AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ಮೂಸೆ ವಾಲಾ ಕೊಲೆ ಬಳಿಕ ಪಂಜಾಬಿ ಖ್ಯಾತ ಗಾಯಕ ಮನ್ಕೀರತ್ ಔಲಾಖ್ ಭದ್ರತೆ ಹೆಚ್ಚಿಸುವಂತೆ ಕೋರಿದ್ದಾರೆ

ಮನ್ಕೀರತ್ ಔಲಾಖ್ ಅವರಿಗೆ ಈ ಗ್ಯಾಂಗಿನ ಪ್ರತಿಸ್ಪರ್ಧಿಯಾಗಿರುವ ದೇವಿಂದರ್ ಬಾಂಭಿಹಾನ ಗ್ಯಾಂಗ್ ನಿಂದ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ವರದಿಯಾಗಿದೆ. ಚಂಡೀಗಢ್, ಮೊಹಾಲಿ ಮತ್ತು ಪಂಚಕುಲಾನಲ್ಲಿ ದೇವಿಂದರ್ ಬ್ಲ್ಯಾಕ್ ಮೇಕ್ ಮತ್ತು ಬೆದರಿಕೆ ಮೂಲಕ ಜನರಿಂದ ಹಣ ಸುಲಿಗೆ ಮಾಡುವ ರಾಕೆಟ್ ನಡೆಸುತ್ತಿದ್ದ

ಸಿಧು ಮೂಸೆ ವಾಲಾ ಕೊಲೆ ಬಳಿಕ ಪಂಜಾಬಿ ಖ್ಯಾತ ಗಾಯಕ ಮನ್ಕೀರತ್ ಔಲಾಖ್ ಭದ್ರತೆ ಹೆಚ್ಚಿಸುವಂತೆ ಕೋರಿದ್ದಾರೆ
ಮನ್ಕೀರತ್ ಔಲಾಖ್, ಪಂಜಾಬಿ ಗಾಯಕ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jun 01, 2022 | 10:41 AM

ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ (Sidhu Moose Wala) ಅವರ ಭೀಕರ ಕೊಲೆ ಅಲ್ಲಿನ ಬಹಳಷ್ಟು ಕಲಾವಿದರಲ್ಲಿ, ಗಾಯಕರಲ್ಲಿ ಭೀತಿ ಮತ್ತು ಆತಂಕ ಮೂಡಿಸಿದೆ. ಮನ್ಕೀರತ್ ಔಲಾಖ್ (Mankirt Aulakh) ಹೆಸರಿನ ಮತ್ತೊಬ್ಬ ಗಾಯಕ ತನಗೂ ಬೆದರಿಕೆ ಕರೆಗಳು ಬರುತ್ತಿವೆ ಅಂತ ಹೇಳಿ ಭದ್ರತೆ ಕೋರಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ 31-ವರ್ಷ ವಯಸ್ಸಿನ ಮನ್ಕೀರತ್ ತನಗೆ ಜೀವ ಬೆದರಿಕೆ ಇರುವುದರಿಂದ ಸೆಕ್ಯುರಿಟಿ ಹೆಚ್ಚಿಸಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮೂಸಾ ಕೊಲೆಯ ಹೊಣೆ ಹೊತ್ತಿರುವ ಲಾರೆನ್ ಬಿಷ್ಣೋಯಿಯ (Lawrence Bishnoi) ಎದುರಾಳಿ ಗ್ಯಾಂಗ್ ದೇವಿಂದರ್ ಬಂಭಿಹಾನ ಗ್ಯಾಂಗ್ ನಿಂದ ಮನ್ಕೀರತ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಮೂಲಗಳಿಂದ ಗೊತ್ತಾಗಿದೆ.

ಪಂಜಾಬ್ ಸರ್ಕಾರವು ಸಿಧು ಮೂಸೆ ವಾಲಾಗೆ ನೀಡಿದ ಭದ್ರತೆಯನ್ನು ಕೊಂಚ ಕಡಿಮೆ ಮಾಡಿದ ಮರುದಿನವೇ ರಾಜ್ಯದ ಮಾನಸ ಜಿಲ್ಲೆಯಲ್ಲಿ ತಮ್ಮ ಎಸ್ ಯುವಿ ಒಂದನ್ನು ಡ್ರೈವ್ ಮಾಡಿಕೊಂಡು ಹೋಗುತ್ತಿದ್ದ ಮೂಸೆವಾಲಾ ಮೇಲೆ ಸ್ವಯಂಚಾಲಿತ ರೈಫಲ್ ಒಂದರಿಂದ 30 ಸುತ್ತು ಗುಂಡು ಹಾರಿಸಲಾಗಿತ್ತು.

ಕೆನಡಾನಲ್ಲಿ ನೆಲೆಸಿರುವ ಗೋಲ್ಡಿ ಬ್ರಾರ್ ಹೆಸರಿನ ಗ್ಯಾಂಗ್ ಸ್ಟರ್ ಮೂಸೆ ವಾಲಾ ಅವರು ಹತ್ಯೆಯ ಹೊಣೆ ಹೊತ್ತಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜೊತೆ ನಿಕಟ ಸಂಪರ್ಕ ಹೊಂದಿರುವ ಬ್ರಾರ್, ಇನ್ನೊಬ್ಬ ಗ್ಯಾಂಗ್ಸ್ಟರ್ ವಿಕ್ಕಿ ಮಿದ್ದುಖೇರಾ ಸಾವಿನ ಸೇಡು ತೀರಿಸಿಕೊಳ್ಳಲು ಮೂಸೆ ವಾಲಾರನ್ನು ಹತ್ಯೆ ಮಾಡಿಸಿರುವುದಾಗಿ ತನ್ನ ಫೇಸ್ಬುಕ್ ಪೋಸ್ಟ್ ಒಂದರಲ್ಲಿ ಹೇಳಿಕೊಂಡಿದ್ದಾನೆ.

ಮನ್ಕೀರತ್ ಔಲಾಖ್ ಅವರಿಗೆ ಈ ಗ್ಯಾಂಗಿನ ಪ್ರತಿಸ್ಪರ್ಧಿಯಾಗಿರುವ ದೇವಿಂದರ್ ಬಾಂಭಿಹಾನ ಗ್ಯಾಂಗ್ ನಿಂದ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ವರದಿಯಾಗಿದೆ. ಚಂಡೀಗಢ್, ಮೊಹಾಲಿ ಮತ್ತು ಪಂಚಕುಲಾನಲ್ಲಿ ದೇವಿಂದರ್ ಬ್ಲ್ಯಾಕ್ ಮೇಕ್ ಮತ್ತು ಬೆದರಿಕೆ ಮೂಲಕ ಜನರಿಂದ ಹಣ ಸುಲಿಗೆ ಮಾಡುವ ರಾಕೆಟ್ ನಡೆಸುತ್ತಿದ್ದ ಮತ್ತು 2016 ರಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮರಣವನ್ನಪ್ಪಿದ್ದ.

ದೇವಿಂದರ್ ಸಾವಿನ ಬಳಿಕ ಅವನ ಸಹಚರರಾದ ದಿಲ್ಪ್ರೀತ್ ಮತ್ತು ಸುಖ್ಪ್ರೀತ್ ಅಲಿಯಸ್ ಬುದ್ಧಾ ಜೈಲಿನಲ್ಲಿದ್ದುಕೊಂಡೇ ಗ್ಯಾಂಗ್ ನ ನಿರ್ವಹಣೆ ಮಾಡುತ್ತಿದ್ದಾರೆ.

ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ನ್ಯಾಯಾಲಯವೊದರಲ್ಲಿ ನಡೆದ ಶೂಟ್ ಔಟ್ ನಲ್ಲಿ ಗ್ಯಾಂಗ್ಸ್ಟರ್ ಜೆತೆಂದರ್ ಗೋಗಿಯ ಹತ್ಯೆ ನಿಯೋಜಿಸಿದ್ದು ಬಾಂಭಿಹಾ ಗ್ಯಾಂಗ್ ಸದಸ್ಯರು ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:49 pm, Tue, 31 May 22

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು