AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನಲ್ಲಿ ಮತ್ತೆ ಮೇಘಸ್ಫೋಟ; ಇಬ್ಬರು ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

ಮೇಘಸ್ಫೋಟದ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಟ್ವೀಟ್​ ಮಾಡಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ.

ಉತ್ತರಾಖಂಡ್​ನಲ್ಲಿ ಮತ್ತೆ ಮೇಘಸ್ಫೋಟ; ಇಬ್ಬರು ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ
ಮೇಘಸ್ಫೋಟದಿಂದ ಅವ್ಯವಸ್ಥೆ
TV9 Web
| Edited By: |

Updated on:Aug 30, 2021 | 11:59 AM

Share

ಉತ್ತರಾಖಂಡ್​​ನಲ್ಲಿ ಮತ್ತೊಮ್ಮೆ ಮೇಘಸ್ಫೋಟವಾಗಿದ್ದು, ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಏಳು ಮನೆಗಳು ನೆಲಸಮಗೊಂಡಿದ್ದು, ಅವಶೇಷಗಳಡಿ 5ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಧರ್ಚುಲಾದ ಜುಮ್ಮಾ ಗ್ರಾಮದಲ್ಲಿ ಮೇಘ ಸ್ಫೋಟಗೊಂಡಿದೆ. ಅದರ ಪರಿಣಾಮ ಎನ್​ಎಚ್​ಪಿ ಕಾಲನಿ, ತಪೋವನದವರೆಗೂ ಜಲಾವೃತವಾಗಿದೆ ಎಂದು ಹೇಳಲಾಗಿದೆ.

ದುರ್ಘಟನೆ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಟ್ವೀಟ್​ ಮಾಡಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಉತ್ತರಾಖಂಡ್​ನಲ್ಲಿ ಸಿಕ್ಕಾಪಟೆ ಮಳೆ ಬೀಳುತ್ತಿದೆ. ಮಳೆಯಿಂದಾಗಿ ನಿರಂತರ ಹಾನಿಯಾಗುತ್ತಿದೆ ಎಂದು ಹೇಳಿದರು. ಹಾಗೇ, ಘರ್ವಾಲ್​ ಪ್ರದೇಶದಲ್ಲಿ ಪುಷ್ಕರ್​ ಸಿಂಗ್​ ಧಮಿ ಏರಿಯಲ್​ ಸರ್ವೇ ಕೂಡ ನಡೆಸಿದ್ದಾರೆ.

ಕಳೆದ ವಾರ ಖಬ್ರಾಳ ಗ್ರಾಮದ ಸತ್ಲಾ ದೇವಿ ದೇಗುಲದ ಸಮೀಪ ಮೇಘಸ್ಫೋಟವಾಗಿತ್ತು. ಇದರಿಂದಾಗಿ ನದಿಗಳು, ಹಳ್ಳಕೊಳ್ಳಗಳೆಲ್ಲ ತುಂಬಿ ಹರಿದಿದ್ದವು. ನೀರು ಮನೆಗಳಿಗೆ ನುಗ್ಗಿತ್ತು. ವಿದ್ಯುತ್​ ಕಂಬಗಳು, ಮರಗಳು ಮುರಿದುಬಿದ್ದು ಅವ್ಯವಸ್ಥೆ ಸೃಷ್ಟಿಸಿದ್ದವು. ದ್ವಿಚಕ್ರವಾಹನಗಳೂ ನೀರಿನಲ್ಲಿ ತೊಳೆದು ಹೋಗಿದ್ದವು. ಅಂದು ಯಾರೂ ಮೃತಪಟ್ಟಿರಲಿಲ್ಲ.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು

Published On - 11:44 am, Mon, 30 August 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್