂದು ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಕಮಲ್ ಹಾಸನ್ ಹೊಸ ಟೀಸರ್‌ನ ಲಿಂಕ್ ಅನ್ನು ಲಗತ್ತಿಸಿ “ಪ್ರೀತಿಗೆ ಧನ್ಯವಾದಗಳು, ಲೋಕೇಶ್” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಇಬ್ಬರು ಸ್ಟಾರ್​ ನಟರ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಕಮಲ್​ ಹಾಸನ್​

Published On - 3:33 pm, Mon, 22 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ