AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agnipath scheme ಹಳೆಯ ನೇಮಕಾತಿ ನೀತಿ ರದ್ದು; ಅಗ್ನಿಪಥ್ ಯೋಜನೆ ಮೂಲಕ ಮಾತ್ರ ಸೇನೆ, ನೌಕಾಪಡೆ, ವಾಯಪಡೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಸಿಲುಕಿರುವ ಸಾವಿರಾರು ಅರ್ಜಿದಾರರ ಭವಿಷ್ಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಝಾ, ಸಾಂಕ್ರಾಮಿಕ ಸಮಯದಲ್ಲಿ ಕಳೆದ ಎರಡು ವರ್ಷಗಳ ನೇಮಕಾತಿಯನ್ನು ಸರಿದೂಗಿಸಲು ಸರ್ಕಾರವು ಈಗಾಗಲೇ ವಯೋಮಿತಿಯಲ್ಲಿ ಸಡಿಲಿಕೆಯನ್ನು ಘೋಷಿಸಿದೆ.

Agnipath scheme ಹಳೆಯ ನೇಮಕಾತಿ ನೀತಿ ರದ್ದು; ಅಗ್ನಿಪಥ್ ಯೋಜನೆ ಮೂಲಕ ಮಾತ್ರ ಸೇನೆ, ನೌಕಾಪಡೆ, ವಾಯಪಡೆಗೆ ನೇಮಕಾತಿ
ಅಗ್ನಿಪಥ ಯೋಜನೆ
TV9 Web
| Edited By: |

Updated on: Jun 19, 2022 | 5:46 PM

Share

ದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ (Agnipath scheme)ವಿರೋಧಿಸಿ ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ, ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ನೇಮಕಾತಿ ಅಗ್ನಿಪಥ್ ಯೋಜನೆಯ ಮೂಲಕ ಮಾತ್ರ ನಡೆಯಲಿದೆ ಎಂದು ಈ ಮೂರುಸೇವೆಗಳ ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಉನ್ನತ ಅಧಿಕಾರಿಗಳ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಏರ್ ಮಾರ್ಷಲ್ ಸೂರ್ಯ ಕುಮಾರ್ ಝಾ (Air Marshal Surya Kumar Jha) ಎಲ್ಲಾ ನೇಮಕಾತಿಗಳು ಈಗ ಅಗ್ನಿವೀರ್ (Agniveer) ಮೂಲಕ ಮಾತ್ರ ಆಗಬೇಕು, ಅರ್ಹರು ಮತ್ತೆ ಅರ್ಜಿ ಸಲ್ಲಿಸಬೇಕು ಎಂದಿದ್ದಾರೆ. ಆಯ್ಕೆ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಸಿಲುಕಿರುವ ಸಾವಿರಾರು ಅರ್ಜಿದಾರರ ಭವಿಷ್ಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಝಾ, ಸಾಂಕ್ರಾಮಿಕ ಸಮಯದಲ್ಲಿ ಕಳೆದ ಎರಡು ವರ್ಷಗಳ ನೇಮಕಾತಿಯನ್ನು ಸರಿದೂಗಿಸಲು ಸರ್ಕಾರವು ಈಗಾಗಲೇ ವಯೋಮಿತಿಯಲ್ಲಿ ಸಡಿಲಿಕೆಯನ್ನು ಘೋಷಿಸಿದೆ. ಆದರೆ ಬೇರೆ ಯಾವುದೇ ಸಡಿಲಿಕೆಯನ್ನು ನಿರೀಕ್ಷಿಸಿರಲಿಲ್ಲ. ಅರ್ಹ ಅಭ್ಯರ್ಥಿಗಳು ಅಗ್ನಿವೀರ್ ಚಾನೆಲ್ ಮೂಲಕ ಉದ್ಯೋಗಗಳಿಗೆ ಮರು ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅರುಣ್ ಪುರಿ ಅವರು ಯೋಜನೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಮೂರು ಸೇವೆಗಳ ವಯಸ್ಸಿನ ವಿವರವನ್ನು ಕಡಿಮೆ ಮಾಡುವ ಬಗ್ಗೆ ಸಾಕಷ್ಟು ಸಮಯದಿಂದ ಚರ್ಚೆಯಲ್ಲಿದೆ. ಕಾರ್ಗಿಲ್ ಪರಿಶೀಲನಾ ಸಮಿತಿಯು ಸಹ ಅದರ ಬಗ್ಗೆ ಅವಲೋಕನಗಳನ್ನು ಮಾಡಿದೆ ಎಂದು ಹೇಳಿದ್ದಾರೆ.

ಅಗ್ನಿಪಥ ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಯುವಕರು ಪ್ರತಿಭಟನೆ ಕೈಬಿಡುವಂತೆ ಪುರಿ ಮನವಿ ಮಾಡಿದ್ದಾರೆ. ಯೋಜನೆಯಡಿ ಅಗ್ನಿವೀರ್‌ಗಳನ್ನು ಸೇರ್ಪಡೆಗೊಳಿಸುವ ನೌಕಾಪಡೆಯ ಯೋಜನೆಯ ವಿವರಗಳನ್ನು ನೀಡಿದ ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ, ಜೂನ್ 25 ರೊಳಗೆ ನೇಮಕಾತಿಗಾಗಿ ನೌಕಾ ಪ್ರಧಾನ ಕಚೇರಿ ವಿಶಾಲವಾದ ಮಾರ್ಗಸೂಚಿಯನ್ನು ಹೊರತರಲಿದೆ ಎಂದು ಹೇಳಿದರು. ಮೊದಲ ಬ್ಯಾಚ್ ನೇಮಕಗೊಂಡವರು ನವೆಂಬರ್ 21 ರೊಳಗೆ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ನೌಕಾಪಡೆಯು ಈ ಯೋಜನೆಯಡಿಯಲ್ಲಿ ಅಗ್ನಿವೀರ್‌ಗಳಾಗಿ ಪುರುಷರು ಮತ್ತು ಮಹಿಳೆಯರನ್ನು ನೇಮಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಅಗ್ನಿಪಥ್ ಯೋಜನೆಯಡಿ ನೇಮಕಾತಿಗಾಗಿ ಭಾರತೀಯ ವಾಯುಪಡೆಯ ಯೋಜನೆಯ ಬಗ್ಗೆ ಏರ್ ಮಾರ್ಷಲ್ ಎಸ್ ಕೆ ಝಾ ಅವರು ಜೂನ್ 24 ರಂದು ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಲಿದೆ. ನೇಮಕಾತಿಯ ಮೊದಲ ಹಂತದ ಆನ್‌ಲೈನ್ ಪರೀಕ್ಷೆಯ ಪ್ರಕ್ರಿಯೆಯು ಜುಲೈ 24 ರಂದು ಪ್ರಾರಂಭವಾಗುತ್ತದೆ ಎಂದು ಹೇಳಿದರು. ಡಿಸೆಂಬರ್ 30 ರೊಳಗೆ ಮೊದಲ ಬ್ಯಾಚ್ ನೇಮಕಾತಿಗಾಗಿ ತರಬೇತಿಯನ್ನು ಪ್ರಾರಂಭಿಸಲು ನಾವು ಯೋಜಿಸುತ್ತಿದ್ದೇವೆ ಎಂದು ಏರ್ ಮಾರ್ಷಲ್ ಝಾ ಹೇಳಿದರು.

ಸೇನೆಯ ನೇಮಕಾತಿ ಯೋಜನೆ ಕುರಿತು ಲೆಫ್ಟಿನೆಂಟ್ ಜನರಲ್ ಬನ್ಸಿ ಪೊನಪ್ಪ ಮಾತನಾಡಿ, ಸೇನೆಯು ಸೋಮವಾರ ಕರಡು ಅಧಿಸೂಚನೆಯನ್ನು ಹೊರಡಿಸಲಿದೆ. ನಂತರದ ಅಧಿಸೂಚನೆಗಳನ್ನು ಜುಲೈ 1 ರಿಂದ ಪಡೆಯ ವಿವಿಧ ನೇಮಕಾತಿ ಘಟಕಗಳು ಹೊರಡಿಸಲಿವೆ ಎಂದಿದ್ದಾರೆ.

ಅಗ್ನಿಪಥ್ ಯೋಜನೆಯಡಿ ನೇಮಕಾತಿ ರ್ಯಾಲಿಗಳು ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಭಾರತದಾದ್ಯಂತ ನಡೆಯಲಿದೆ. 25,000 ಸಿಬ್ಬಂದಿಯನ್ನು ಒಳಗೊಂಡ ಮೊದಲ ಬ್ಯಾಚ್ ಡಿಸೆಂಬರ್ ಮೊದಲ ಮತ್ತು ಎರಡನೇ ವಾರದಲ್ಲಿ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಳ್ಳಲಿದೆ ಎಂದು ಲೆಫ್ಟಿನೆಂಟ್ ಜನರಲ್ ಪೊನಪ್ಪ ಹೇಳಿದರು. ಬಹಳಷ್ಟು ನೇಮಕಾತಿದಾರರು ಫೆಬ್ರವರಿ 23 ರ ಸುಮಾರಿಗೆ ತಮ್ಮ ತರಬೇತಿಗೆ ಸೇರುತ್ತಾರೆ. ಸುಮಾರು 40,000 ಸಿಬ್ಬಂದಿಯನ್ನು ಆಯ್ಕೆ ಮಾಡಲು ದೇಶಾದ್ಯಂತ ಒಟ್ಟು 83 ನೇಮಕಾತಿ ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ