AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಮುಖ್ಯಮಂತ್ರಿ ಜಗನ್​ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ; ಗೋವಾದಲ್ಲಿ ಸೆರೆ ಹಿಡಿದ ಸಿಬಿಐ

ಈಗಿನ ಮುಖ್ಯಮಂತ್ರಿ ವೈ.ಎಸ್​.ಜಗನ್​ಮೋಹನ್​ ರೆಡ್ಡಿಯವರ ಚಿಕ್ಕಪ್ಪನೇ ಆಗಿರುವ ವಿವೇಕಾನಂದ ರೆಡ್ಡಿಯವರ ಸಾವಿನ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್​ ಸಿಬಿಐಗೆ ವಹಿಸಿತ್ತು. ಹೀಗೆ ಸಿಬಿಐಗೆ ಪ್ರಕರಣ ವಹಿಸಲು ಕಾರಣ, ವಿವೇಕಾನಂದ ರೆಡ್ಡಿಯವರ ಪುತ್ರಿ ಸುನೀತಾ ರೆಡ್ಡಿ.

ಆಂಧ್ರ ಮುಖ್ಯಮಂತ್ರಿ ಜಗನ್​ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ; ಗೋವಾದಲ್ಲಿ ಸೆರೆ ಹಿಡಿದ ಸಿಬಿಐ
ವಿವೇಕಾನಂದ ರೆಡ್ಡಿ
TV9 Web
| Edited By: |

Updated on: Aug 03, 2021 | 10:20 AM

Share

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್​.ರಾಜಶೇಖರ್​ ರೆಡ್ಡಿ (Y. S. Rajasekhara Reddy) ಸಹೋದರ ವೈ.ಎಸ್​. ವಿವೇಕಾನಂದ ರೆಡ್ಡಿ(Y S Vivekananda) ಹತ್ಯೆಯಾಗಿ ಎರಡು ವರ್ಷಕ್ಕೂ ಅಧಿಕ ಕಾಲವಾಗಿದೆ. ಈ ಹತ್ಯೆಯ ಆರೋಪಿ ಈಗ ಸಿಬಿಐ ಬಳಿ ಸಿಕ್ಕಿಬಿದ್ದಿದ್ದಾನೆ. ಸುನೀಲ್ ಯಾದವ್ ಎಂಬಾತ ವೈ.ಎಸ್​. ವಿವೇಕಾನಂದ ರೆಡ್ಡಿಯವರ ಹತ್ಯೆಯ ಆರೋಪಿಯಾಗಿದ್ದು, ಸೋಮವಾರ ಗೋವಾದಲ್ಲಿ ಸೆರೆಹಿಡಿಯಲಾಗಿದೆ. ಆತನನ್ನು ಬಂಧಿಸಿ, ಕೋರ್ಟ್​ಗೆ ಹಾಜರು ಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಬಿಐ (CBI) ಮೂಲಗಳು ತಿಳಿಸಿದ್ದಾಗಿ, ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಇದರಲ್ಲಿ ಸುನೀಲ್​ ಯಾದವ್ ಪ್ರಮುಖ​ ಆರೋಪಿ ಎಂಬುದಕ್ಕೆ ಹಲವು ಸಾಕ್ಷಿಗಳು ಸಿಕ್ಕಿದ್ದು, ಅದರ ಅನ್ವಯ ಸಿಬಿಐ ಆತನನ್ನು ವಶಕ್ಕೆ ಪಡೆದಿದೆ. ಇನ್ನು ಸುನೀಲ್​​ನನ್ನು ಹಲವು ಬಾರಿ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಆದರೆ ನಂತರ ಆತ ಕುಟುಂಬದೊಂದಿಗೆ ಗೋವಾಕ್ಕೆ ಪರಾರಿಯಾಗಿದ್ದ. ವೈ.ಎಸ್​.ವಿವೇಕಾನಂದ ರೆಡ್ಡಿಯವರೂ ಸಹ ಸಚಿವರಾಗಿದ್ದರು. ಕಡಪಾ ಜಿಲ್ಲೆಯ ತಮ್ಮ ಮನೆಯಲ್ಲಿ 2019ರ ಮಾರ್ಚ್​ 15ರಂದು ಶವವಾಗಿ ಪತ್ತೆಯಾಗಿದ್ದರು. ಆಗ ಮನೆಯಲ್ಲಿ ಒಬ್ಬರೇ ಇದ್ದರು. ನಂತರ ಅವರ ಸಾವು ಸಹಜವಾಗಿ ಆಗಿದ್ದಲ್ಲ ಎಂದು ಕುಟುಂಬದವರೇ ಆರೋಪ ಮಾಡಿದ್ದರು.

ಈಗಿನ ಮುಖ್ಯಮಂತ್ರಿ ವೈ.ಎಸ್​.ಜಗನ್​ಮೋಹನ್​ ರೆಡ್ಡಿಯವರ ಚಿಕ್ಕಪ್ಪನೇ ಆಗಿರುವ ವಿವೇಕಾನಂದ ರೆಡ್ಡಿಯವರ ಸಾವಿನ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್​ ಸಿಬಿಐಗೆ ವಹಿಸಿತ್ತು. ಹೀಗೆ ಸಿಬಿಐಗೆ ಪ್ರಕರಣ ವಹಿಸಲು ಕಾರಣ, ವಿವೇಕಾನಂದ ರೆಡ್ಡಿಯವರ ಪುತ್ರಿ ಸುನೀತಾ ರೆಡ್ಡಿ. ವಿವೇಕಾನಂದ ರೆಡ್ಡಿ ಹತ್ಯೆಯಲ್ಲಿ ಟಿಡಿಪಿ ಪಕ್ಷದ ಪಾತ್ರವಿದೆ ಎಂದು ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಆರೋಪ ಮಾಡಿದ್ದರು ಮತ್ತು ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದ್ದರು. ಆದರೆ ಇವರು 2019ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇತ್ತ ಸುನೀತಾ ರೆಡ್ಡಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ನನಗೆ ನನ್ನ ಕಸಿನ್​ ಆಗಿರುವ ಕಡಪಾ ಸಂಸದ ವೈ.ಎಸ್​.ಅವಿನಾಶ್​ ರೆಡ್ಡಿ ಮತ್ತು ಅವರ ತಂದೆ ವೈ.ಎಸ್​.ಭಾಸ್ಕರ್​ ರೆಡ್ಡಿ ಮೇಲೆ ಅನುಮಾನವಿದೆ ಎಂದು ಹೇಳಿದ್ದರು. ಇನ್ನು ನನ್ನ ಸಹೋದರ ಸಂಬಂಧಿ ಜಗನ್​ ರೆಡ್ಡಿಯವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ನಿಯೋಜಿಸಿದ್ದಾರೆ. ಯಾಕೆ ಅವರು ಸಿಬಿಐಗೆ ವಹಿಸುತ್ತಿಲ್ಲ ಎಂದೂ ಹೈಕೋರ್ಟ್​ನಲ್ಲಿ ಸುನೀತಾ ಪ್ರಶ್ನಿಸಿದ್ದರು. ಇದರಿಂದ ಜಗನ್​ ರೆಡ್ಡಿಯವರಿಗೆ ತೀವ್ರ ಮುಜುಗರ ಉಂಟಾಗಿತ್ತು. ನಂತರ ಆಂಧ್ರ ಹೈಕೋರ್ಟ್ ಈ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ಇದನ್ನೂ ಓದಿ: Viral Video: ಸ್ಕೇಟಿಂಗ್ ರೇಸ್​ನಲ್ಲಿ ಬಿದ್ದು ಎದ್ದು ಮುನ್ನುಗ್ಗಿದ 4 ವರ್ಷದ ಬಾಲಕಿ! ಕೊನೇ ಕ್ಷಣದ ದೃಶ್ಯ ಮಜವಾಗಿದೆ ನೀವೂ ನೋಡಿ

ಪ್ರೀತಿ ಮಾಡುವಂತೆ ಬಾಲಕಿ ಹಿಂದೆ ಬಿದ್ದಿದ್ದ; ಮನೆಗೆ ಹೋಗುತ್ತಿದ್ದಾಗ ಹಿಂಬಾಲಿಸಿ ಕೊಚ್ಚಿ ಕೊಲೆ ಮಾಡಿದ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ