AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ಸ್ಥಳ ಖಾಲಿ ಮಾಡಿ ಎಂದು ಬ್ಯಾನರ್ ಹಚ್ಚಿದ ದೆಹಲಿ ಪೊಲೀಸರು; ರೈತ ಮುಖಂಡರ ಆಕ್ರೋಶ

Farmers Protest: ಪ್ರತಿಭಟನಾನಿರತ ರೈತರು ಸ್ಥಳ ಖಾಲಿ ಮಾಡಬೇಕು. ದೆಹಲಿ ಗಡಿಭಾಗದಿಂದ ಹಿಂತಿರುಗಬೇಕು ಎಂದು ಬ್ಯಾನರ್​ಗಳನ್ನು ಹಾಕಿದ್ದಾರೆ. ಪೊಲೀಸರ ಈ ನಡೆಯನ್ನು ರೈತರು ತೀವ್ರವಾಗಿ ಖಂಡಿಸಿದ್ದಾರೆ.

ಪ್ರತಿಭಟನಾ ಸ್ಥಳ ಖಾಲಿ ಮಾಡಿ ಎಂದು ಬ್ಯಾನರ್ ಹಚ್ಚಿದ ದೆಹಲಿ ಪೊಲೀಸರು; ರೈತ ಮುಖಂಡರ ಆಕ್ರೋಶ
ಪೊಲೀಸ್ ಭದ್ರತೆ, ಸರ್ಕಾರ ರಸ್ತೆಗಳನ್ನು ಬೇಲಿ, ಬ್ಯಾರಿಕೇಡ್​ಗಳ ಮೂಲಕ ಬಂದ್ ಮಾಡಿರುವ ದೃಶ್ಯಗಳನ್ನು ನೋಡುತ್ತಿರುವ ಹೋರಾಟಗಾರರು. (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 7:45 PM

Share

ದೆಹಲಿ: ರೈತ ಹೋರಾಟಗಾರರು ರಾಷ್ಟ್ರ ರಾಜಧಾನಿಯ ಗಡಿಭಾಗವನ್ನು ಖಾಲಿ ಮಾಡಬೇಕು ಎಂದು ಬರೆದಿರುವ ಬ್ಯಾನರ್​ಗಳನ್ನು ಪೊಲೀಸರು ಟಿಕ್ರಿ ಗಡಿಭಾಗದಲ್ಲಿ ಹಾಕಿರುವ ಬಗ್ಗೆ ರೈತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು (Delhi Police), ಬ್ಯಾನರ್​ಗಳನ್ನು ಹಾಕಿರುವುದು ಇದೇ ಮೊದಲಲ್ಲ. ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸಲು ರೈತರಿಗೆ ಅವಕಾಶವಿಲ್ಲ ಎಂದು ತಿಳಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ರೈತ ಆಂದೋಲನದಲ್ಲಿ (Farmers Protest) ತೊಡಗಿಸಿಕೊಂಡಿರುವ ರೈತರು, ತಮ್ಮ ಸಾಂವಿಧಾನಿಕ ಹಕ್ಕನ್ನು ಪಡೆದಿದ್ದಾರೆ. ಚಳುವಳಿ ನಡೆಸದಂತೆ ತಡೆಯುವ ಪೊಲೀಸರ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (Samyukta Kisan Morcha) ಮುಖಂಡರು ತಿಳಿಸಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ಮುಂದುವರಿಸುವಂತೆ ರೈತರನ್ನು ಕೇಳಿಕೊಂಡಿದ್ದಾರೆ.

ಪಂಜಾಬ್, ಹರ್ಯಾಣ ಹಾಗೂ ಪಶ್ಚಿಮ ಉತ್ತರ ಪ್ರದೇಶ ಭಾಗದ ಸಾವಿರಾರು ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸಿಂಘು, ಟಿಕ್ರಿ ಹಾಗೂ ಘಾಜಿಪುರ್ ಭಾಗಗಳಲ್ಲಿ ಕಳೆದ 90 ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆ (MSP) ನೀಡುವ ಬಗ್ಗೆ ಖಚಿತತೆ ನೀಡಬೇಕು ಎಂಬುದು ರೈತರ ಬೇಡಿಕೆಯಾಗಿದೆ.

ಪ್ರತಿಭಟನಾನಿರತ ರೈತರು ಸ್ಥಳ ಖಾಲಿ ಮಾಡಬೇಕು. ದೆಹಲಿ ಗಡಿಭಾಗದಿಂದ ಹಿಂತಿರುಗಬೇಕು ಎಂದು ಪೊಲೀಸರು ಬ್ಯಾನರ್​ಗಳನ್ನು ಹಾಕಿದ್ದಾರೆ. ಪೊಲೀಸರ ಈ ನಡೆಯನ್ನು ರೈತರು ತೀವ್ರವಾಗಿ ಖಂಡಿಸಿದ್ದಾರೆ. ರೈತ ಹೋರಾಟ ಕೊನೆಗೊಳಿಸಲು ಇಂಥ ಬೆದರಿಕೆ ಮತ್ತು ಎಚ್ಚರಿಕೆಗಳನ್ನು ನೀಡುವುದನ್ನು ನಾವು ವಿರೋಧಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ತಿಳಿಸಿದ್ದಾರೆ.

ಪೊಲೀಸರು ಹಾಕಿರುವ ಬ್ಯಾನರ್​ಗಳಲ್ಲಿ ರೈತರು ಇಂತಿಷ್ಟೇ ದಿನದೊಳಗೆ ಗಡಿಭಾಗದಿಂದ ಹಿಂತೆರಳಬೇಕು ಎಂಬ ಗಡುವು ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಇದು ಸಹಜ ಪ್ರಕ್ರಿಯೆ ಅಷ್ಟೇ ಎಂದು ಹೇಳಿದ್ದಾರೆ. ರೈತರು ಹರ್ಯಾಣ ರಾಜ್ಯದ ಗಡಿಯಲ್ಲಿ ಧರಣಿ ಕುಳಿತುಕೊಂಡಿದ್ದಾರೆ. ಕಾನೂನು ಬಾಹಿರವಾಗಿ ರಾಷ್ಟ್ರ ರಾಜಧಾನಿ ಪ್ರವೇಶಿಸುವಂತಿಲ್ಲ ಎಂದು ತಿಳಿಸಲು ದೆಹಲಿ ಗಡಿಯಲ್ಲಿ ಬ್ಯಾನರ್​ಗಳನ್ನು ಅಳವಡಿಸಲಾಗಿದೆ. ಇದೊಂದು ಸಹಜ ಪ್ರಕ್ರಿಯೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Farmers Protest: ಪ್ರತಿಭಟನಾನಿರತ ಉತ್ತರ ಪ್ರದೇಶ ರೈತರೊಂದಿಗೆ ಮಾತುಕತೆ ನಡೆಸಿದ ಅರವಿಂದ್​ ಕೇಜ್ರಿವಾಲ್​; ಫೆ.28ಕ್ಕೆ ಮಹಾ ಕಿಸಾನ್ ಪಂಚಾಯತ್​​

Disha Ravi: ಯುವ ಪರಿಸರ ಹೋರಾಟಗಾರ್ತಿ ದಿಶಾ ರವಿಗೆ ಜಾಮೀನು ಮಂಜೂರು

Published On - 8:35 pm, Tue, 23 February 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು