AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಅಪ್ಪಾ ನಾನು ಬದುಕಿದ್ದೇನೆ”: ಮಗಳ ಆ ಒಂದು ಮಾತು ದುಃಖದಲ್ಲಿದ್ದ ತಂದೆಗೆ ಮತ್ತೆ ಜೀವ ಬಂದಂತಾಗಿದೆ

ಮಗಳು ಎಂದು ಬೇರೆ ದೇಹಕ್ಕೆ ಶವಸಂಸ್ಕಾರ ಮಾಡಿರುವ ಘಟನೆ, ಬಿಹಾರ ಪಟ್ನಾದಲ್ಲಿ ನಡೆದಿದೆ. ಶವಸಂಸ್ಕಾರ ನಡೆಸಿದ ಒಂದು ತಿಂಗಳ ನಂತರ ತನ್ನ ತಂದೆಗೆ ಕರೆ ಮಾಡಿ ಅಪ್ಪಾ ನಾನು ಬದುಕಿದ್ದೇನೆ ಎಂದು ಹೇಳಿದ್ದಾಳೆ.

ಅಪ್ಪಾ ನಾನು ಬದುಕಿದ್ದೇನೆ: ಮಗಳ ಆ ಒಂದು ಮಾತು ದುಃಖದಲ್ಲಿದ್ದ ತಂದೆಗೆ ಮತ್ತೆ ಜೀವ ಬಂದಂತಾಗಿದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 21, 2023 | 11:00 AM

Share

ಪಾಟ್ನಾ, ಆ.21: ಮಗಳ ಸಾವಿನಿಂದ ದುಃಖದ ಮಡುವಿನಲ್ಲಿದ್ದ ತಂದೆಗೆ ಆ ಒಂದು ವಿಡಿಯೋ ಕಾಲ್​​ನಿಂದ ಮತ್ತೆ ಜೀವ ಬಂದಂತಾಗಿದೆ. ಹೌದು ಈ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಯುವತಿಯೊಬ್ಬಳು ನಾಪತ್ತೆಯಾದ ಒಂದು ತಿಂಗಳ ನಂತರ ಆಕೆಯ ಶವಸಂಸ್ಕಾರ ಮಾಡಲಾಗಿದೆ. ಆದರೆ ಶವಸಂಸ್ಕಾರ ನಡೆದ ಒಂದು ತಿಂಗಳ ನಂತರ ಆಕೆ ತನ್ನ ತಂದೆಗೆ ವಿಡಿಯೋ ಕರೆ ಮಾಡಿ “ಪಾಪಾ, ಮೇ ಅಭಿ ಜಿಂದಾ ಹೂಂ,” (ಅಪ್ಪಾ ನಾನು ಇನ್ನೂ ಬದುಕಿದ್ದೇನೆ) ಎಂದು ಕರೆ ಮಾಡಿ ಹೇಳಿದ್ದಾಳೆ. ಆದರೆ ಶವಸಂಸ್ಕಾರ ಮಾಡಿ ದೇಹ ಯಾರು ಎಂದು ಪತ್ತೆ ಮಾಡಿದಾಗ, ಅನಾಮಿಕ ವ್ಯಕ್ತಿಯ ದೇಹವನ್ನು ತನ್ನ ಮಗಳು ಎಂದು ತಪ್ಪಾಗಿ ಗುರುತಿಸಿ ಶವಸಂಸ್ಕಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಇದೀಗ ಪತ್ತೆಯಾಗಿರುವ ಯುವತಿಯನ್ನು ಅಂಶು ಎಂದು ಗುರುತಿಸಲಾಗಿದ್ದು, ಸುಮಾರು ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ನಂತರ ಆಕೆಯನ್ನು ಪತ್ತೆ ಮಾಡಲು ಸತತ ಪ್ರಯತ್ನ ಮಾಡಿದ್ದಾರೆ. ಆಕೆಯ ನಾಪತ್ತೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲೂ ಪೋಸ್ಟ್​​ನ್ನು ಹಾಕಲಾಗಿತ್ತು. ಈ ಬಗ್ಗೆ ಪೊಲೀಸ್​​ ಠಾಣೆಗೂ ದೂರು ನೀಡಿದ್ದು, ಒಂದು ತಿಂಗಳ ನಂತರ ಕಾಲುವೆಯೊಂದರಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಆದರೆ ಮನೆಯವರು ಆಕೆಯ ಮುಖವನ್ನು ಗುರುತಿಸದೆ. ಬಟ್ಟೆಯ ಆಧಾರ ಮೇಲೆ ತಮ್ಮ ಮಗಳು ಎಂದು ಶವಸಂಸ್ಕಾರ ಮಾಡಿದ್ದಾರೆ.

ಇದನ್ನೂ ಓದಿ:  ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ, 34ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕರೆಂಟ್​ ಶಾಕ್

ಸುದ್ದಿ ಎಲ್ಲ ಕಡೆ ಹರಡುತ್ತಿದ್ದಂತೆ ಅಂಶು ತನ್ನ ತಂದೆಗೆ ಕರೆ ಮಾಡಿ ತಾನು ಬದುಕಿದ್ದು, ಮದುವೆಯಾಗಲು ಓಡಿ ಹೋಗಿರುವುದಾಗಿ ತಿಳಿಸಿದ್ದಾಳೆ. ಅಂಶು ತನ್ನ ಗೆಳೆಯನೊಂದಿಗೆ ಓಡಿಹೋಗಿದ್ದು, ಅವನನ್ನು ಮದುವೆಯಾಗಿದ್ದಾಳೆ. ಈಗ ಅವಳು ತನ್ನ ಅತ್ತೆ ಮನೆಯಲ್ಲಿ ವಾಸಿಸುತ್ತಿದ್ದಾಳೆ ಎಂದು ಅಕ್ಬರ್‌ಪುರ ಎಸ್‌ಎಚ್‌ಒ (Station House Officer) ಸೂರಜ್ ಪ್ರಸಾದ್ ಹೇಳಿದ್ದಾರೆ.

ಇನ್ನು ಶವಸಂಸ್ಕಾರ ಮಾಡಿರುವ ಮೃತದೇಹ ಯಾರದು? ಮತ್ತು ಇದರ ಬಗ್ಗೆ ತನಿಖೆ ಮಾಡಿದ್ದು, ಶವಸಂಸ್ಕಾರ ಮಾಡಿದ ಮಹಿಳೆಯ ಗುರುತು ಪತ್ತೆಯಾಗಿದ್ದು, ಇದು ಮರ್ಯಾದಾ ಹತ್ಯೆಯ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮಹಿಳೆಯ ಪೋಷಕರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ