AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತುಲ್ ಸುಭಾಷ್ ಪ್ರಕರಣದ ಬಳಿಕ ಗುರುಗ್ರಾಮದ ವ್ಯಕ್ತಿಯಿಂದಲೂ ಪತ್ನಿ ವಿರುದ್ಧ ಮಾನಸಿಕ ಕಿರುಕುಳದ ಆರೋಪ

ಅತುಲ್ ಸುಭಾಷ್ ಪ್ರಕರಣದ ಬಳಿಕ ಇದೀಗ ಗುರುಗ್ರಾಮದ ವ್ಯಕ್ತಿಯಿಂದ ತಮ್ಮ ಹೆಂಡತಿ ವಿರುದ್ಧ ಕಿರುಕುಳದ ಆರೋಪ ಕೇಳಿಬಂದಿದೆ. ನನ್ನ ಪತ್ನಿ ಜೀವನಾಂಶ ಮತ್ತು ಬೃಹತ್ ಮೊತ್ತದ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ ಎಂದು ಗುರುಗ್ರಾಮದ ವ್ಯಕ್ತಿ ಆರೋಪಿಸಿದ್ದಾರೆ. ಹೊಸ ಕೆಲಸಕ್ಕೆ ಸೇರಬೇಕೆಂದು ಒತ್ತಾಯಿಸಿದ್ದ ಆ ವ್ಯಕ್ತಿಯ ಪತ್ನಿ ಬಳಿಕ ಅವರಿಗೆ ಬೆಂಗಳೂರಿನಲ್ಲಿ ಕೆಲಸ ಸಿಕ್ಕ ನಂತರ ತಾನು ಅಪ್ಪ-ಅಮ್ಮನ ಜೊತೆಯೇ ಇರುವುದಾಗಿ ಹಠ ಹಿಡಿದಿದ್ದರು.

ಅತುಲ್ ಸುಭಾಷ್ ಪ್ರಕರಣದ ಬಳಿಕ ಗುರುಗ್ರಾಮದ ವ್ಯಕ್ತಿಯಿಂದಲೂ ಪತ್ನಿ ವಿರುದ್ಧ ಮಾನಸಿಕ ಕಿರುಕುಳದ ಆರೋಪ
Men Harassment
ಸುಷ್ಮಾ ಚಕ್ರೆ
|

Updated on: Dec 20, 2024 | 8:45 PM

Share

ಗುರುಗ್ರಾಮ: ಬೆಂಗಳೂರಿನ ಅತುಲ್ ಸುಭಾಷ್ ಆತ್ಮಹತ್ಯೆಯ ಬೆನ್ನಲ್ಲೇ ಮತ್ತೋರ್ವ ವ್ಯಕ್ತಿ ತನ್ನ ಪತ್ನಿಯು 1 ಕೋಟಿ ಮೊತ್ತದ ಹಣವನ್ನು ಪರಿಹಾರವಾಗಿ ಮತ್ತು ತಿಂಗಳಿಗೆ 1.5 ಲಕ್ಷ ರೂ.ಗಳ ನಿರ್ವಹಣೆಗೆ ಬೇಡಿಕೆಯಿಡುತ್ತಿದ್ದಾಳೆ ಎಂದು ಹೇಳಿಕೊಂಡು ತನ್ನ ಸಂಕಷ್ಟವನ್ನು ಮುಂದಿಟ್ಟಿದ್ದಾರೆ. ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ಅಲೋಕ್ ಮಿತ್ತಲ್ ಲಿಂಕ್ಡ್‌ಇನ್‌ನಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಸುಳ್ಳು ವರದಕ್ಷಿಣೆ ಪ್ರಕರಣಗಳು ಮತ್ತು ಕೌಟುಂಬಿಕ ಹಿಂಸೆಯ ಮೂಲಕ ಆಕೆ ತನಗೆ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪ ಮಾಡಿದ್ದಾರೆ.

ಅಲೋಕ್ ಮಿತ್ತಲ್ 2023ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾನ್ಸಿ ಅಗರ್ವಾಲ್ ಅವರನ್ನು ವಿವಾಹವಾದರು. ಮದುವೆಯಾದ ಕೆಲವು ತಿಂಗಳ ನಂತರ ಮಾನ್ಸಿ ಗರ್ಭಿಣಿಯಾದರು. ಆದರೆ, ದುರಾದೃಷ್ಟದಿಂದ ಅದೇ ವೇಳೆ ಅಲೋಕ್​ ಕೆಲಸ ಕಳೆದುಕೊಂಡರು. ಮಾನ್ಸಿ ಹೊಸ ಕೆಲಸವನ್ನು ಹುಡುಕಲು ಅವರ ಮೇಲೆ ಒತ್ತಡ ಹೇರಲು ಪ್ರಾರಂಭಿಸಿದಳು. 5 ತಿಂಗಳ ಕೆಲಸದ ಹುಡುಕಾಟದ ನಂತರ, ಅಲೋಕ್​ಗೆ ಬೆಂಗಳೂರಿನಲ್ಲಿ ಕೆಲಸ ಸಿಕ್ಕಿತು. ಆದರೆ ಮಾನ್ಸಿ ಬೆಂಗಳೂರಿಗೆ ಹೋಗಲು ನಿರಾಕರಿಸಿದರು. ಅವಳು ತನ್ನ ಹೆತ್ತವರ ಮನೆಗೆ ಮರಳಲು ನಿರ್ಧರಿಸಿದಳು.

ಇದನ್ನೂ ಓದಿ: Bengaluru techie death: ಟೆಕ್ಕಿ ಅತುಲ್​ ಸುಭಾಷ್​ ಮಗು ಎಲ್ಲಿ? ಬೆಂಗಳೂರು ಪೊಲೀಸರಿಂದ ಮಹತ್ವದ ಸುಳಿವು

ಮಾನ್ಸಿ ಸ್ವಲ್ಪ ಸಮಯದ ನಂತರ ಅಲೋಕ್ ಜೊತೆ ಇರಲು ಬೆಂಗಳೂರಿಗೆ ಬರುವುದಾಗಿ ಭರವಸೆ ನೀಡಿದಳು. ಅಲೋಕ್ ಆಕೆಯನ್ನು ವಾಪಸ್ ಕರೆದುಕೊಂಡು ಹೋಗಲು ದೆಹಲಿಗೆ ಹೋದಾಗ ಮಾನ್ಸಿಯ ಪೋಷಕರು ಅವನ ಬಗ್ಗೆ ಅಸಡ್ಡೆ ತೋರಿದರು. ಮಾನ್ಸಿ ಅಲೋಕ್‌ಗೆ ಬೆಂಗಳೂರಿನಲ್ಲಿ ಕೆಲಸ ಬಿಡುವಂತೆ ಒತ್ತಾಯಿಸಿದಳು.

ಅಲೋಕ್ ಹೆಂಡತಿ ಮಾನ್ಸಿ ಕೂಡ ಉದ್ಯೋಗದಲ್ಲಿದ್ದು, ತಿಂಗಳಿಗೆ 80,000 ರೂ. ಗಳಿಸುತ್ತಾರೆ. ಉತ್ತಮ ಗಳಿಕೆಯಿದ್ದರೂ ಮಾನ್ಸಿ 1.5 ಲಕ್ಷ ರೂ. ಹಣವನ್ನು ನಿರ್ವಹಣೆ ಹಾಗೂ ಒಂದು ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ ಎಂದು ಅಲೋಕ್ ಆರೋಪಿಸಿದ್ದಾರೆ.

ತನ್ನ 10 ತಿಂಗಳ ಮಗನನ್ನು ಭೇಟಿಯಾಗಲು ತನ್ನ ಅತ್ತೆ ಮತ್ತು ಹೆಂಡತಿ ಬಿಡುತ್ತಿಲ್ಲ ಎಂದು ಕೂಡ ಅಲೋಕ್ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ