AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಪರಿಣಾಮ ಆರೋಪ: ಕೋವಿಶೀಲ್ಡ್​ ಲಸಿಕೆಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾದ ಅಸ್ಟ್ರಾಜೆನೆಕಾ

AstraZeneca withdraws COVID vaccine: ಅಸ್ಟ್ರಾಜೆನೆಕಾ ವಿಶ್ವದಾದ್ಯಂತ ಇರುವ ಔಷಧೀಯ ಮಾರುಕಟ್ಟೆಗಳಿಂದ ಕೋವಿಶೀಲ್ಡ್​ ಕೋವಿಡ್ ಲಸಿಕೆಯನ್ನು ಹಿಂಪಡೆಯಲು ಮುಮದಾಗಿದೆ. ಈ ಕೋವಿಡ್ ಲಸಿಕೆಯು ಅಪಾಯಕಾರಿ ಅಡ್ಡಪರಿಣಾಮವನ್ನು ಉಂಟು ಮಾಡಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಕಂಪನಿಯು ಒಪ್ಪಿಕೊಂಡ ಬಳಿಕ ಜಾಗತಿಕವಾಗಿ ಲಸಿಕೆಯನ್ನು ಹಿಂಪಡೆದಿದೆ.

ಅಡ್ಡಪರಿಣಾಮ ಆರೋಪ: ಕೋವಿಶೀಲ್ಡ್​ ಲಸಿಕೆಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾದ ಅಸ್ಟ್ರಾಜೆನೆಕಾ
ಕೋವಿಶೀಲ್ಡ್​
ನಯನಾ ರಾಜೀವ್
|

Updated on:May 08, 2024 | 9:19 AM

Share

ಕೋವಿಶೀಲ್ಡ್​ ಲಸಿಕೆ ತಯಾರಕಾ ಕಂಪನಿ ಅಸ್ಟ್ರಾಜೆನೆಕಾ(Astrazeneca) ಇದೀಗ ಪ್ರಪಂಚದಾದ್ಯಂತ ಔಷಧ ಮಾರುಕಟ್ಟೆಗಳಿಂದ ಲಸಿಕೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದೆ. ಕೋವಿಶೀಲ್ಡ್(Covishield)​ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಇದಾದ ಬಳಿಕ ಕಂಪನಿಯು ಈ ನಿರ್ಧಾರ ಮಾಡಿದೆ ಎಂದು ರಾಯ್ಟರ್ಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸಾಂಕ್ರಾಮಿಕ ರೋಗಗಳ ಬಳಿಕ ಬೇಡಿಕೆಯು ಕಡಿಮೆಯಾಗಿದೆ. ಇದಲ್ಲದೆ ಉತ್ಪಾದನೆ ಹಾಗೂ ಪೂರೈಕೆಯನ್ನು ಕೂಡ ನಿಲ್ಲಿಸಲಾಗಿದೆ.

ಅಸ್ಟ್ರಾಜೆನೆಕಾ ಸ್ವೀಡಿಶ್ ಬಹುರಾಷ್ಟ್ರೀಯ ಔಷಧೀಯ ಮತ್ತು ಜೈವಿಕ ತಂತ್ರಜ್ಞಾನ ಕಂಪನಿಯಾಗಿದ್ದು, ಕೇಂಬ್ರಿಡ್ಜ್​ ಬಯೋಮೆಡಿಕಲ್ ಕ್ಯಾಂಪಸ್​ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಕಂಪನಿಯು ತನ್ನ ಕೋವಿಡ್ ಲಸಿಕೆಗಳನ್ನು ಪ್ರಪಂಚದಾದ್ಯಂತದ ಮಾರುಕಟ್ಟೆಗಳಿಂದ ಹಿಂಪಡೆಯುತ್ತಿದೆ. ಹೆಚ್ಚುವರಿಯಾಗಿ ಇದು ಯುರೋಪ್​ನಲ್ಲಿ ಮಾರ್ಕೆಟಿಂಗ್ ಅನುಮೋದನೆಯನ್ನು ಹಿಂಪಡೆಯಲು ಯೋಜಿಸಿದೆ.

TTS ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ಮಾನವರಲ್ಲಿ ಕಡಿಮೆ ರಕ್ತದ ಪ್ಲೇಟ್‌ಲೆಟ್ ಕಾರಣವಾಗುತ್ತದೆ ಮತ್ತು UK ನಲ್ಲಿ 81 ಕ್ಕೂ ಹೆಚ್ಚು ಸಾವುಗಳಿಗೆ ಸಂಬಂಧಿಸಿದೆ ಎಂದು ಹೇಳಲಾಗಿದೆ. ಆದರೆ ಕೋವಿಶೀಲ್ಡ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಅಸ್ಟ್ರಾಜೆನೆಕಾ ಹೇಳಿದೆ.

ಮತ್ತಷ್ಟು ಓದಿ: Covishield vaccine side-effects: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಶುರುವಾಯಿತು ಚಿಂತೆ? ತಜ್ಞರು ಹೇಳುವುದೇನು?

ಬ್ರಿಟಿಷ್ ಹೈಕೋರ್ಟ್​ನಲ್ಲಿ ಸಲ್ಲಿಸಿದ ದಾಖಲೆಗಳ ಪ್ರಕಾರ, ಕಂಪನಿಯು ತನ್ನ ಕೊರೊನಾ ಲಸಿಕೆ ಥ್ರಂಬೋಸಿಸ್, ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್​ಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು, ಇದು ತೀವ್ರತರವಾದ ಪ್ರಕರಣಗಳಲ್ಲಿ ಪಾರ್ಶ್ವವಾಯು ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:18 am, Wed, 8 May 24

Follow Us
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ