AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಯುವಜನಾಂಗಕ್ಕೆ ಹಾನಿಕಾರಕ, ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸಿ: ಮೋದಿಗೆ ಕೇಜ್ರಿವಾಲ್ ಒತ್ತಾಯ

Agnipath Scheme ಅಗ್ನಿಪಥ್ ಯೋಜನೆಯು ನಮ್ಮ ಯುವಕರಿಗೆ ಮತ್ತು ದೇಶಕ್ಕೆ ಹಾನಿಕಾರಕವಾಗಿದೆ. ನಾಲ್ಕು ವರ್ಷಗಳ ಸೇವೆಯ ನಂತರ ಅವರನ್ನು ಮಾಜಿ ಸೈನಿಕರೆಂದು ಕರೆಯಲಾಗುವುದು. ಯಾವುದೇ ಪಿಂಚಣಿ ಅವರಿಗಿರುವುದಿಲ್ಲ. ಕೇಂದ್ರ ಸರ್ಕಾರ ಇದನ್ನು ಪರಿಶೀಲಿಸಬೇಕು

ಅಗ್ನಿಪಥ್ ಯುವಜನಾಂಗಕ್ಕೆ ಹಾನಿಕಾರಕ, ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸಿ: ಮೋದಿಗೆ ಕೇಜ್ರಿವಾಲ್ ಒತ್ತಾಯ
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on: Jun 24, 2022 | 4:37 PM

Share

ದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ (Agnipath) ಯುವಕರಿಗೆ ಮತ್ತು ದೇಶಕ್ಕೆ ಹಾನಿಕಾರಕ. ಈ ಯೋಜನೆಯನ್ನು ಪರಿಶೀಲಿಸುವಂತೆ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ ಸರ್ಕಾರಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಶುಕ್ರವಾರ ಒತ್ತಾಯಿಸಿದ್ದಾರೆ. “ಅಗ್ನಿಪಥ್ ಯೋಜನೆಯು ನಮ್ಮ ಯುವಕರಿಗೆ ಮತ್ತು ದೇಶಕ್ಕೆ ಹಾನಿಕಾರಕವಾಗಿದೆ. ನಾಲ್ಕು ವರ್ಷಗಳ ಸೇವೆಯ ನಂತರ ಅವರನ್ನು ಮಾಜಿ ಸೈನಿಕರೆಂದು ಕರೆಯಲಾಗುವುದು. ಯಾವುದೇ ಪಿಂಚಣಿ ಅವರಿಗಿರುವುದಿಲ್ಲ. ಕೇಂದ್ರ ಸರ್ಕಾರ ಇದನ್ನು ಪರಿಶೀಲಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ. ಜೂನ್ 14ರಂದು ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಘೋಷಿಸಿದಂದಿನಿಂದ ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ . ಹದಿನೇಳೂವರೆ ಮತ್ತು 21 ವರ್ಷದ ಮಧ್ಯೆಯಿರುವ ಯುವಕ/ಯುವತಿಯರನ್ನು ನಾಲ್ಕು ವರ್ಷಗಳ ಕಾಲ ಸೇನೆಗೆ ಸೇರಿಸುವ ಯೋಜನೆ ಇದಾಗಿದ್ದು ,ಕಾಲಾವಧಿಯ ನಂತರ ಇವರಿಗೆ ಗ್ಯಾಚ್ಯುಟಿ, ಪಿಂಚಣಿ ಸೌಲಭ್ಯ ಇರುವುದಿಲ್ಲ. ಪ್ರತಿಭಟನೆಗಳ ನಡುವೆಯೇ ಸರ್ಕಾರ ವಯೋಮಿತಿಯನ್ನು 23ಕ್ಕೆ ಏರಿಸಿತ್ತು. ಇದಕ್ಕಿಂತ ಮುಂಚೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪರಮ್ ವೀರ್ ಚಕ್ರ ವಿಜೇತ ಕ್ಯಾಪ್ಟನ್ ಬಾನಾ ಸಿಂಗ್ ಅವರು ಅಗ್ನಿಪಥ್ ಯೋಜನೆಯನ್ನ ಟೀಕಿಸುವ ವಿಡಿಯೊ ಹಂಚಿಕೊಂಡಿದ್ದು, ಹೊಸ ಭಾರತದಲ್ಲಿ ಸ್ನೇಹಿತರು ಹೇಳಿದ್ದು ಮಾತ್ರ ಕೇಳುತ್ತದೆಯೇ ಹೊರತು ಹೀರೊಗಳು ಹೇಳಿದ್ದಲ್ಲ ಎಂದಿದ್ದರು.

ಈ ಟ್ವೀಟ್​ನ್ನು ಶೇರ್ ಮಾಡಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ,ಒಂದೆಡೆ ಮೋದಿಯ ದುರಹಂಕಾರ ಮತ್ತು ಸರ್ವಾಧಿಕಾರ, ಮತ್ತೊಂದೆಡೆ ಪರಮ್​​ವೀರ್ ಎಂದಿದ್ದರು.

ಇದನ್ನೂ ಓದಿ
Image
ಅಗ್ನೀಪಥ್ ಯೋಜನೆ ಯಾಕೆ ಬೇಕು? ಪೊಲೀಸರನ್ನು ತಳ್ಳಾಡಿ ಅಸಭ್ಯವಾಗಿ ಬೆರಳು ತೊರಿಸಿ ವಾರ್ನಿಂಗ್ ಕೊಟ್ಟ ನಲಪಾಡ್​
Image
Agniveer Recruitment 2022: ಅಗ್ನಿವೀರರಾಗಲು ಇಂದೇ ಹೆಸರು ನೋಂದಾಯಿಸಿ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
Image
Gujarat Riots: ಗುಜರಾತ್​ ಗಲಭೆಯಲ್ಲಿ ನರೇಂದ್ರ ಮೋದಿಗೆ ಕ್ಲೀನ್​ಚಿಟ್ ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ
Image
Agnipath Scheme: ಅಗ್ನಿಪಥ್​ ಯೋಜನೆ; ಭಾರತೀಯ ವಾಯುಪಡೆಗೆ ಇಂದಿನಿಂದ ಅಗ್ನಿವೀರ್​ಗಳ​​ ನೋಂದಣಿ ಆರಂಭ

ಕಳೆದ ವಾರ ಅಗ್ನಿಪಥ್ ವಿರೋಧಿಸಿ ಬಿಹಾರ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಹರ್ಯಾಣ ಮತ್ತು ತೆಲಂಗಾಣದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ