Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ನಾಳೆ ದೆಹಲಿಯತ್ತ ಟ್ರ್ಯಾಕ್ಟರ್​ ಪೆರೇಡ್

ಈ ಟ್ರ್ಯಾಕ್ಟರ್ ಪರೇಡ್ ನಾವು ಜನವರಿ 26ರಂದು ದೆಹಲಿಯ ರಸ್ತೆಗಳಲ್ಲಿ ನಡೆಸಲು ನಿಶ್ವಯಿಸಿಕೊಂಡಿರುವ ಪೆರೇಡ್​ಗೆ ಪೂರ್ವಭಾವಿಯಾಗಿರುತ್ತದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ.

Delhi Chalo | ನಾಳೆ ದೆಹಲಿಯತ್ತ ಟ್ರ್ಯಾಕ್ಟರ್​ ಪೆರೇಡ್
ದೆಹಲಿಯತ್ತ ಹೊರಡುತ್ತಿರುವ ರೈತರ ಟ್ರ್ಯಾಕ್ಟರ್​ಗಳು
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 06, 2021 | 10:19 PM

ದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ಸಿಂಘು ಗಡಿಯಲ್ಲಿ ಮುಷ್ಕರ ನಡೆಸುತ್ತಿರುವ ರೈತರು ದೆಹಲಿ ಹೊರವಲಯದ ಪೂರ್ವ ಮತ್ತು ಪಶ್ವಿಮ ಪೆರಿಫೆರಲ್ ಎಕ್ಸ್​ಪ್ರೆಸ್ ರಸ್ತೆಗಳಲ್ಲಿ ನಾಳೆ (ಜ.7) ಟ್ರ್ಯಾಕ್ಟರ್ ಪರೇಡ್ ನಡೆಸಲು ನಿರ್ಧರಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ 7ನೇ ಸುತ್ತಿನ ಮಾತುಕತೆಯೂ ವಿಫಲವಾದ ನಂತರ ರೈತರು ಈ ತೀರ್ಮಾನಕ್ಕೆ ಬಂದಿದ್ದಾರೆ.

ತಮ್ಮ ಬೇಡಿಕೆಗಳು ಜ.26 ಕ್ಕಿಂತ ಮೊದಲು ಈಡೇರದಿದ್ದರೆ, ಗಣರಾಜ್ಯೋತ್ಸವ ದಿನದಂದು ದೆಹಲಿಯ ರಸ್ತೆಗಳಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ಈ ಮುಷ್ಕರದ ನೇತೃತ್ವ ವಹಿಸಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ.

ಸಿಂಘು ಗಡಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ರಾಜಕೀಯ ಹೋರಾಟಗಾರ ಮತ್ತು ಸಂಯುಕ್ತ್ ಕಿಸಾನ್ ಮೋರ್ಚಾ ಸದಸ್ಯ ಯೋಗೇಂದ್ರ ಯಾದವ್ ಸರ್ಕಾರದೊಂದಿಗೆ ಮಾತುಕತೆಗಳು ವಿಫಲವಾಗಿರುವುದರಿಂದ ಟ್ರ್ಯಾಕ್ಟರ್ ಪರೇಡ್ ನಡೆಸುವ ನಿರ್ಧಾರಕ್ಕೆ ಬರಲಾಗಿದೆಯೆಂದು ಹೇಳಿದರು.

‘ಏಳು ತಿಂಗಳಲ್ಲಿ ಏಳನೇ ಬಾರಿಗೆ ಸರ್ಕಾರದೊಂದಿಗೆ ನಡೆಸಿದ ಮಾತುಕತೆಗಳು ವಿಫಲವಾಗಿವೆ. ಸರ್ಕಾರ ಮತ್ತೊಮ್ಮೆ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ನಿರಾಕರಿಸಿದ್ದರಿಂದ ಮಾತುಕತೆ ಮುರಿದು ಬಿದ್ದವು. ನಾವು ಮುಷ್ಕರವನ್ನು ಮುಂದುವರಿಸಲು ನಿರ್ಧರಿಸಿದ್ದು ನಾಳೆ ಅಂದರೆ ಗುರುವಾರ ಕೆಎಮ್​ಪಿ ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ಮುಂದಾಗಿದ್ದೇವೆ’ ಎಂದರು.

‘ಟ್ರ್ಯಾಕ್ಟರ್​ಗಳು ಸಿಂಘು, ಟಿಕ್ರಿ, ಗಾಜಿಪುರ್ ಗಡಿಗಳಿಂದಲ್ಲದೆ ಹರಿಯಾಣದ ರೇವಾಸನ್ ಗಡಿಯಿಂದಲೂ ಪೂರ್ವ ಮತ್ತು ಪಶ್ಚಿಮ ಪರಿಫೆರಲ್ ಎಕ್ಸ್​ಪ್ರೆಸ್​ಗಳ ಕಡೆ ಹೊರಟು ಮಧ್ಯಭಾಗದಲ್ಲಿ ಸೇರಲಿವೆ. ಈ ಟ್ರ್ಯಾಕ್ಟರ್ ಪರೇಡ್ ನಾವು ಜನವರಿ 26ರಂದು ದೆಹಲಿಯ ರಸ್ತೆಗಳಲ್ಲಿ ನಡೆಸಲು ನಿಶ್ವಯಿಸಿಕೊಂಡಿರುವ ಪೆರೇಡ್​ಗೆ ಪೂರ್ವಭಾವಿಯಾಗಿರುತ್ತದೆ’ ಎಂದರು.

ಹರಿಯಾಣ ಭಾರತೀಯ ಕಿಸಾನ್ ಒಕ್ಕೂಟದ ಬಾತ್ಮೀದಾರ ರಾಕೇಶ್ ಬೇನ್ಸ್ ಮಾತಾಡಿ, ಟ್ರ್ಯಾಕ್ಟರ್ ಪರೇಡ್ ಅನ್ನು ಅಸಲಿಗೆ ಬುಧವಾರದಂದು ನಡೆಸಲು ನಿಶ್ಚಯಿಸಲಾಗಿತ್ತು, ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಒಂದು ದಿನ ಮುಂದೂಡಲಾಯಿತು ಎಂದರು. ಹರಿಯಾಣದ ಡಿಜಿಪಿ ಮನೋಜ್ ಯಾದವ್ ಸಹ ಟ್ರ್ಯಾಕ್ಟರ್ ಪರೇಡ್ ಒಂದು ದಿನ ಮುಂದೂಡಿರುವುದನ್ನು ಖಚಿತಪಡಿಸಿದರು.

ಸುದ್ದಿಗಾರರೊಂದಿಗೆ ಮಾತಾಡಿದ ಮನೋಜ್ ಯಾದವ್, ಮುಷ್ಕರನಿರತ ರೈತರೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ, ಅವರಿಗೆ ಪರೇಡ್ ನಡೆಸಲು ಅನುಮತಿ ನೀಡಬೇಕೋ ಇಲ್ಲವೋ ಅನ್ನುವುದನ್ನು ನಂತರ ನಿರ್ಧರಿಸುತ್ತೇವೆ,’ ಎಂದು ಹೇಳಿದರು.

ಮುಷ್ಕರನಿರತ ರೈತರು

ಮೂಲಗಳ ಪ್ರಕಾರ ಹರಿಯಾಣದ ದೂರ ಪ್ರದೇಶಗಳಲ್ಲಿರುವ ರೈತರಿಗೆ ಮುಖಂಡರು ತಮ್ಮ ಪ್ರದೇಶಗಳಲ್ಲೇ ಟ್ರ್ಯಾಕ್ಟರ್ ಪರೇಡ್ ನಡೆಸಲು ಸೂಚಿಸಿರುವರಾದರೂ ರೈತರು ದೆಹಲಿ ಕಡೆ ಬರುವ ಉತ್ಸಾಹ ತೋರುತ್ತಿದ್ದಾರೆ. ಈ ರೈತರು ನಾಳೆ ನಸುಕಿನಲ್ಲಿಯೇ ದೆಹಲಿಯತ್ತ ಹೊರಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

Published On - 9:41 pm, Wed, 6 January 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!