AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aghori Puja Video: ಶವದ ಎದೆಯ ಮೇಲೆ ಪದ್ಮಾಸನ ಹಾಕಿ ಕುಳಿತು ಅಘೋರಿ ಪೂಜೆ – ತಮಿಳುನಾಡಿನಲ್ಲಿ ವಿಚಿತ್ರ, ಅಮಾನವೀಯ ಆಚರಣೆ

Viral Video: ಶವದ ಪೂಜೆ ಮಾಡಲು ಸತ್ತ ವ್ಯಕ್ತಿಯ ಮೇಲೆ ಕುಳಿತಿರುವುದು ವಿಚಿತ್ರವಾಗಿದೆ. ಸತ್ತ ಸ್ನೇಹಿತನ ಶವವನ್ನು ಪೂಜಿಸುವುದು ಹೀಗಾ? ಎಂದು ಸ್ಥಳೀಯರು ಆಕ್ರೋಶ, ಆತಂಕ ವ್ಯಕ್ತಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ ಈ ಅಘೋರಿ ಪೂಜೆ ಸಂಚಲನ ಮೂಡಿಸುತ್ತಿದೆ.

Aghori Puja Video: ಶವದ ಎದೆಯ ಮೇಲೆ ಪದ್ಮಾಸನ ಹಾಕಿ ಕುಳಿತು ಅಘೋರಿ ಪೂಜೆ - ತಮಿಳುನಾಡಿನಲ್ಲಿ ವಿಚಿತ್ರ, ಅಮಾನವೀಯ ಆಚರಣೆ
ಶವದ ಮೇಲೆ ಕುಳಿತು ಅಘೋರಿ ಪೂಜೆ
ಸಾಧು ಶ್ರೀನಾಥ್​
| Edited By: |

Updated on:May 30, 2023 | 3:38 PM

Share

Viral Video: ತಮಿಳುನಾಡಿನಲ್ಲಿ ನಡೆದಿರುವ ಅಘೋರಿ ಪೂಜೆಯೊಂದು (Aghori Puja) ಸಂಚಲನ ಮೂಡಿಸಿದೆ. ಕೊಯಮತ್ತೂರಿನಲ್ಲಿ ಈ ಘಟನೆ ನಡೆದಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಮಣಿಕಂಠನ್ ಮತ್ತು ಅವರ ಪತ್ನಿ ತಮಿಳುನಾಡಿನ ಕೊಯಮತ್ತೂರು (Coimbatore) ಜಿಲ್ಲೆಯ ಸುಲ್ಲೂರಿನಲ್ಲಿ (Sulur) ನೆಲೆಸಿದ್ದಾರೆ. ಪತ್ನಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಮಣಿಕಂಠನ್ ಸಿಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಣಿಕಂಠನ್ ಅವರ ಕುಟುಂಬಸ್ಥರು ಮೃತದೇಹವನ್ನು (dead body) ಸೂಲೂರಿಗೆ ತಂದು ಅಂತಿಮಸಂಸ್ಕಾರಕ್ಕೆ (Last rites) ವ್ಯವಸ್ಥೆ ಮಾಡಿದ್ದಾರೆ. ಅದೇ ಸಮಯಕ್ಕೆ ಮಣಿಕಂಠನ ಗೆಳೆಯರಾಗಿದ್ದ ಕೆಲವು ಅಘೋರಿಗಳು ಸ್ಥಳಕ್ಕೆ ಬಂದಿದ್ದಾರೆ. ಮಣಿಕಂಠನ್ ಮನಃಶಾಂತಿಗಾಗಿ ಸ್ವಲ್ಪ ಕಾಲ ಪೂಜೆ ಮಾಡುವಂತೆ ಅಘೋರಿಗಳು ಹೇಳಿದರು. ಅದಕ್ಕೆ ಕುಟುಂಬಸ್ಥರು ಒಪ್ಪಿದಾಗ ಮಣಿಕಂಠನ್ ಮೃತದೇಹದ ಮೇಲೆ ಕುಳಿತು ಧ್ಯಾನ ಮಾಡುತ್ತಾ ಮಂತ್ರಗಳನ್ನು ಪಠಿಸುತ್ತಾ ಕಟ್ಟುಮಸ್ತಾದ ಒಬ್ಬ ಯುವ ಅಘೋರಿ ಓ ಅಘೋರಾ.. ಅಘೋರ ಎನ್ನುತ್ತಾ ಮಣಿಕಂಠನ ಶವದ ಮೇಲೆ ಪದ್ಮಾಸನ ಹಾಕಿಕೊಂಡು ಕುಳಿತು ಜೋರಾಗಿ ಕೂಗಿದ್ದಾನೆ. ಪೂಜೆ ಮಾಡುವಾಗ.. ಆತನ ಅನುಯಾಯಿಗಳು ಸಹ ಜೋರಾಗಿಯೇ ಮಂತ್ರಗಳನ್ನು ಪಠಿಸಿ, ಗಲಾಟೆ ಮಾಡಿದರು. ಡೋಲು ಬಾರಿಸುವುದರ ಜೊತೆಗೆ ಶಂಖಗಳನ್ನು ಸಹ ಊದಿದರು.

ಶವದ ಎದೆಯ ಮೇಲೆ ಪದ್ಮಾಸನ ಹಾಕಿ ಕುಳಿತು ಅಘೋರಿ ಪೂಜೆ ವಿಡಿಯೋ

ಈ ಎಲ್ಲಾ ಗಲಾಟೆ ನೋಡುಗರನ್ನು ಭಯಭೀತಗೊಳಿಸಿತು. ಕೆಲವರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದರೆ, ಇನ್ನು ಕೆಲವರು ಈ ಪೂಜೆ ಮಾಡಲು ಸತ್ತ ವ್ಯಕ್ತಿಯ ಮೇಲೆ ಕುಳಿತಿರುವುದು ವಿಚಿತ್ರವಾಗಿದೆ. ಸತ್ತ ಸ್ನೇಹಿತನ ಶವವನ್ನು ಪೂಜಿಸುವುದು ಹೀಗಾ? ಎಂದು ಆಕ್ರೋಶ, ಆತಂಕ ವ್ಯಕ್ತಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ ಅಘೋರಿ ಪೂಜೆ ಸಂಚಲನ ಮೂಡಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Tue, 30 May 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?