AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agnipath Scheme: ಜಮ್ಮು ಕಾಶ್ಮೀರದಿಂದ ಅಗ್ನಿವೀರ್​​ಗಳ ಮೊದಲ ಬ್ಯಾಚ್ ಭಾರತೀಯ ಸೇನೆಗೆ ತರಬೇತಿಗೆ ಸೇರ್ಪಡೆ

ದೈಹಿಕ ಪರೀಕ್ಷೆಗಳು, ವೈದ್ಯಕೀಯ ಪರೀಕ್ಷೆಗಳು, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಸೇರಿದಂತೆ ಕಠಿಣ ಪರೀಕ್ಷೆಗಳ ನಂತರ ಸುಮಾರು 200 ಅಭ್ಯರ್ಥಿಗಳನ್ನು ಅಗ್ನಿವೀರ್​​ಗಳಾಗಿ ಆಯ್ಕೆ ಮಾಡಲಾಗಿದೆ.

Agnipath Scheme: ಜಮ್ಮು ಕಾಶ್ಮೀರದಿಂದ ಅಗ್ನಿವೀರ್​​ಗಳ ಮೊದಲ ಬ್ಯಾಚ್ ಭಾರತೀಯ ಸೇನೆಗೆ ತರಬೇತಿಗೆ ಸೇರ್ಪಡೆ
ಸಾಂದರ್ಭಿಕ ಚಿತ್ರ Image Credit source: India Today
TV9 Web
| Updated By: Digi Tech Desk|

Updated on:Dec 27, 2022 | 11:45 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕೇಂದ್ರಾಡಳಿತ ಪ್ರದೇಶದಿಂದ ಭಾರತ ಸರ್ಕಾರದ ಪ್ರಾಯೋಜಿತ ಅಗ್ನಿಪಥ್ ಯೋಜನೆಯಡಿ (Agnipath Scheme) ಆಯ್ಕೆಯಾದ ಮೊದಲ ಬ್ಯಾಚ್​ನ “ಅಗ್ನಿವೀರ್​ಗಳು” (Agniveer) ಹಲವಾರು ಹುದ್ದೆಗಳಿಗೆ ತರಬೇತಿಗಾಗಿ ಭಾರತೀಯ ಸೇನೆಯನ್ನು (Indian Army) ಸೇರಿಕೊಂಡಿದ್ದಾರೆ. ದೈಹಿಕ ಪರೀಕ್ಷೆಗಳು, ವೈದ್ಯಕೀಯ ಪರೀಕ್ಷೆಗಳು, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಸೇರಿದಂತೆ ಕಠಿಣ ಪರೀಕ್ಷೆಗಳ ನಂತರ ಸುಮಾರು 200 ಅಭ್ಯರ್ಥಿಗಳನ್ನು ಅಗ್ನಿವೀರ್​​ಗಳಾಗಿ ಆಯ್ಕೆ ಮಾಡಲಾಗಿದೆ.

ಈ ಅಭ್ಯರ್ಥಿಗಳನ್ನು ಶ್ರೀನಗರದಲ್ಲಿರುವ ಸೇನಾ ನೇಮಕಾತಿ ಕಚೇರಿಯಿಂದ ಭಾರತೀಯ ಸೇನೆಯ ವಿವಿಧ ರೆಜಿಮೆಂಟ್‌ಗಳ ಸುಮಾರು 30 ತರಬೇತಿ ಕೇಂದ್ರಗಳಿಗೆ ಡಿಸೆಂಬರ್ 24ರಂದು ಕಳುಹಿಸಲಾಗಿದೆ. ಅಭ್ಯರ್ಥಿಗಳು ಡಿಸೆಂಬರ್ 25ರಿಂದ 30ರವರೆಗೆ ತರಬೇತಿ ಪಡೆಯಲಿದ್ದಾರೆ.

ಇದನ್ನೂ ಓದಿ: Agniveer Scheme: ಅಗ್ನಿವೀರ್ ಯೋಜನೆಯಡಿ ಭಾರತೀಯ ನೌಕಾಪಡೆಗೆ ಮೊದಲ ಬಾರಿಗೆ 341 ಮಹಿಳೆಯರ ನೇಮಕ

ಅಗ್ನಿಪಥ್ ಯೋಜನೆಯು 17.5ರಿಂದ 21 ವರ್ಷ ವಯಸ್ಸಿನ ಯುವಕರನ್ನು 4 ವರ್ಷಗಳ ಅವಧಿಗೆ “ಅಗ್ನಿವೀರ್​ಗಳು” ಎಂದು 3 ಸೇವೆಗಳಲ್ಲಿ ಯಾವುದನ್ನಾದರೂ ಸೇರಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಜೂನ್ 14ರಂದು ಅನಾವರಣಗೊಂಡ ಅಗ್ನಿಪಥ್ ಯೋಜನೆಯು ಸಶಸ್ತ್ರ ಪಡೆಗಳಲ್ಲಿ ಯುವಕರ ನೇಮಕಾತಿಗೆ ನಿಯಮಗಳನ್ನು ರೂಪಿಸುತ್ತದೆ. ಈ ನಿಯಮಗಳ ಪ್ರಕಾರ, ಹದಿನೇಳೂವರೆ ಮತ್ತು 21 ವರ್ಷ ವಯಸ್ಸಿನವರು ಅಗ್ನಿಪಥ್ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅವರನ್ನು 4 ವರ್ಷಗಳ ಅಧಿಕಾರಾವಧಿಗೆ ಸೇರಿಸಿಕೊಳ್ಳಲಾಗುತ್ತದೆ. ಈ ಯೋಜನೆಯು ಜಾರಿಗೆ ಬಂದ ನಂತರ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು.

ನಂತರ, ಈ ವರ್ಷ ಸರ್ಕಾರವು ಅಗ್ನಿಪಥ್ ಯೋಜನೆಯ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 am, Tue, 27 December 22

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ