AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನಲ್ಲಿ ಮತ್ತೆ ಮೇಘಸ್ಫೋಟ; ಇಬ್ಬರು ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

ಮೇಘಸ್ಫೋಟದ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಟ್ವೀಟ್​ ಮಾಡಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ.

ಉತ್ತರಾಖಂಡ್​ನಲ್ಲಿ ಮತ್ತೆ ಮೇಘಸ್ಫೋಟ; ಇಬ್ಬರು ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ
ಮೇಘಸ್ಫೋಟದಿಂದ ಅವ್ಯವಸ್ಥೆ
TV9 Web
| Edited By: |

Updated on:Aug 30, 2021 | 11:59 AM

Share

ಉತ್ತರಾಖಂಡ್​​ನಲ್ಲಿ ಮತ್ತೊಮ್ಮೆ ಮೇಘಸ್ಫೋಟವಾಗಿದ್ದು, ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಏಳು ಮನೆಗಳು ನೆಲಸಮಗೊಂಡಿದ್ದು, ಅವಶೇಷಗಳಡಿ 5ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಧರ್ಚುಲಾದ ಜುಮ್ಮಾ ಗ್ರಾಮದಲ್ಲಿ ಮೇಘ ಸ್ಫೋಟಗೊಂಡಿದೆ. ಅದರ ಪರಿಣಾಮ ಎನ್​ಎಚ್​ಪಿ ಕಾಲನಿ, ತಪೋವನದವರೆಗೂ ಜಲಾವೃತವಾಗಿದೆ ಎಂದು ಹೇಳಲಾಗಿದೆ.

ದುರ್ಘಟನೆ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಟ್ವೀಟ್​ ಮಾಡಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಉತ್ತರಾಖಂಡ್​ನಲ್ಲಿ ಸಿಕ್ಕಾಪಟೆ ಮಳೆ ಬೀಳುತ್ತಿದೆ. ಮಳೆಯಿಂದಾಗಿ ನಿರಂತರ ಹಾನಿಯಾಗುತ್ತಿದೆ ಎಂದು ಹೇಳಿದರು. ಹಾಗೇ, ಘರ್ವಾಲ್​ ಪ್ರದೇಶದಲ್ಲಿ ಪುಷ್ಕರ್​ ಸಿಂಗ್​ ಧಮಿ ಏರಿಯಲ್​ ಸರ್ವೇ ಕೂಡ ನಡೆಸಿದ್ದಾರೆ.

ಕಳೆದ ವಾರ ಖಬ್ರಾಳ ಗ್ರಾಮದ ಸತ್ಲಾ ದೇವಿ ದೇಗುಲದ ಸಮೀಪ ಮೇಘಸ್ಫೋಟವಾಗಿತ್ತು. ಇದರಿಂದಾಗಿ ನದಿಗಳು, ಹಳ್ಳಕೊಳ್ಳಗಳೆಲ್ಲ ತುಂಬಿ ಹರಿದಿದ್ದವು. ನೀರು ಮನೆಗಳಿಗೆ ನುಗ್ಗಿತ್ತು. ವಿದ್ಯುತ್​ ಕಂಬಗಳು, ಮರಗಳು ಮುರಿದುಬಿದ್ದು ಅವ್ಯವಸ್ಥೆ ಸೃಷ್ಟಿಸಿದ್ದವು. ದ್ವಿಚಕ್ರವಾಹನಗಳೂ ನೀರಿನಲ್ಲಿ ತೊಳೆದು ಹೋಗಿದ್ದವು. ಅಂದು ಯಾರೂ ಮೃತಪಟ್ಟಿರಲಿಲ್ಲ.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು

Published On - 11:44 am, Mon, 30 August 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ