AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ ಪದ ಬಳಕೆ ಕೈ ಬಿಟ್ಟು ಲಿಂಗ ತಟಸ್ಥ ಪದ ಬಳಸಲು ಸಂಸತ್​​ ನಿರ್ಧಾರ

"ಸದನದ ಎಲ್ಲಾ ಪ್ರಕ್ರಿಯೆಗಳನ್ನು (ಸಂಸದೀಯ ಪ್ರಶ್ನೆಗಳಿಗೆ ಉತ್ತರಗಳನ್ನು ಒಳಗೊಂಡಂತೆ) ಸಭಾಪತಿಗೆ ತಿಳಿಸಲಾಗುತ್ತದೆ. ಆದಾಗ್ಯೂ, ರಾಜ್ಯಸಭೆಯ ಮುಂದಿನ ಅಧಿವೇಶನದಿಂದ ಲಿಂಗ-ತಟಸ್ಥ ಉತ್ತರಗಳನ್ನು ಒದಗಿಸಲು ಸಚಿವಾಲಯಗಳಿಗೆ ತಿಳಿಸಲಾಗುವುದು...

ಸರ್ ಪದ ಬಳಕೆ ಕೈ ಬಿಟ್ಟು ಲಿಂಗ ತಟಸ್ಥ ಪದ ಬಳಸಲು ಸಂಸತ್​​ ನಿರ್ಧಾರ
ಸಂಸತ್ ಭವನ
TV9 Web
| Edited By: |

Updated on:Sep 21, 2022 | 9:47 PM

Share

ದೆಹಲಿ: “ಸರ್” ಬಳಕೆಯನ್ನು ಕೈಬಿಡುವಂತೆ ಶಿವಸೇನಾ (ShivSena) ಸಂಸದೆ ಪ್ರಿಯಾಂಕಾ ಚತುರ್ವೇದಿ(Priyanka Chaturvedi) ಮನವಿ ಮಾಡಿದ ನಂತರ ಸಂಸತ್ತಿನ ಪ್ರಶ್ನೆಗಳಿಗೆ ಉತ್ತರಗಳಿಗೆ ಇನ್ನು ಮುಂದೆ ಲಿಂಗ ತಟಸ್ಥ ಪದಗಳನ್ನು ಬಳಸಲಾಗುವುದು. ಪ್ರಿಯಾಂಕಾ ಕಳೆದ ತಿಂಗಳು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದಿದ್ದುಸಂಸತ್‌ನಲ್ಲಿ ಎತ್ತಲಾದ ಪ್ರಶ್ನೆಗಳಿಗೆ ಉತ್ತರಗಳನ್ನು ಒದಗಿಸಲಾಗಿದೆ, ಉತ್ತರವು ನಕಾರಾತ್ಮಕವಾಗಿರುವ ಸಂದರ್ಭಗಳಲ್ಲಿ No Sir ಎಂಬ ಪದವನ್ನು ಹೆಚ್ಚಾಗಿ ಬಳಸಲಾಗುತ್ತದೆ. ಸಂಸದೆ ಆಗಿ ಪ್ರಜಾಪ್ರಭುತ್ವದ ದೇಗುಲವೆಂಬ ಸಂಸತ್ತಿನಲ್ಲಿ ಲಿಂಗ ಬೇಧವಿಲ್ಲದ ಪದ ಬಳಸಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದರು. ಇಂದು, ಮಹಾರಾಷ್ಟ್ರ ಸಂಸದೆ ಸೆಪ್ಟೆಂಬರ್ 20 ರಂದು ರಾಜ್ಯಸಭಾ ಸಚಿವಾಲಯದಿಂದ ಪಡೆದ ಉತ್ತರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೀಗೆ ಹೇಳಲಾಗಿದೆ “ಸದನದ ಎಲ್ಲಾ ಪ್ರಕ್ರಿಯೆಗಳನ್ನು (ಸಂಸದೀಯ ಪ್ರಶ್ನೆಗಳಿಗೆ ಉತ್ತರಗಳನ್ನು ಒಳಗೊಂಡಂತೆ) ಸಭಾಪತಿಗೆ ತಿಳಿಸಲಾಗುತ್ತದೆ. ಆದಾಗ್ಯೂ, ರಾಜ್ಯಸಭೆಯ ಮುಂದಿನ ಅಧಿವೇಶನದಿಂದ ಲಿಂಗ-ತಟಸ್ಥ ಉತ್ತರಗಳನ್ನು ಒದಗಿಸಲು ಸಚಿವಾಲಯಗಳಿಗೆ ತಿಳಿಸಲಾಗುವುದು. ಏತನ್ಮಧ್ಯೆ ಪ್ರಸ್ತುತ ಸಭಾಪತಿ ಪುರುಷರಾಗಿದ್ದು, ಸಭಾಪತಿ ಸ್ಥಾನವನ್ನು ಮಹಿಳೆ ಅಲಂಕರಿಸಿದಾಗ ಅಲ್ಲಿ ಮೇಡಂ ಪದ ಬಳಕೆಯಾಗುತ್ತೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.

ಅದೇನೇ ಇರಲಿ, ಈಗ ಲೋಕಸಭೆಯಲ್ಲೂ ಅದೇ ಲಿಂಗ-ತಟಸ್ಥ ನಿಯಮಗಳನ್ನು ಅನುಸರಿಸಬೇಕು ಎಂದು ಹೇಳಲಾಗಿದೆ. ನಮ್ಮ ಸಂವಿಧಾನವು ಸಮಾನತೆಯ ತತ್ವವನ್ನು ಆಧರಿಸಿದೆ. ಇದು ಒಂದು ಸಣ್ಣ ಬದಲಾವಣೆಯಂತೆ ಕಂಡರೂ, ಸಂಸತ್ತಿನ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಅವರ ಪ್ರಾತಿನಿಧ್ಯವನ್ನು ನೀಡುವಲ್ಲಿ ಇದು ಬೃಹತ್ ಹೆಜ್ಜೆ ಎಂದು ಚತುರ್ವೇದಿ ಹೇಳಿದ್ದಾರೆ.

Published On - 9:27 pm, Wed, 21 September 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ