AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agni-V: 5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ-5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

ಜಲಾಂತರ್ಗಾಮಿಗಳಿಂದಲೂ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸುವ ವ್ಯವಸ್ಥೆಯನ್ನು ಭಾರತ ಸಿದ್ಧಪಡಿಸುತ್ತಿದ್ದು, ಸಂಭಾವ್ಯ ಸವಾಲುಗಳನ್ನು ಎದುರಿಸಲು ಸಜ್ಜಾಗುತ್ತಿದೆ.

Agni-V: 5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ-5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ
ಅಗ್ನಿ-5 ಖಂಡಾಂತರ ಕ್ಷಿಪಣಿ
TV9 Web
| Edited By: |

Updated on:Oct 27, 2021 | 9:26 PM

Share

ದೆಹಲಿ: ಅಣ್ವಸ್ತ್ರ ಸಿಡಿತಲೆ ಹೊತ್ತು 5000 ಕಿಮೀ ದೂರದ ಗುರಿಯನ್ನು ಧ್ವಂಸಗೊಳಿಸುವ ಸಾಮರ್ಥ್ಯವಿರುವ ಅಗ್ನಿ-5 ಖಂಡಾಂತರ ಕ್ಷಿಪಣಿಯನ್ನು ಭಾರತ ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ಅಗ್ನಿ-5 ಕ್ಷಿಪಣಿಯನ್ನು ಪರೀಕ್ಷಿಸುವ ಮೂಲಕ ಚೀನಾಕ್ಕೆ ಭಾರತ ಪರೋಕ್ಷವಾಗಿ ಸಂದೇಶ ರವಾನಿಸಿದೆ ಎಂದು ವಿಶ್ಲೇಷಿಸಲಾಗಿದೆ. ಒಡಿಶಾ ಕಡಲ ತೀರದ ಎ.ಪಿ.ಜೆ.ಅಬ್ದುಲ್ ಕಲಾಂ ದ್ವೀಪದಿಂದ ರಾತ್ರಿ 7.50ಕ್ಕೆ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ನಡೆಯಿತು.

ಮೂರು ಹಂತದ ಘನ ಇಂಧನ ಎಂಜಿನ್ ಹೊಂದಿರುವ ಈ ಕ್ಷಿಪಣಿಯು ಗುರಿಯನ್ನು ಅತ್ಯಂತ ನಿಖರವಾಗಿ ತಲುಪಿ ಧ್ವಂಸಗೊಳಿಸಬಲ್ಲದು. ಮೊದಲು ಅಣ್ವಸ್ತ್ರ ಬಳಸುವುದಿಲ್ಲ ಎಂಬ ಈ ಹಿಂದಿನ ನಿರ್ಧಾರಕ್ಕೆ ಇಂದಿಗೂ ಭಾರತ ಬದ್ಧವಾಗಿದೆ. ಹೀಗಾಗಿಯೇ ನಿಖರವಾಗಿ ಗುರಿ ಮುಟ್ಟಬಲ್ಲ ಖಂಡಾಂತರ ಕ್ಷಿಪಣಿಗಳಿಗೆ ಭಾರತದ ರಕ್ಷಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಮಹತ್ವವಿದೆ. ಜಲಾಂತರ್ಗಾಮಿಗಳಿಂದಲೂ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸುವ ವ್ಯವಸ್ಥೆಯನ್ನು ಭಾರತ ಸಿದ್ಧಪಡಿಸುತ್ತಿದ್ದು, ಸಂಭಾವ್ಯ ಸವಾಲುಗಳನ್ನು ಎದುರಿಸಲು ಸಜ್ಜಾಗುತ್ತಿದೆ.

ಟ್ರಕ್ ಮೇಲೆ ಲೋಡ್​ ಮಾಡಿ ಅಗ್ನಿ-5 ಕ್ಷಿಪಣಿಯನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸಬಹುದಾಗಿದೆ. ನಿಖರವಾಗಿ ಗುರಿ ಮುಟ್ಟುವ ಸಾಮರ್ಥ್ಯ ಇರುವುದು ಈ ಕ್ಷಿಪಣಿಯ ಪ್ರಮುಖ ವೈಶಿಷ್ಟ್ಯವಾಗಿದೆ. ಭಾರತದ ಬಳಿ ಇಂಥ ಮಹತ್ವದ ಕ್ಷಿಪಣಿಗಳು ಇದೆ ಎನ್ನುವುದು ಇತರ ದೇಶಗಳು ಭಾರತದ ವಿರುದ್ಧ ಯುದ್ಧ ಘೋಷಿಸಲು ಹತ್ತು ಸಲ ಯೋಚಿಸುವಂತೆ ಮಾಡುತ್ತವೆ. ರಕ್ಷಣಾ ವಿಜ್ಞಾನಿ ನಟರಾಜನ್ 2007ರಲ್ಲಿ ಮೊದಲ ಬಾರಿಗೆ ಅಗ್ನಿ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಮಾಡಿದ್ದರು.

ಈ ಕ್ಷಿಪಣಿಯು ಏಷ್ಯಾವನ್ನು ಇಡಿಯಾಗಿ, ಯೂರೋಪ್ ಮತ್ತು ಆಫ್ರಿಕಾದ ಕೆಲ ಭಾಗಗಳನ್ನು ಗುರಿಯಾಗಿಸಬಲ್ಲದು. ಈ ಕ್ಷಿಪಣಿಯು ಬಳಸುವ ಎಂಜಿನ್ ಸಹ ವೈಶಿಷ್ಟ್ಯಪೂರ್ಣವಾದುದು. ಎಂಐಆರ್​ವಿ (Multiple Independently Targetable Re-entry Vehicles – MIRV) ತಂತ್ರಜ್ಞಾನದ ಈ ಎಂಜಿನ್​ ಬಳಸಿ ಉಡಾಯಿಸಿದ ಕ್ಷಿಪಣಿಯು ಹಲವು ಗುರಿಗಳನ್ನು ಏಕಕಾಲಕ್ಕೆ ಧ್ವಂಸ ಮಾಡಬಲ್ಲದು.

ಇದನ್ನೂ ಓದಿ: ಸದ್ದಿಲ್ಲದೆ ಹೈಪರ್​ಸಾನಿಕ್ ಕ್ಷಿಪಣಿ ಪ್ರಯೋಗ ನಡೆಸಿದ ಚೀನಾ: ಅಮೆರಿಕಕ್ಕೆ ಭದ್ರತೆಯ ಆತಂಕ, ಭಾರತದಿಂದ ಎಚ್ಚರಿಕೆಯ ಪ್ರತಿಕ್ರಿಯೆ ಇದನ್ನೂ ಓದಿ: Missile Power: ಕ್ಷಿಪಣಿ ತಂತ್ರಜ್ಞಾನದಲ್ಲಿ ಭಾರತದ ಸ್ವಾವಲಂಬನೆ, ಮೇಲುಗೈಗೆ ಸಾಕ್ಷಿಯಾದ ಸೂಪರ್​ಸಾನಿಕ್ ಬ್ರಹ್ಮೋಸ್, ಸಬ್​ಸಾನಿಕ್ ನಿರ್ಭಯ್

Published On - 9:26 pm, Wed, 27 October 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?