AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ ಪದ ಬಳಕೆ ಕೈ ಬಿಟ್ಟು ಲಿಂಗ ತಟಸ್ಥ ಪದ ಬಳಸಲು ಸಂಸತ್​​ ನಿರ್ಧಾರ

"ಸದನದ ಎಲ್ಲಾ ಪ್ರಕ್ರಿಯೆಗಳನ್ನು (ಸಂಸದೀಯ ಪ್ರಶ್ನೆಗಳಿಗೆ ಉತ್ತರಗಳನ್ನು ಒಳಗೊಂಡಂತೆ) ಸಭಾಪತಿಗೆ ತಿಳಿಸಲಾಗುತ್ತದೆ. ಆದಾಗ್ಯೂ, ರಾಜ್ಯಸಭೆಯ ಮುಂದಿನ ಅಧಿವೇಶನದಿಂದ ಲಿಂಗ-ತಟಸ್ಥ ಉತ್ತರಗಳನ್ನು ಒದಗಿಸಲು ಸಚಿವಾಲಯಗಳಿಗೆ ತಿಳಿಸಲಾಗುವುದು...

ಸರ್ ಪದ ಬಳಕೆ ಕೈ ಬಿಟ್ಟು ಲಿಂಗ ತಟಸ್ಥ ಪದ ಬಳಸಲು ಸಂಸತ್​​ ನಿರ್ಧಾರ
ಸಂಸತ್ ಭವನ
TV9 Web
| Edited By: |

Updated on:Sep 21, 2022 | 9:47 PM

Share

ದೆಹಲಿ: “ಸರ್” ಬಳಕೆಯನ್ನು ಕೈಬಿಡುವಂತೆ ಶಿವಸೇನಾ (ShivSena) ಸಂಸದೆ ಪ್ರಿಯಾಂಕಾ ಚತುರ್ವೇದಿ(Priyanka Chaturvedi) ಮನವಿ ಮಾಡಿದ ನಂತರ ಸಂಸತ್ತಿನ ಪ್ರಶ್ನೆಗಳಿಗೆ ಉತ್ತರಗಳಿಗೆ ಇನ್ನು ಮುಂದೆ ಲಿಂಗ ತಟಸ್ಥ ಪದಗಳನ್ನು ಬಳಸಲಾಗುವುದು. ಪ್ರಿಯಾಂಕಾ ಕಳೆದ ತಿಂಗಳು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದಿದ್ದುಸಂಸತ್‌ನಲ್ಲಿ ಎತ್ತಲಾದ ಪ್ರಶ್ನೆಗಳಿಗೆ ಉತ್ತರಗಳನ್ನು ಒದಗಿಸಲಾಗಿದೆ, ಉತ್ತರವು ನಕಾರಾತ್ಮಕವಾಗಿರುವ ಸಂದರ್ಭಗಳಲ್ಲಿ No Sir ಎಂಬ ಪದವನ್ನು ಹೆಚ್ಚಾಗಿ ಬಳಸಲಾಗುತ್ತದೆ. ಸಂಸದೆ ಆಗಿ ಪ್ರಜಾಪ್ರಭುತ್ವದ ದೇಗುಲವೆಂಬ ಸಂಸತ್ತಿನಲ್ಲಿ ಲಿಂಗ ಬೇಧವಿಲ್ಲದ ಪದ ಬಳಸಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದರು. ಇಂದು, ಮಹಾರಾಷ್ಟ್ರ ಸಂಸದೆ ಸೆಪ್ಟೆಂಬರ್ 20 ರಂದು ರಾಜ್ಯಸಭಾ ಸಚಿವಾಲಯದಿಂದ ಪಡೆದ ಉತ್ತರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೀಗೆ ಹೇಳಲಾಗಿದೆ “ಸದನದ ಎಲ್ಲಾ ಪ್ರಕ್ರಿಯೆಗಳನ್ನು (ಸಂಸದೀಯ ಪ್ರಶ್ನೆಗಳಿಗೆ ಉತ್ತರಗಳನ್ನು ಒಳಗೊಂಡಂತೆ) ಸಭಾಪತಿಗೆ ತಿಳಿಸಲಾಗುತ್ತದೆ. ಆದಾಗ್ಯೂ, ರಾಜ್ಯಸಭೆಯ ಮುಂದಿನ ಅಧಿವೇಶನದಿಂದ ಲಿಂಗ-ತಟಸ್ಥ ಉತ್ತರಗಳನ್ನು ಒದಗಿಸಲು ಸಚಿವಾಲಯಗಳಿಗೆ ತಿಳಿಸಲಾಗುವುದು. ಏತನ್ಮಧ್ಯೆ ಪ್ರಸ್ತುತ ಸಭಾಪತಿ ಪುರುಷರಾಗಿದ್ದು, ಸಭಾಪತಿ ಸ್ಥಾನವನ್ನು ಮಹಿಳೆ ಅಲಂಕರಿಸಿದಾಗ ಅಲ್ಲಿ ಮೇಡಂ ಪದ ಬಳಕೆಯಾಗುತ್ತೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.

ಅದೇನೇ ಇರಲಿ, ಈಗ ಲೋಕಸಭೆಯಲ್ಲೂ ಅದೇ ಲಿಂಗ-ತಟಸ್ಥ ನಿಯಮಗಳನ್ನು ಅನುಸರಿಸಬೇಕು ಎಂದು ಹೇಳಲಾಗಿದೆ. ನಮ್ಮ ಸಂವಿಧಾನವು ಸಮಾನತೆಯ ತತ್ವವನ್ನು ಆಧರಿಸಿದೆ. ಇದು ಒಂದು ಸಣ್ಣ ಬದಲಾವಣೆಯಂತೆ ಕಂಡರೂ, ಸಂಸತ್ತಿನ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಅವರ ಪ್ರಾತಿನಿಧ್ಯವನ್ನು ನೀಡುವಲ್ಲಿ ಇದು ಬೃಹತ್ ಹೆಜ್ಜೆ ಎಂದು ಚತುರ್ವೇದಿ ಹೇಳಿದ್ದಾರೆ.

Published On - 9:27 pm, Wed, 21 September 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್