AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸಲು ಸಾಧ್ಯವಾಗದಿದ್ದಕ್ಕೆ ಮಹಿಳೆಯ ತಲೆ ಬೋಳಿಸಿ ಥಳಿಸಿದ ಜನ

ಸಾಲ ತೀರಿಸಿಲು ಸಾಧ್ಯವಾಗಲಿಲ್ಲ ಎಂದು ಸ್ವಸಹಾಯ ಸಂಘದ ಜನರು ಮಹಿಳೆಯನ್ನು ಥಳಿಸಿ ತಲೆ ಬೋಳಿಸಿರುವ ಘಟನೆ ಅಗರ್ತಲಾದಲ್ಲಿ ನಡೆದಿದೆ. ಗುಂಪೊಂದು ಮಹಿಳೆಯ ಮೇಲೆ ಹಲ್ಲೆ ನಡೆಸಿ ಭಾಗಶಃ ತಲೆ ಬೋಳಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಬಿಶಾಲ್ಗಢ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ ಮತ್ತು ಸುರಕ್ಷತೆ ಮತ್ತು ಪ್ರಾಥಮಿಕ ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದಾರೆ.

ಸಾಲ ತೀರಿಸಲು ಸಾಧ್ಯವಾಗದಿದ್ದಕ್ಕೆ ಮಹಿಳೆಯ ತಲೆ ಬೋಳಿಸಿ ಥಳಿಸಿದ ಜನ
ಪೊಲೀಸ್
ನಯನಾ ರಾಜೀವ್
|

Updated on: Jan 24, 2025 | 4:01 PM

Share

ತೆಗೆದುಕೊಂಡ ಸಾಲವನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಸಾಧ್ಯವಾಗದಿದ್ದಕ್ಕೆ ಮಹಿಳೆಯ ತಲೆ ಬೋಳಿಸಿ ಥಳಿಸಿರುವ ಅಮಾನವೀಯ ಘಟನೆ ಅಗರ್ತಲಾದಲ್ಲಿ ನಡೆದಿದೆ. ಗುಂಪೊಂದು ಮಹಿಳೆಯ ಮೇಲೆ ಹಲ್ಲೆ ನಡೆಸಿ ಭಾಗಶಃ ತಲೆ ಬೋಳಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಬಿಶಾಲ್ಗಢ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ ಮತ್ತು ಸುರಕ್ಷತೆ ಮತ್ತು ಪ್ರಾಥಮಿಕ ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದಾರೆ.

ಸ್ಥಳೀಯ ಸ್ವ-ಸಹಾಯ ಗುಂಪು (ಎಸ್‌ಎಚ್‌ಜಿ) ಸದಸ್ಯರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ ಎಂದು ತನಿಖೆ ನಡೆಸುತ್ತಿರುವ ಬಿಶಾಲ್‌ಗಢ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶಿಯುಲಿ ದಾಸ್ ಹೇಳಿದ್ದಾರೆ.ಎಸ್​ಎಚ್​ಜಿಯಿಂದ ಹಣವನ್ನು ಸಾಲ ಪಡೆದಿದ್ದರು. ಹಣಕಾಸಿನ ವಿವಾದದಿಂದಾಗಿ ಮಹಿಳೆಯರ ಗುಂಪು ತನ್ನ ಮೇಲೆ ಹಲ್ಲೆ ನಡೆಸಿ ಅರ್ಧ ತಲೆ ಬೋಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ. ನಾವು ಸತ್ಯವನ್ನು ಬಹಿರಂಗಪಡಿಸಲು ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುಮಾರು 15-20 ಸ್ಥಳೀಯ ಮಹಿಳೆಯರು ಅಡುಗೆಮನೆಯಲ್ಲಿದ್ದಾಗ ತನ್ನ ಮನೆಗೆ ನುಗ್ಗಿದ್ದಾರೆ, ಗುಂಪು ಅವರನ್ನು ಹೊರಗೆ ಎಳೆದುಕೊಂಡು, ನಿಂದಿಸಿತು, ಅವರ ಮೇಲೆ ಹಲ್ಲೆ ನಡೆಸಿತು ಮತ್ತು ಅವಳ ಅರ್ಧ ತಲೆ ಬೋಳಿಸಿತು. ತನ್ನ ಪತಿಯು ಎಸ್‌ಎಚ್‌ಜಿಯಿಂದ ಎರವಲು ಪಡೆದ ಹಣವನ್ನು ತಕ್ಷಣವೇ ಹಿಂದಿರುಗಿಸಬೇಕೆಂದು ದಾಳಿಕೋರರು ಒತ್ತಾಯಿಸಿದರು, ಇದು ಅತ್ಯಂತ ಹಿಂಶಾತ್ಮಕ ಘಟನೆಯಾಗಿತ್ತು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಪತ್ನಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಸೆರೆ

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 20-21 ಅನಾಮಧೇಯ ವ್ಯಕ್ತಿಗಳ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿದ್ದಾರೆ, ಇದರಲ್ಲಿ ಸೆಕ್ಷನ್ 74, ಮಹಿಳೆಯ ನಮ್ರತೆಗೆ ದೌರ್ಜನ್ಯ ಎಸಗಿದ್ದಕ್ಕಾಗಿ ಸೆಕ್ಷನ್ 115(2) ಮತ್ತು ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದಕ್ಕಾಗಿ ಸೆಕ್ಷನ್ 3( 5) ಅಡಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ