AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಮುಖ್ಯಮಂತ್ರಿ ಜಗನ್​ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ; ಗೋವಾದಲ್ಲಿ ಸೆರೆ ಹಿಡಿದ ಸಿಬಿಐ

ಈಗಿನ ಮುಖ್ಯಮಂತ್ರಿ ವೈ.ಎಸ್​.ಜಗನ್​ಮೋಹನ್​ ರೆಡ್ಡಿಯವರ ಚಿಕ್ಕಪ್ಪನೇ ಆಗಿರುವ ವಿವೇಕಾನಂದ ರೆಡ್ಡಿಯವರ ಸಾವಿನ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್​ ಸಿಬಿಐಗೆ ವಹಿಸಿತ್ತು. ಹೀಗೆ ಸಿಬಿಐಗೆ ಪ್ರಕರಣ ವಹಿಸಲು ಕಾರಣ, ವಿವೇಕಾನಂದ ರೆಡ್ಡಿಯವರ ಪುತ್ರಿ ಸುನೀತಾ ರೆಡ್ಡಿ.

ಆಂಧ್ರ ಮುಖ್ಯಮಂತ್ರಿ ಜಗನ್​ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ; ಗೋವಾದಲ್ಲಿ ಸೆರೆ ಹಿಡಿದ ಸಿಬಿಐ
ವಿವೇಕಾನಂದ ರೆಡ್ಡಿ
TV9 Web
| Edited By: |

Updated on: Aug 03, 2021 | 10:20 AM

Share

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್​.ರಾಜಶೇಖರ್​ ರೆಡ್ಡಿ (Y. S. Rajasekhara Reddy) ಸಹೋದರ ವೈ.ಎಸ್​. ವಿವೇಕಾನಂದ ರೆಡ್ಡಿ(Y S Vivekananda) ಹತ್ಯೆಯಾಗಿ ಎರಡು ವರ್ಷಕ್ಕೂ ಅಧಿಕ ಕಾಲವಾಗಿದೆ. ಈ ಹತ್ಯೆಯ ಆರೋಪಿ ಈಗ ಸಿಬಿಐ ಬಳಿ ಸಿಕ್ಕಿಬಿದ್ದಿದ್ದಾನೆ. ಸುನೀಲ್ ಯಾದವ್ ಎಂಬಾತ ವೈ.ಎಸ್​. ವಿವೇಕಾನಂದ ರೆಡ್ಡಿಯವರ ಹತ್ಯೆಯ ಆರೋಪಿಯಾಗಿದ್ದು, ಸೋಮವಾರ ಗೋವಾದಲ್ಲಿ ಸೆರೆಹಿಡಿಯಲಾಗಿದೆ. ಆತನನ್ನು ಬಂಧಿಸಿ, ಕೋರ್ಟ್​ಗೆ ಹಾಜರು ಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಬಿಐ (CBI) ಮೂಲಗಳು ತಿಳಿಸಿದ್ದಾಗಿ, ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಇದರಲ್ಲಿ ಸುನೀಲ್​ ಯಾದವ್ ಪ್ರಮುಖ​ ಆರೋಪಿ ಎಂಬುದಕ್ಕೆ ಹಲವು ಸಾಕ್ಷಿಗಳು ಸಿಕ್ಕಿದ್ದು, ಅದರ ಅನ್ವಯ ಸಿಬಿಐ ಆತನನ್ನು ವಶಕ್ಕೆ ಪಡೆದಿದೆ. ಇನ್ನು ಸುನೀಲ್​​ನನ್ನು ಹಲವು ಬಾರಿ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಆದರೆ ನಂತರ ಆತ ಕುಟುಂಬದೊಂದಿಗೆ ಗೋವಾಕ್ಕೆ ಪರಾರಿಯಾಗಿದ್ದ. ವೈ.ಎಸ್​.ವಿವೇಕಾನಂದ ರೆಡ್ಡಿಯವರೂ ಸಹ ಸಚಿವರಾಗಿದ್ದರು. ಕಡಪಾ ಜಿಲ್ಲೆಯ ತಮ್ಮ ಮನೆಯಲ್ಲಿ 2019ರ ಮಾರ್ಚ್​ 15ರಂದು ಶವವಾಗಿ ಪತ್ತೆಯಾಗಿದ್ದರು. ಆಗ ಮನೆಯಲ್ಲಿ ಒಬ್ಬರೇ ಇದ್ದರು. ನಂತರ ಅವರ ಸಾವು ಸಹಜವಾಗಿ ಆಗಿದ್ದಲ್ಲ ಎಂದು ಕುಟುಂಬದವರೇ ಆರೋಪ ಮಾಡಿದ್ದರು.

ಈಗಿನ ಮುಖ್ಯಮಂತ್ರಿ ವೈ.ಎಸ್​.ಜಗನ್​ಮೋಹನ್​ ರೆಡ್ಡಿಯವರ ಚಿಕ್ಕಪ್ಪನೇ ಆಗಿರುವ ವಿವೇಕಾನಂದ ರೆಡ್ಡಿಯವರ ಸಾವಿನ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್​ ಸಿಬಿಐಗೆ ವಹಿಸಿತ್ತು. ಹೀಗೆ ಸಿಬಿಐಗೆ ಪ್ರಕರಣ ವಹಿಸಲು ಕಾರಣ, ವಿವೇಕಾನಂದ ರೆಡ್ಡಿಯವರ ಪುತ್ರಿ ಸುನೀತಾ ರೆಡ್ಡಿ. ವಿವೇಕಾನಂದ ರೆಡ್ಡಿ ಹತ್ಯೆಯಲ್ಲಿ ಟಿಡಿಪಿ ಪಕ್ಷದ ಪಾತ್ರವಿದೆ ಎಂದು ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಆರೋಪ ಮಾಡಿದ್ದರು ಮತ್ತು ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದ್ದರು. ಆದರೆ ಇವರು 2019ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇತ್ತ ಸುನೀತಾ ರೆಡ್ಡಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ನನಗೆ ನನ್ನ ಕಸಿನ್​ ಆಗಿರುವ ಕಡಪಾ ಸಂಸದ ವೈ.ಎಸ್​.ಅವಿನಾಶ್​ ರೆಡ್ಡಿ ಮತ್ತು ಅವರ ತಂದೆ ವೈ.ಎಸ್​.ಭಾಸ್ಕರ್​ ರೆಡ್ಡಿ ಮೇಲೆ ಅನುಮಾನವಿದೆ ಎಂದು ಹೇಳಿದ್ದರು. ಇನ್ನು ನನ್ನ ಸಹೋದರ ಸಂಬಂಧಿ ಜಗನ್​ ರೆಡ್ಡಿಯವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ನಿಯೋಜಿಸಿದ್ದಾರೆ. ಯಾಕೆ ಅವರು ಸಿಬಿಐಗೆ ವಹಿಸುತ್ತಿಲ್ಲ ಎಂದೂ ಹೈಕೋರ್ಟ್​ನಲ್ಲಿ ಸುನೀತಾ ಪ್ರಶ್ನಿಸಿದ್ದರು. ಇದರಿಂದ ಜಗನ್​ ರೆಡ್ಡಿಯವರಿಗೆ ತೀವ್ರ ಮುಜುಗರ ಉಂಟಾಗಿತ್ತು. ನಂತರ ಆಂಧ್ರ ಹೈಕೋರ್ಟ್ ಈ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ಇದನ್ನೂ ಓದಿ: Viral Video: ಸ್ಕೇಟಿಂಗ್ ರೇಸ್​ನಲ್ಲಿ ಬಿದ್ದು ಎದ್ದು ಮುನ್ನುಗ್ಗಿದ 4 ವರ್ಷದ ಬಾಲಕಿ! ಕೊನೇ ಕ್ಷಣದ ದೃಶ್ಯ ಮಜವಾಗಿದೆ ನೀವೂ ನೋಡಿ

ಪ್ರೀತಿ ಮಾಡುವಂತೆ ಬಾಲಕಿ ಹಿಂದೆ ಬಿದ್ದಿದ್ದ; ಮನೆಗೆ ಹೋಗುತ್ತಿದ್ದಾಗ ಹಿಂಬಾಲಿಸಿ ಕೊಚ್ಚಿ ಕೊಲೆ ಮಾಡಿದ

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?