Sign In

By signing in or creating an account, you agree with Associated Broadcasting Company's Terms & Conditions and Privacy Policy.

Aghori Puja Video: ಶವದ ಎದೆಯ ಮೇಲೆ ಪದ್ಮಾಸನ ಹಾಕಿ ಕುಳಿತು ಅಘೋರಿ ಪೂಜೆ – ತಮಿಳುನಾಡಿನಲ್ಲಿ ವಿಚಿತ್ರ, ಅಮಾನವೀಯ ಆಚರಣೆ

Viral Video: ಶವದ ಪೂಜೆ ಮಾಡಲು ಸತ್ತ ವ್ಯಕ್ತಿಯ ಮೇಲೆ ಕುಳಿತಿರುವುದು ವಿಚಿತ್ರವಾಗಿದೆ. ಸತ್ತ ಸ್ನೇಹಿತನ ಶವವನ್ನು ಪೂಜಿಸುವುದು ಹೀಗಾ? ಎಂದು ಸ್ಥಳೀಯರು ಆಕ್ರೋಶ, ಆತಂಕ ವ್ಯಕ್ತಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ ಈ ಅಘೋರಿ ಪೂಜೆ ಸಂಚಲನ ಮೂಡಿಸುತ್ತಿದೆ.

Aghori Puja Video: ಶವದ ಎದೆಯ ಮೇಲೆ ಪದ್ಮಾಸನ ಹಾಕಿ ಕುಳಿತು ಅಘೋರಿ ಪೂಜೆ - ತಮಿಳುನಾಡಿನಲ್ಲಿ ವಿಚಿತ್ರ, ಅಮಾನವೀಯ ಆಚರಣೆ
ಶವದ ಮೇಲೆ ಕುಳಿತು ಅಘೋರಿ ಪೂಜೆ
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:May 30, 2023 | 3:38 PM

Viral Video: ತಮಿಳುನಾಡಿನಲ್ಲಿ ನಡೆದಿರುವ ಅಘೋರಿ ಪೂಜೆಯೊಂದು (Aghori Puja) ಸಂಚಲನ ಮೂಡಿಸಿದೆ. ಕೊಯಮತ್ತೂರಿನಲ್ಲಿ ಈ ಘಟನೆ ನಡೆದಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಮಣಿಕಂಠನ್ ಮತ್ತು ಅವರ ಪತ್ನಿ ತಮಿಳುನಾಡಿನ ಕೊಯಮತ್ತೂರು (Coimbatore) ಜಿಲ್ಲೆಯ ಸುಲ್ಲೂರಿನಲ್ಲಿ (Sulur) ನೆಲೆಸಿದ್ದಾರೆ. ಪತ್ನಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಮಣಿಕಂಠನ್ ಸಿಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಣಿಕಂಠನ್ ಅವರ ಕುಟುಂಬಸ್ಥರು ಮೃತದೇಹವನ್ನು (dead body) ಸೂಲೂರಿಗೆ ತಂದು ಅಂತಿಮಸಂಸ್ಕಾರಕ್ಕೆ (Last rites) ವ್ಯವಸ್ಥೆ ಮಾಡಿದ್ದಾರೆ. ಅದೇ ಸಮಯಕ್ಕೆ ಮಣಿಕಂಠನ ಗೆಳೆಯರಾಗಿದ್ದ ಕೆಲವು ಅಘೋರಿಗಳು ಸ್ಥಳಕ್ಕೆ ಬಂದಿದ್ದಾರೆ. ಮಣಿಕಂಠನ್ ಮನಃಶಾಂತಿಗಾಗಿ ಸ್ವಲ್ಪ ಕಾಲ ಪೂಜೆ ಮಾಡುವಂತೆ ಅಘೋರಿಗಳು ಹೇಳಿದರು. ಅದಕ್ಕೆ ಕುಟುಂಬಸ್ಥರು ಒಪ್ಪಿದಾಗ ಮಣಿಕಂಠನ್ ಮೃತದೇಹದ ಮೇಲೆ ಕುಳಿತು ಧ್ಯಾನ ಮಾಡುತ್ತಾ ಮಂತ್ರಗಳನ್ನು ಪಠಿಸುತ್ತಾ ಕಟ್ಟುಮಸ್ತಾದ ಒಬ್ಬ ಯುವ ಅಘೋರಿ ಓ ಅಘೋರಾ.. ಅಘೋರ ಎನ್ನುತ್ತಾ ಮಣಿಕಂಠನ ಶವದ ಮೇಲೆ ಪದ್ಮಾಸನ ಹಾಕಿಕೊಂಡು ಕುಳಿತು ಜೋರಾಗಿ ಕೂಗಿದ್ದಾನೆ. ಪೂಜೆ ಮಾಡುವಾಗ.. ಆತನ ಅನುಯಾಯಿಗಳು ಸಹ ಜೋರಾಗಿಯೇ ಮಂತ್ರಗಳನ್ನು ಪಠಿಸಿ, ಗಲಾಟೆ ಮಾಡಿದರು. ಡೋಲು ಬಾರಿಸುವುದರ ಜೊತೆಗೆ ಶಂಖಗಳನ್ನು ಸಹ ಊದಿದರು.

ಶವದ ಎದೆಯ ಮೇಲೆ ಪದ್ಮಾಸನ ಹಾಕಿ ಕುಳಿತು ಅಘೋರಿ ಪೂಜೆ ವಿಡಿಯೋ

ಈ ಎಲ್ಲಾ ಗಲಾಟೆ ನೋಡುಗರನ್ನು ಭಯಭೀತಗೊಳಿಸಿತು. ಕೆಲವರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದರೆ, ಇನ್ನು ಕೆಲವರು ಈ ಪೂಜೆ ಮಾಡಲು ಸತ್ತ ವ್ಯಕ್ತಿಯ ಮೇಲೆ ಕುಳಿತಿರುವುದು ವಿಚಿತ್ರವಾಗಿದೆ. ಸತ್ತ ಸ್ನೇಹಿತನ ಶವವನ್ನು ಪೂಜಿಸುವುದು ಹೀಗಾ? ಎಂದು ಆಕ್ರೋಶ, ಆತಂಕ ವ್ಯಕ್ತಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ ಅಘೋರಿ ಪೂಜೆ ಸಂಚಲನ ಮೂಡಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Tue, 30 May 23

ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ