AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಯೋಜನೆ ದೇಶದಲ್ಲಿ ತರಬೇತಿ ಪಡೆದ ಉಗ್ರರನ್ನು ಹೊಂದುವಂತೆ ಮಾಡುತ್ತದೆ: ರಾಜಸ್ಥಾನದ ಸಚಿವ

ಅಗ್ನಿವೀರರಾಗಿ ಮೂರ್ನಾಲ್ಕು ವರ್ಷ ಕೆಲಸ ಮಾಡಿ ನಂತರ ನಿರುದ್ಯೋಗಿಯಾಗುವುದರ ಬಗ್ಗೆ ಯುವಕರು ಚಿಂತಿತರಾಗಿದ್ದಾರೆ. ಕೇಂದ್ರ ಸರ್ಕಾರ ಯುವ ಜನಾಂಗದ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂದು ಸಚಿವರು ಹೇಳಿದ್ದಾರೆ

ಅಗ್ನಿಪಥ್ ಯೋಜನೆ ದೇಶದಲ್ಲಿ ತರಬೇತಿ ಪಡೆದ ಉಗ್ರರನ್ನು ಹೊಂದುವಂತೆ ಮಾಡುತ್ತದೆ: ರಾಜಸ್ಥಾನದ ಸಚಿವ
ಸಚಿವ ರಾಮಲಾಲ್ ಜಾಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 06, 2022 | 1:10 PM

Share

ಅಗ್ನಿಪಥ್ ಯೋಜನೆ (Agnipath scheme) ಬಗ್ಗೆ ರಾಜಸ್ಥಾನದ (Rajasthan) ಕಂದಾಯ ಸಚಿವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅಗ್ನಿಪಥ್ ಯೋಜನೆಯು ದೇಶದಲ್ಲಿ ತರಬೇತಿ ನೀಡಿದ ಉಗ್ರರನ್ನು ಹೊಂದುವಂತೆ ಮಾಡುತ್ತದೆ ಎಂದು ಸಚಿವ ರಾಮಲಾಲ್ ಜಾಟ್ (Ramlal Jat) ಹೇಳಿದ್ದಾರೆ. ಒಂದು ವರ್ಷ ಕೆಲಸ ಮಾಡಿದ ಸಂಸದ ಮತ್ತು ಶಾಸಕರಿಗೆ ಪಿಂಚಣಿ ಸಿಗುತ್ತಿರುವಾಗ ಅಗ್ನಿವೀರರಿಗೆ ಪಿಂಚಣಿ ಯಾಕಿಲ್ಲ? ಅಗ್ನಿವೀರರಾಗಿ ಮೂರ್ನಾಲ್ಕು ವರ್ಷ ಕೆಲಸ ಮಾಡಿ ನಂತರ ನಿರುದ್ಯೋಗಿಯಾಗುವುದರ ಬಗ್ಗೆ ಯುವಕರು ಚಿಂತಿತರಾಗಿದ್ದಾರೆ. ಕೇಂದ್ರ ಸರ್ಕಾರ ಯುವ ಜನಾಂಗದ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂದು ಸಚಿವರು ಹೇಳಿದ್ದಾರೆ. ಐದು ವರ್ಷ, ನಾಲ್ಕು ವರ್ಷ, ಮೂರು ವರ್ಷ ಎಂದ ನೀವು ಯುವಕರಿಗೆ ಕೆಲಸ ನೀಡುತ್ತಿದ್ದೀರಿ. ಕಡೇ ಪಕ್ಷ ಅವರಿಗೆ ಪಿಂಚಣಿ ನೀಡಿ ಎಂದಿದ್ದಾರೆ ಜಾಟ್.  ಸೇನಾಪಡೆಯಲ್ಲಿ ನಾಲ್ಕು ವರ್ಷಗಳ ಕಾಲ ಅಗ್ನಿವೀರರಾಗಿ ನೇಮಕ ಮಾಡಿಕೊಳ್ಳುವ ಯೋಜನೆಯಾದ ಅಗ್ನಿಪಥ್ ಯೋಜನೆಯನ್ನು ಜೂನ್ 14ರಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಹದಿನೇಳೂವರೆ ವರ್ಷದಿಂದ ಹಿಡಿದು 21ರ ಹರೆಯದ ಯುವಕರನ್ನು ನಾಲ್ಕು ವರ್ಷಗಳ ಕಾಲ ಸೇನಾಪಡೆಯಲ್ಲಿ ನೇಮಕ ಮಾಡುವ ಯೋಜನೆ ಇದಾಗಿದ್ದು, ಹೀಗೆ ನೇಮಕವಾಗುವವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.

ಸಮಯ ಬಂದಾಗ ಇಲ್ಲಿನ ಯುವಕರಿಗೆ ಅರ್ಥವಾಗುತ್ತದೆ. ವಿರೋಧ ಪಕ್ಷವಾದ ನಾವು ಪ್ರತಿಯೊಂದು ವೇದಿಕೆಯಲ್ಲಿಯೂ ಈ ಯೋಜನೆಯನ್ನು ವಿರೋಧಿಸುತ್ತೇವೆ. ರಾಹುಲ್ ಗಾಂಧಿಯವರು ದೇಶದ ಸಮಸ್ಯೆ ಬಗ್ಗೆ ಹೇಳುತ್ತಿದ್ದಾರೆ. ಆ ಸಮಸ್ಯೆಗಳ ಬಗ್ಗೆ ನಾವು ಮಾತನಾಡುತ್ತೇವೆ ಎಂದು ಜಾಟ್ ಹೇಳಿದ್ದಾರೆ

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್